Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರೈಲು ಹಳಿಗೆ ಬಿದ್ದ ಅಂಧ ತಾಯಿಯ ಕಂದಮ್ಮ, ಆಕೆ ಪಾಲಿಗೆ ದೇವರಾದ ಆ ವ್ಯಕ್ತಿ!
ಒಂದು ಕ್ಷಣ ತಡವಾಗಿದ್ದರೂ ಎಂಥ ಘನಘೋರ ಘಟನೆ ನಡೆಯುತ್ತಿತ್ತು ಎಂದು ಊಹಿಸಲೂ ಭಯವಾಗುತ್ತೆ. ಅಂಧ ತಾಯಿಯ ಕೈಹಿಡಿದು ಬರುತ್ತಿದ್ದ ಮಗು ರೈಲ್ವೆ ಹಳಿಗೆ ಬಿದ್ದು ಬಿಡುತ್ತೆ, ಅಲ್ಲಿಂದ ಟ್ರೈನ್ ಬರ್ತಾ ಇರುತ್ತದೆ, ಅಲ್ಲಿಗೆ ಮಿಂಚಿನ ವೇಗದಲ್ಲಿ ಓಡಿ ಬರುವ ರೈಲ್ವೆ ಸಿಬ್ಬಂದಿ ಆ ಮಗು-ತಾಯಿಯ ಪಾಲಿಗೆ ಸಾಕ್ಷಾತ್ ದೇವರಾಗಿದ್ದಾರೆ.
ಆಕೆ ಅಂಧೆ, ಪುಟ್ಟ ಮಗನಿದ್ದಾನೆ, ಆ ಮಗನೇ ಆಕೆಯ ಬದುಕಿನ ಕಣ್ಣುಗಳು, ಪೆನ್ನು ಮಾರಿ ಬದುಕಿ ಜೀವನ ಸಾಗಿಸುವ ಜೀವಗಳು, ರೈಲ್ವೆ ಫ್ಲಾಟ್ಫಾರಂನ ಮಗನ ಕೈಹಿಡಿದು ನಡೆಯುತ್ತಿದ್ದಳು. ಮಗನಿಗೆ 4-5 ವರ್ಷವಿರಬಹುದು. ಅವನ ಕೈ ಹಿಡಿದು ಎಲ್ಲಾ ಕಡೆ ಸಾಗುತ್ತಿದ್ದಳು, ಮಗ ಸ್ವಲ್ಪ ದೊಡ್ಡವನಾದ ಮೇಲೆ ಎಲ್ಲಾ ಕಡೆ ಹೋಗುವಾಗ ಮಗನ ಕೈ ಹಿಡದೇ ಹೋಗುತ್ತಿದ್ದಳು. ಅವನು ನನ್ನ ನಡೆಸಿಕೊಂಡು ಹೋಗುತ್ತಾನೆ ಎಂಬ ಧೈರ್ಯದಲ್ಲಿ ಹೋಗುತ್ತಿದ್ದಳು.

ಹೀಗೆ ರೈಲ್ವೆಫ್ಲಾಟ್ಫಾರಂ ಬಳಿ ನಡೆಯುವಾಗ ಮಗ ಅಚಾನಕ್ಕಾಗಿ ಸ್ಲಿಪ್ ಆಗಿ ಕೆಳಗೆ ಬೀಳುತ್ತಾನೆ. ತಾಯಿ ಮಗನಿಗಾಗಿ ತಡಕಾಡುತ್ತಿರುತ್ತಾಳೆ, ಅತ್ತ ಕಡೆಯಿಂದ ವೇಗವಾಗಿ ಟ್ರೈನ್ ಬರ್ತಾ ಇದೆ, ಮಗು ಬಿದ್ದಿದ್ದನ್ನು ನೋಡಿದ ರೈಲ್ವೆ ಸಿಬ್ಬಂದಿ ಓಡೋಡಿ ಬಂದಿ ಆ ಮಗುವನ್ನು ಎತ್ತಿ ಫ್ಲಾಟ್ಫಾರಂ ಬಿಟ್ಟು ತಾವೂ ಹತ್ತುತ್ತಾರೆ, ಇವೆಲ್ಲಾ ಕ್ಷಣಾರ್ಧದಲ್ಲಿ ನಡೆಯುತ್ತದೆ. ಒಂದು ಕ್ಷಣ ತಡವಾಗಿದ್ದರೂ ಮಗುವಿನ ಪ್ರಾಣ ಹೋಗುತ್ತಿತ್ತು, ಜೊತೆಗೆ ಆ ವ್ಯಕ್ತಿಯ ಪ್ರಾಣವೂ ಹೋಗುತ್ತಿತ್ತು, ಆದರೆ ಕಣ್ಣಿಲ್ಲದ ಆ ತಾಯಿ ಪಾಲಿಗೆ ದೇವರಾಗಿ ಬಂದು ಮಗುವಿನ ರಕ್ಷಣೆ ಮಾಡಿದ್ದಾರೆ ಆ ವ್ಯಕ್ತಿ.
