Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮನೆಯಲ್ಲಿ ಈ ಅನಾಹುತಗಳಾದರೆ ಧನ ನಷ್ಟ ಗ್ಯಾರಂಟಿ!
ಅನೇಕ ಬಾರಿ ನಮ್ಮ ಜೀವನದಲ್ಲಿ ಕಾಕತಾಳಿಯವೆಂಬಂತೆ ಕೆಲವೊಂದು ಘಟನೆಗಳು ನಡೆದು ಹೋಗುತ್ತೆ. ಹೆಚ್ಚಿನ ಸಂದರ್ಭದಲ್ಲಿ ನಾವು ಈ ಬಗ್ಗೆ ತಲೆಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ. ಆದರೆ ನಿಮಗೊತ್ತಾ ಇದು ನೇರವಾಗಿ ನಮ್ಮ ಸಾಮಾಜಿಕ ಹಾಗೂ ಆರ್ಥಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ಈ ರೀತಿಯ ಕಾಕತಾಳಿಯ ಘಟನೆಗಳು ಅನೇಕ ಬಾರಿ ನಮ್ಮನ್ನು ಎಚ್ಚರಿಸುತ್ತದೆ. ಏನಾದರೂ ಕೆಟ್ಟ ಘಟನೆ ನಮ್ಮ ಬದುಕಿನಲ್ಲಿ ಆಗುತ್ತೆ ಅನ್ನೋದ್ರ ಸೂಚನೆಯನ್ನು ನೀಡುತ್ವೆ. ಅಷ್ಟಕ್ಕೂ ಕಾಕತಾಳಿಯ ಘಟನೆಗಳನ್ನು ನಾವು ಯಾಕೆ ನಿರ್ಲಕ್ಷಿಸಬಾರದು. ಇದು ನಮಗೆ ಎಂತಹ ಸೂಚನೆಯನ್ನು ನೀಡುತ್ವೆ ಅನ್ನೋದನ್ನು ತಿಳಿಯೋಣ.
ಕೈಯಲ್ಲಿರೋ ಕಪ್ ಜಾರಿ ಬಿದ್ದು ಒಡೆಯುವುದು!
ಅನೇಕ ಬಾರಿ ನಮ್ಮ ಕೈಯಲ್ಲಿರುವ ಕಪ್ ಅಥವಾ ಗ್ಲಾಸ್ ಜಾರಿ ಬಿದ್ದು ಒಡೆದು ಹೋಗುತ್ತದೆ. ಇದರ ಜೊತೆಗೆ ಅದ್ರಲ್ಲಿರೋ ನೀರು ಕೂಡ ಕೆಳಗೆ ಬೀಳುತ್ತದೆ. ಇದನ್ನು ಯಾವತ್ತಿಗೂ ಶುಭ ಸೂಚನೆಯೆಂದು ಪರಿಗಣಿಸೋದಿಲ್ಲ.
ಇದರರ್ಥ ಮುಂದಿನ ದಿನಗಳಲ್ಲಿ ನಿಮ್ಮ ಕುಟುಂಬ ಸದಸ್ಯರು ಅನಾರೋಗ್ಯಕ್ಕೆ ಒಳಗಾಗಬಹುದು. ಮತ್ತು ಆರ್ಥಿಕ ಸಮಸ್ಯೆಗಳನ್ನು ಸಹ ಎದುರಿಸಬೇಕಾಗಬಹುದು. ಎಂಬುವುದನ್ನು ಸೂಚಿಸುತ್ತದೆ. ಈ ವಿಪತ್ತನ್ನು ತಪ್ಪಿಸಲು ನೀವು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರವನ್ನು ನೀಡಿ. ಮತ್ತು ನಿಮ್ಮ ನೆಚ್ಚಿನ ದೇವರನ್ನು ಭಕ್ತಿಯಿಂದ ಪ್ರಾರ್ಥಿಸಿ.
ಹಾಲು ಅಥವಾ ಚಹಾ ಹೊರಚೆಲ್ಲುವುದು!
