Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಸೋಮವಾರ ಈ 5 ಶಿವ ಮಂತ್ರ ಪಠಿಸಿದರೆ ಕಷ್ಟಗಳು ದೂರಾಗುವುದು
ಸೋಮವಾರ ಶಿವನ ದಿನ. ಈ ದಿನ ಶಿವ ಪೂಜೆ ತುಂಬಾನೇ ಶ್ರೇಷ್ಠ ಎಂದು ಹೇಳಲಾಗುವುದು. ಅಲ್ಲದೆ ಶಿವನು ತನ್ನ ಭಕ್ತರಿಗೆ ಬೇಗನೆ ಒಲಿಯುತ್ತಾನೆ ಕೂಡ. ಯಾರು ಶಿವನನ್ನು ಭಕ್ತಿಯಿಂದ ಆರಾಧಿಸುತ್ತಾರೋ ಅವರಿಗೆ ಶಿವನ ರಕ್ಷಾಕವಚ ಇದ್ದೇ ಇರುತ್ತದೆ.
ನೀವು ಸೋಮವಾರ ಶಿವನ ವಿಶೇಷ ಕೃಪೆಗೆ ಪಾತ್ರರಾದರೆ ಹಲವು ಬಗೆಯ ಸಮಸ್ಯೆಗಳಿದ್ದರೆ ಅದರಿಂದ ಮುಕ್ತಿ ಪಡೆಯಬಹುದು. ಆರೋಗ್ಯ ಸಮಸ್ಯೆ, ಹಣದ ಸಮಸ್ಯೆ, ಸಂಸಾರದಲ್ಲಿ ಸಮಸ್ಯೆ ಹೀಗೆ ಸಕಲ ಸಮಸ್ಯೆಗೆ ಪರಿಹಾರ ಶಿವ ಮಂತ್ರದಲ್ಲಿದೆ. ಸೋಮವಾರ ಈ ಮಂತ್ರಗಳನ್ನು ಪಠಿಸುವುದರಿಂದ ತುಂಬಾನೇ ಒಳ್ಳೆಯ ಫಲವನ್ನು ಪಡೆಯಬಹುದು.

1.ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ನಾಮ ಜಪಿಸುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದು. ಈ ಮಂತ್ರ ಹೇಳಿದಾಗ ನಿಮ್ಮಲ್ಲಿ ಧನಾತ್ಮಕ ಶಕ್ತಿ ಹರಿದಂತಾಗುವುದು. ಓಂ ನಮಃ ಶಿವಾಯವನ್ನು ನೀವು ಎಲ್ಲಿ ಬೇಕಾದರೂ ಯಾವಾಗ ಬೇಕಾದರೂ ಹೇಳಬಹುದು.
2. ಮಹಾ ಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ಈ ಮಂತ್ರ ಪಠಿಸಲು ಕೆಲವು ನಿಯಮಗಳಿವೆ. ಈ ಮಂತ್ರವನ್ನು ಯಾವಾಗ ಮತ್ತು ಹೇಗೆ ಹೇಳಬೇಕು ಎಂಬುದನ್ನು ತಿಳಿದಿರಬೇಕು, ಅಲ್ಲದೆ ಸ್ಪಷ್ಟವಾಗಿ ಪಠಿಸಬೇಕು. ಸಂಸ್ಕ್ರತ ಶಬ್ದವಾಗಿರುವ ಮಹಾ ಮೃತ್ಯುಂಜಯ ಎಂದರೆ ಸಾವನ್ನು ಗೆಲ್ಲುವವನು ಎಂದರ್ಥ. ಈ ಮಂತ್ರ ಪಠಣೆ ಮಾಡುವುದರಿಂದ ಆ ವ್ಯಕ್ತಿ ಸಾವಿನ ಭಯವನ್ನು ಗೆಲ್ಲುತ್ತಾನೆ. ಅಲ್ಲದೆ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಚೇತರಿಸಿಕೊಳ್ಳಲು ಈ ಮಂತ್ರ ಪಠಿಸಲಾಗುವುದು.
3. ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ರುದ್ರ ತಾಂಡವನನ್ನು ಈ ಮಂತ್ರ ಹೇಳಿ ಪಠಿಸಿ. ಈ ಮಂತ್ರ ಪಠಿಸುವುದರಿಂದ ನಿಮ್ಮ ಇಷ್ಟಾರ್ಥಗಳು ನೆರವೇರುವುದು.
4, ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಗಾಯತ್ರಿ ಮಂತ್ರ ತುಂಬಾ ಪವರ್ಫುಲ್ ಮಂತ್ರವಾಗಿದೆ. ಈ ಶಕ್ತಿ ಶಾಲಿ ಮಂತ್ರ ಪಠಿಸುವ ಮೂಲಕ ಶಿವನ ಕೃಪೆಗೆ ಪಾತ್ರರಾಗಬಹುದು. ಈ ಮಂತ್ರ ಪಠಿಸುವುದರಿಂದ ಮನಸ್ಸಿಗೆ ಶಾಂತಿ ದೊರೆಯುವುದು. ಮನೆಯಲ್ಲಿರುವ ಕೌಟುಂಬಿಕ ಸಮಸ್ಯೆ ದೂರಾಗುವುದು.
5. ಶಿವ ಧ್ಯಾನ ಮಂತ್ರ
ಕರ್ಚರನ್ಕೃತಂ ವಾ ಕೈಜಮ್ ಕರ್ಮಜಂ ವಾ ಶ್ರಾವಣ್ಣನಂಜಂ ವಾ ಮಾನ್ಸಮ್ ವಾ ಪರಧಮ್ ವಿಹಿತಂ ವಿಹಿತಂ ವಾ ಸರ್ವ್ ಮೆಟಾಟ್ ಕ್ಷಮಾಸ್ವ ಜೇ ಜೇ ಕರುನಾಬ್ಧೆ ಶ್ರೀ ಮಹಾದೇವ್ ಶಂಭೋ
ನೀವು ಜೀವನದಲ್ಲಿ ಹಲವು ಸೋಲುಗಳನ್ನು ಅನುಭವಿಸುತ್ತಿದ್ದರೆ ಈ ಮಂತ್ರ ಹೇಳಿ ಶಿವನ ಧ್ಯಾನ ಮಾಡುವುದರಿಂದ ಆ ಸೋಲುಗಳನ್ನು ಜಯಿಸುವ ಶಕ್ತಿ ಶಿವ ನೀಡುತ್ತಾನೆ. ನಿಮ್ಮ ಜೀವನದಲ್ಲಿ ಯಶಸ್ಸು ದೊರೆಯುತ್ತದೆ.
ಈ ಮಂತ್ರಗಳನ್ನು ಯಾವುದೇ ದಿನ ಪಠಿಸಬಹುದು, ಆದರೆ ಸೋಮವಾರ ಶಿವನ ದಿನವಾಗಿರುವುದರಿಂದ ಸೋಮವಾರ ಪಠಿಸಿದರೆ ಇನ್ನಷ್ಟು ಒಳ್ಳೆಯದು.



Click it and Unblock the Notifications