ಮಗುವಿನ ಪ್ರಾಣವನ್ನು ರಕ್ಷಿಸಿದ ಆ ವ್ಯಕ್ತಿ ಹೆಸರು ಮಯೂರ್ ಶೆಲ್ಕೆ. ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಧೈರ್ಯ ಮಾಡಿ ಮಗುವಿನ ರಕ್ಷಣೆ ಮಾಡಿದ್ದಕ್ಕೆ ಸೆಂಟ್ರಲ್ ರೈಲ್ವೆ ಮಯೂರ್ ಶೆಲ್ಕೆಯವರಿಗ 50 ಸಾವಿರ ಬಹುಮಾನ ನೀಡಿ ಗೌರವಿಸಲಾಯಿತು. ಅಲ್ಲಿಯೂ ಆ ವ್ಯಕ್ತಿ ದೊಡ್ಡ ಮನಸ್ಸು ಮಾಡಿದ್ದಾರೆ. ಆ 50 ಸಾವಿರ ರುಪಾಯಿಯನ್ನು ಕೂಡ ಆ ಗುವಿನ ಶಿಕ್ಷಣಕ್ಕೆ ಅಂತ ಆ ಅಂಧ ತಾಯಿಗೆ ನೀಡಿದ್ದಾರೆ. ದೇವರು ಯಾವುದೋ ಒಂದು ರೂಪದಲ್ಲಿ ಬರುತ್ತಾರೆ ಎಂದು ಹೇಳಲಾಗುವುದು. ಆ ಅಂಧ ಮಹಿಳೆಯ ಪಾಲಿಗೆ ಮಯೂರ್ ಶೆಲ್ಕೆ ದೇವರಾಗಿದ್ದಾರೆ.
ತಾನು ಇಷ್ಟೆಲ್ಲಾ ಸಾಹಸ ಮಾಡಿ ಮಗುವಿನ ಪ್ರಾಣ ಉಳಿಸಿ, ತನಗೆ ಬಂದ ರಿವಾರ್ಡ್ ಅನ್ನು ಕೂಡ ಆ ಮಗುವಿಗೆ ನೀಡಿದ ಮಯೂರ್ ಶೆಲ್ಕ್ ತಮ್ಮ ಪಾಡಿಗೆ ತಾವಿದ್ದರು. ಮನೆಗೆ ಹೋಗಿ ತಾನು ಮಾಡಿದ ಕೆಲಸವನ್ನು ಕೊಚ್ಚಿಕೊಳ್ಳಲಿಲ್ಲ, ಈ ವೀಡಿಯೋ ವೈರಲ್ ಆದ ಮೇಲಷ್ಟೇ ಅವರ ಕುಟುಂಬಕ್ಕೆ ಈ ವಿಷಯ ತಿಳಿಯಿತು. ಮಾನವೀಯತೆ ಗುಣದಿಂದಾಗಿ ಎಲ್ಲರ ಮನಗೆದ್ದಿದ್ದಾರೆ ಮಯೂರ್ ಶೆಲ್ಕ್.
ಇದು 2021ರಲ್ಲಿ ನಡೆದ ಘಟನೆ, ಈ ವೀಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ.



Click it and Unblock the Notifications