ಹಾಲು ಅಥವಾ ಚಹಾ ಕುದಿಯುತ್ತಿರುವ ಸಂದರ್ಭದಲ್ಲಿ ಅದೇನಾದ್ರೂ ಹೊರ ಚೆಲ್ಲಿದರೆ ಅದನ್ನು ಕೆಟ್ಟ ಅಥವಾ ಅಶುಭ ಶಕುನವೆಂದು ಪರಿಗಣಿಸಲಾಗುತ್ತದೆ. ಹಾಲು ಮತ್ತು ಚಹಾ ಕುದಿಯುತ್ತಿರುವ ಸಂದರ್ಭದಲ್ಲಿ ಹೊರ ಚೆಲ್ಲಿದರೆ ಮನೆಯ ಸಂತೋಷ ಮತ್ತು ಶಾಂತಿ ಹಾಳಾಗುತ್ತಂತೆ.
ಇದರ ಜೊತೆಗೆ ಕುಟುಂಬ ಸದಸ್ಯರ ನಡುವೆ ಜಗಳಗಳು ಪ್ರಾರಂಭವಾಗುತ್ತವೆ. ಹಾಲು ಚಂದ್ರನನ್ನು ಪ್ರತಿನಿಧಿಸುತ್ತದೆ. ಮತ್ತು ಚಂದ್ರನು ಮನಸ್ಸಿಗೆ ಕಾರಣವಾದ ಗ್ರಹವಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಸೋರಿಕೆಯಿಂದಾಗಿ ವ್ಯಕ್ತಿಯು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಮತ್ತು ಅವನ ಮನಸ್ಸಿನಲ್ಲಿ ಅನೇಕ ನಕಾರಾತ್ಮಕ ಆಲೋಚನೆಗಳು ಬರುತ್ತಂತೆ.
ಗಾಜು ಒಡೆದರೆ ಏನರ್ಥ!
ಒಂದು ವೇಳೆ ಗಾಜು ಅಥವಾ ಕನ್ನಡಿ ಇದ್ದಕ್ಕಿದ್ದಂತೆ ಒಡೆದರೆ ಅಥವಾ ಮನೆಯ ಕಿಟಕಿಯ ಗಾಜು ಒಡೆದರೆ ಅದನ್ನು ಮಂಗಳಕರ ಚಿಹ್ನೆ ಎಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಯಾವುದೇ ಗಾಜು ಒಡೆದರೆ ಬರಲಿರುವ ಬಿಕ್ಕಟ್ಟು ನಿವಾರಣೆಯಾಗಿದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಇದಕ್ಕಾಗಿ ದೇವರಿಗೆ ಧನ್ಯವಾದ ಹೇಳಿ ಪೂಜೆಯ ಕೋಣೆಯಲ್ಲಿ ದೀಪ ಹಚ್ಚಿ ಅನ್ನವನ್ನು ಅರ್ಪಿಸಿ.
ಪೂಜೆಯ ತಟ್ಟೆ ಕೆಳಗೆ ಬೀಳುವುದು!
ಕೈಯಿಂದ ಪೂಜೆಯ ವಸ್ತು ಅಥವಾ ಪೂಜೆಯ ತಟ್ಟೆ ಕೆಳಗೆ ಬಿದ್ದರೆ ಅದನ್ನು ಕೆಟ್ಟ ಶಕುನವೆಂದು ಪರಿಗಣಿಸಲಾಗುತ್ತದೆ. ಇದರರ್ಥ ಕುಟುಂಬವು ಭವಿಷ್ಯದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಅಷ್ಟೇ ಅಲ್ಲದೇ, ಪೂಜೆಯ ದೀಪವು ಇದ್ದಕ್ಕಿದ್ದಂತೆ ಆರಿಹೋದರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.
ಹೀಗಾಗಿ ದೇವರಲ್ಲಿ ಪ್ರಾರ್ಥಿಸಿ ಮತ್ತು ಕ್ಷಮೆಯನ್ನು ಕೇಳಿ. ದೇವರ ಆಶೀರ್ವಾದ ನಿಮ್ಮ ಮೇಲಿದ್ದರೆ ನೀವು ಎಲ್ಲಾ ರೀತಿಯ ಸಮಸ್ಯೆಗಳಿಂದ ಹೊರ ಬರೋದಕ್ಕೆ ಸಾಧ್ಯವಾಗುತ್ತದೆ.



Click it and Unblock the Notifications