Latest Updates
-
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ!
ಸೋಮವಾರ ಈ 5 ಶಿವ ಮಂತ್ರ ಪಠಿಸಿದರೆ ಕಷ್ಟಗಳು ದೂರಾಗುವುದು
ಸೋಮವಾರ ಶಿವನ ದಿನ. ಈ ದಿನ ಶಿವ ಪೂಜೆ ತುಂಬಾನೇ ಶ್ರೇಷ್ಠ ಎಂದು ಹೇಳಲಾಗುವುದು. ಅಲ್ಲದೆ ಶಿವನು ತನ್ನ ಭಕ್ತರಿಗೆ ಬೇಗನೆ ಒಲಿಯುತ್ತಾನೆ ಕೂಡ. ಯಾರು ಶಿವನನ್ನು ಭಕ್ತಿಯಿಂದ ಆರಾಧಿಸುತ್ತಾರೋ ಅವರಿಗೆ ಶಿವನ ರಕ್ಷಾಕವಚ ಇದ್ದೇ ಇರುತ್ತದೆ.
ನೀವು ಸೋಮವಾರ ಶಿವನ ವಿಶೇಷ ಕೃಪೆಗೆ ಪಾತ್ರರಾದರೆ ಹಲವು ಬಗೆಯ ಸಮಸ್ಯೆಗಳಿದ್ದರೆ ಅದರಿಂದ ಮುಕ್ತಿ ಪಡೆಯಬಹುದು. ಆರೋಗ್ಯ ಸಮಸ್ಯೆ, ಹಣದ ಸಮಸ್ಯೆ, ಸಂಸಾರದಲ್ಲಿ ಸಮಸ್ಯೆ ಹೀಗೆ ಸಕಲ ಸಮಸ್ಯೆಗೆ ಪರಿಹಾರ ಶಿವ ಮಂತ್ರದಲ್ಲಿದೆ. ಸೋಮವಾರ ಈ ಮಂತ್ರಗಳನ್ನು ಪಠಿಸುವುದರಿಂದ ತುಂಬಾನೇ ಒಳ್ಳೆಯ ಫಲವನ್ನು ಪಡೆಯಬಹುದು.

1.ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ನಾಮ ಜಪಿಸುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದು. ಈ ಮಂತ್ರ ಹೇಳಿದಾಗ ನಿಮ್ಮಲ್ಲಿ ಧನಾತ್ಮಕ ಶಕ್ತಿ ಹರಿದಂತಾಗುವುದು. ಓಂ ನಮಃ ಶಿವಾಯವನ್ನು ನೀವು ಎಲ್ಲಿ ಬೇಕಾದರೂ ಯಾವಾಗ ಬೇಕಾದರೂ ಹೇಳಬಹುದು.
2. ಮಹಾ ಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ಈ ಮಂತ್ರ ಪಠಿಸಲು ಕೆಲವು ನಿಯಮಗಳಿವೆ. ಈ ಮಂತ್ರವನ್ನು ಯಾವಾಗ ಮತ್ತು ಹೇಗೆ ಹೇಳಬೇಕು ಎಂಬುದನ್ನು ತಿಳಿದಿರಬೇಕು, ಅಲ್ಲದೆ ಸ್ಪಷ್ಟವಾಗಿ ಪಠಿಸಬೇಕು. ಸಂಸ್ಕ್ರತ ಶಬ್ದವಾಗಿರುವ ಮಹಾ ಮೃತ್ಯುಂಜಯ ಎಂದರೆ ಸಾವನ್ನು ಗೆಲ್ಲುವವನು ಎಂದರ್ಥ. ಈ ಮಂತ್ರ ಪಠಣೆ ಮಾಡುವುದರಿಂದ ಆ ವ್ಯಕ್ತಿ ಸಾವಿನ ಭಯವನ್ನು ಗೆಲ್ಲುತ್ತಾನೆ. ಅಲ್ಲದೆ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಚೇತರಿಸಿಕೊಳ್ಳಲು ಈ ಮಂತ್ರ ಪಠಿಸಲಾಗುವುದು.
3. ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ರುದ್ರ ತಾಂಡವನನ್ನು ಈ ಮಂತ್ರ ಹೇಳಿ ಪಠಿಸಿ. ಈ ಮಂತ್ರ ಪಠಿಸುವುದರಿಂದ ನಿಮ್ಮ ಇಷ್ಟಾರ್ಥಗಳು ನೆರವೇರುವುದು.
4, ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಗಾಯತ್ರಿ ಮಂತ್ರ ತುಂಬಾ ಪವರ್ಫುಲ್ ಮಂತ್ರವಾಗಿದೆ. ಈ ಶಕ್ತಿ ಶಾಲಿ ಮಂತ್ರ ಪಠಿಸುವ ಮೂಲಕ ಶಿವನ ಕೃಪೆಗೆ ಪಾತ್ರರಾಗಬಹುದು. ಈ ಮಂತ್ರ ಪಠಿಸುವುದರಿಂದ ಮನಸ್ಸಿಗೆ ಶಾಂತಿ ದೊರೆಯುವುದು. ಮನೆಯಲ್ಲಿರುವ ಕೌಟುಂಬಿಕ ಸಮಸ್ಯೆ ದೂರಾಗುವುದು.
5. ಶಿವ ಧ್ಯಾನ ಮಂತ್ರ
ಕರ್ಚರನ್ಕೃತಂ ವಾ ಕೈಜಮ್ ಕರ್ಮಜಂ ವಾ ಶ್ರಾವಣ್ಣನಂಜಂ ವಾ ಮಾನ್ಸಮ್ ವಾ ಪರಧಮ್ ವಿಹಿತಂ ವಿಹಿತಂ ವಾ ಸರ್ವ್ ಮೆಟಾಟ್ ಕ್ಷಮಾಸ್ವ ಜೇ ಜೇ ಕರುನಾಬ್ಧೆ ಶ್ರೀ ಮಹಾದೇವ್ ಶಂಭೋ
ನೀವು ಜೀವನದಲ್ಲಿ ಹಲವು ಸೋಲುಗಳನ್ನು ಅನುಭವಿಸುತ್ತಿದ್ದರೆ ಈ ಮಂತ್ರ ಹೇಳಿ ಶಿವನ ಧ್ಯಾನ ಮಾಡುವುದರಿಂದ ಆ ಸೋಲುಗಳನ್ನು ಜಯಿಸುವ ಶಕ್ತಿ ಶಿವ ನೀಡುತ್ತಾನೆ. ನಿಮ್ಮ ಜೀವನದಲ್ಲಿ ಯಶಸ್ಸು ದೊರೆಯುತ್ತದೆ.
ಈ ಮಂತ್ರಗಳನ್ನು ಯಾವುದೇ ದಿನ ಪಠಿಸಬಹುದು, ಆದರೆ ಸೋಮವಾರ ಶಿವನ ದಿನವಾಗಿರುವುದರಿಂದ ಸೋಮವಾರ ಪಠಿಸಿದರೆ ಇನ್ನಷ್ಟು ಒಳ್ಳೆಯದು.



Click it and Unblock the Notifications