Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
ಸೋಮವಾರ ಈ 5 ಶಿವ ಮಂತ್ರ ಪಠಿಸಿದರೆ ಕಷ್ಟಗಳು ದೂರಾಗುವುದು
ಸೋಮವಾರ ಶಿವನ ದಿನ. ಈ ದಿನ ಶಿವ ಪೂಜೆ ತುಂಬಾನೇ ಶ್ರೇಷ್ಠ ಎಂದು ಹೇಳಲಾಗುವುದು. ಅಲ್ಲದೆ ಶಿವನು ತನ್ನ ಭಕ್ತರಿಗೆ ಬೇಗನೆ ಒಲಿಯುತ್ತಾನೆ ಕೂಡ. ಯಾರು ಶಿವನನ್ನು ಭಕ್ತಿಯಿಂದ ಆರಾಧಿಸುತ್ತಾರೋ ಅವರಿಗೆ ಶಿವನ ರಕ್ಷಾಕವಚ ಇದ್ದೇ ಇರುತ್ತದೆ.
ನೀವು ಸೋಮವಾರ ಶಿವನ ವಿಶೇಷ ಕೃಪೆಗೆ ಪಾತ್ರರಾದರೆ ಹಲವು ಬಗೆಯ ಸಮಸ್ಯೆಗಳಿದ್ದರೆ ಅದರಿಂದ ಮುಕ್ತಿ ಪಡೆಯಬಹುದು. ಆರೋಗ್ಯ ಸಮಸ್ಯೆ, ಹಣದ ಸಮಸ್ಯೆ, ಸಂಸಾರದಲ್ಲಿ ಸಮಸ್ಯೆ ಹೀಗೆ ಸಕಲ ಸಮಸ್ಯೆಗೆ ಪರಿಹಾರ ಶಿವ ಮಂತ್ರದಲ್ಲಿದೆ. ಸೋಮವಾರ ಈ ಮಂತ್ರಗಳನ್ನು ಪಠಿಸುವುದರಿಂದ ತುಂಬಾನೇ ಒಳ್ಳೆಯ ಫಲವನ್ನು ಪಡೆಯಬಹುದು.

1.ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ನಾಮ ಜಪಿಸುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದು. ಈ ಮಂತ್ರ ಹೇಳಿದಾಗ ನಿಮ್ಮಲ್ಲಿ ಧನಾತ್ಮಕ ಶಕ್ತಿ ಹರಿದಂತಾಗುವುದು. ಓಂ ನಮಃ ಶಿವಾಯವನ್ನು ನೀವು ಎಲ್ಲಿ ಬೇಕಾದರೂ ಯಾವಾಗ ಬೇಕಾದರೂ ಹೇಳಬಹುದು.
2. ಮಹಾ ಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ಈ ಮಂತ್ರ ಪಠಿಸಲು ಕೆಲವು ನಿಯಮಗಳಿವೆ. ಈ ಮಂತ್ರವನ್ನು ಯಾವಾಗ ಮತ್ತು ಹೇಗೆ ಹೇಳಬೇಕು ಎಂಬುದನ್ನು ತಿಳಿದಿರಬೇಕು, ಅಲ್ಲದೆ ಸ್ಪಷ್ಟವಾಗಿ ಪಠಿಸಬೇಕು. ಸಂಸ್ಕ್ರತ ಶಬ್ದವಾಗಿರುವ ಮಹಾ ಮೃತ್ಯುಂಜಯ ಎಂದರೆ ಸಾವನ್ನು ಗೆಲ್ಲುವವನು ಎಂದರ್ಥ. ಈ ಮಂತ್ರ ಪಠಣೆ ಮಾಡುವುದರಿಂದ ಆ ವ್ಯಕ್ತಿ ಸಾವಿನ ಭಯವನ್ನು ಗೆಲ್ಲುತ್ತಾನೆ. ಅಲ್ಲದೆ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಚೇತರಿಸಿಕೊಳ್ಳಲು ಈ ಮಂತ್ರ ಪಠಿಸಲಾಗುವುದು.
3. ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ರುದ್ರ ತಾಂಡವನನ್ನು ಈ ಮಂತ್ರ ಹೇಳಿ ಪಠಿಸಿ. ಈ ಮಂತ್ರ ಪಠಿಸುವುದರಿಂದ ನಿಮ್ಮ ಇಷ್ಟಾರ್ಥಗಳು ನೆರವೇರುವುದು.
4, ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಗಾಯತ್ರಿ ಮಂತ್ರ ತುಂಬಾ ಪವರ್ಫುಲ್ ಮಂತ್ರವಾಗಿದೆ. ಈ ಶಕ್ತಿ ಶಾಲಿ ಮಂತ್ರ ಪಠಿಸುವ ಮೂಲಕ ಶಿವನ ಕೃಪೆಗೆ ಪಾತ್ರರಾಗಬಹುದು. ಈ ಮಂತ್ರ ಪಠಿಸುವುದರಿಂದ ಮನಸ್ಸಿಗೆ ಶಾಂತಿ ದೊರೆಯುವುದು. ಮನೆಯಲ್ಲಿರುವ ಕೌಟುಂಬಿಕ ಸಮಸ್ಯೆ ದೂರಾಗುವುದು.
5. ಶಿವ ಧ್ಯಾನ ಮಂತ್ರ
ಕರ್ಚರನ್ಕೃತಂ ವಾ ಕೈಜಮ್ ಕರ್ಮಜಂ ವಾ ಶ್ರಾವಣ್ಣನಂಜಂ ವಾ ಮಾನ್ಸಮ್ ವಾ ಪರಧಮ್ ವಿಹಿತಂ ವಿಹಿತಂ ವಾ ಸರ್ವ್ ಮೆಟಾಟ್ ಕ್ಷಮಾಸ್ವ ಜೇ ಜೇ ಕರುನಾಬ್ಧೆ ಶ್ರೀ ಮಹಾದೇವ್ ಶಂಭೋ
ನೀವು ಜೀವನದಲ್ಲಿ ಹಲವು ಸೋಲುಗಳನ್ನು ಅನುಭವಿಸುತ್ತಿದ್ದರೆ ಈ ಮಂತ್ರ ಹೇಳಿ ಶಿವನ ಧ್ಯಾನ ಮಾಡುವುದರಿಂದ ಆ ಸೋಲುಗಳನ್ನು ಜಯಿಸುವ ಶಕ್ತಿ ಶಿವ ನೀಡುತ್ತಾನೆ. ನಿಮ್ಮ ಜೀವನದಲ್ಲಿ ಯಶಸ್ಸು ದೊರೆಯುತ್ತದೆ.
ಈ ಮಂತ್ರಗಳನ್ನು ಯಾವುದೇ ದಿನ ಪಠಿಸಬಹುದು, ಆದರೆ ಸೋಮವಾರ ಶಿವನ ದಿನವಾಗಿರುವುದರಿಂದ ಸೋಮವಾರ ಪಠಿಸಿದರೆ ಇನ್ನಷ್ಟು ಒಳ್ಳೆಯದು.



Click it and Unblock the Notifications
