Latest Updates
-
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಮನೆಯಲ್ಲಿ ಹೀಗಿದ್ದರೆ ಪಿತೃದೋಷವಿದೆ: ಜುಲೈ 17, ಆಷಾಢ ಅಮವಾಸ್ಯೆಯಂದು ಈ ಪರಿಹಾರ ಮಾಡಿ
ಆಷಾಢ ಅಮವಾಸ್ಯೆ ಹಲವಾರು ಕಾರಣಗಳಿಂದ ತುಂಬಾ ಮಹತ್ವವನ್ನು ಹೊಂದಿದೆ. ಈ ದಿನ ಭೀಮನ ಅಮವಾಸ್ಯೆ ಆಚರಿಸಲಾಗುವುದು ಹಾಗೂ ಈ ದಿನ ಪಿತೃ ತರ್ಪಣ ಕೂಡ ಮಾಡಲಾಗುವುದು. ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು. ಈ ವರ್ಷ ಆಷಾಢ ಅಮವಾಸ್ಯೆಯನ್ನು ಜುಲೈ 17ರಂದು ಆಚರಿಸಲಾಗುವುದು.
ಆಷಾಢ ಅಮವಾಸ್ಯೆಗೆ ಪಿತೃತರ್ಪಣ ಮಾಡುವುದರ ಹಿಂದಿನ ಉದ್ದೇಶವೇನು? ಪಿತೃದೋಷವಿದ್ದರೆ ಏನೆಲ್ಲಾ ತೊಂದರೆಗಳಾಗುವುದು? ಈ ತೊಂದರೆಗಳ ನಿವಾರಣೆಗೆ ಆಷಾಢ ಅಮವಾಸ್ಯೆಯಂದು ಏನು ಪರಿಹಾರ ಮಾಡಬೇಕು ಎಂದು ನೋಡೋಣ ಬನ್ನಿ:

ಆಷಾಢ ಅಮವಾಸ್ಯೆ
ಆಷಾಢ ಅಮವಾಸ್ಯೆ ಪಿತೃತರ್ಪಣಕ್ಕೆ ತುಂಬಾ ಶ್ರೇಷ್ಠವಾದ ದಿನವೆಂದು ನಂಬಲಾಗಿದೆ. ಆಷಾಢ ಅಮವಾಸ್ಯೆಯಂದು ಶ್ರಾದ್ಧಕಾರ್ಯ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುತ್ತದೆ ಅಷ್ಟು ಮಾತ್ರವಲ್ಲ ಅವರ ಆಶೀರ್ವಾದದಿಂದ ಒಳಿತಾಗುವುದು ಎಂದು ನಂಬಲಾಗಿದೆ.
ಪಿತೃದೋಷವಿದ್ದರೆ ಕುಟುಂಬಕ್ಕೆ ಒಳಿತಾಗಲ್ಲ ಎಂದು ಹೇಳಲಾಗುವುದು, ಈ ಬಗೆಯ ಲಕ್ಷಣಗಳು ಕಂಡು ಬಂದರೆ ಪಿತೃದೋಷವಿದೆ ಎಂದು ಹೇಳಲಾಗುವುದು:
* ವೃತ್ತಿ ಜೀವನದಲ್ಲಿ ಅನೇಕ ಅಡೆತಡೆಗಳಿಂದ ಪ್ರಗತಿಗೆ ತೊಂದರೆಯಾಗುವುದು
* ವೈವಾಜಿಕ ಜೀವನ ಸರಿಯಿಲ್ಲದಿರುವುದು
* ಸಂತಾಭಾಗ್ಯ ಇಲ್ಲದಿರುವುದು
* ಆಗಾಗ ಗರ್ಭಪಾತ
* ಮನೆಯಲ್ಲಿ ಸದಾ ಜಗಳ, ನೆಮ್ಮದಿಯೇ ಇಲ್ಲದಿರುವುದು
* ಮನೆಯಲ್ಲಿ ಅಸ್ವಾಭಾವಿಕ ಸಾವು
* ಕಳ್ಳತನ, ಅಪಘಾತ, ದರೋಡೆ ಇವೆಲ್ಲಾ ಪದೇ ಪದೇ ಆಗುವುದು
* ಸದಾ ಆರೋಗ್ಯ ಸಮಸ್ಯೆ
* ಆರ್ಥಿಕ ಸಮಸ್ಯೆ
* ಕನಸಿನಲ್ಲಿ ಹಾವು ಬರುವುದು
* ಕನಸಿನಲ್ಲಿ ಪೂರ್ವಜರು ಬಂದು ಆಹಾರ, ವಸ್ತ್ರ ಕೇಳುವುದು
* ಗಂಡ-ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದಿರುವುದು
* ಸಮಾಜದಲ್ಲಿ ಕೆಟ್ಟ ಹೆಸರು ಬರುವುದು
ಪಿತೃದೋಷ ಯಾವಾಗ ಉಂಟಾಗುವುದು
* ಸತ್ತ ವ್ಯಕ್ತಿಯ ಶ್ರಾದ್ಧ, ಪಿಂಡ ದಾನ ಅಥವಾ ಅವರ ಕರ್ಮಗಳನ್ನು ಮಾಡದೇ ಇದ್ದಾಗ ಅವರಿಗೆ ಮೋಕ್ಷ ಸಿಗದೆ ಪಿತೃದೊಷ ಉಂಟಾಗುವುದು
* ಬೇರೆಯವರ ಶಾಪದಿಂದ ಕೂಡ ಪಿತೃದೋಷ ಉಂಟಾಗುವುದು
* ಮನೆಯಲ್ಲಿ ಹಿರಿಯರನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಕೂಡ ಪಿತೃ ದೋಷ ಉಂಟಾಗುವುದು.
ಪಿತೃದೋಷಕ್ಕೆ ಆಷಾಢ ಅಮವಾಸ್ಯೆಯಂದು ಪರಿಹಾರ ಮಾಡಿ
* ಈ ದಿನ ಪಿತೃ ತರ್ಪಣ ಮಾಡಿ
* ನಿರ್ಗತಿಕರಿಗೆ ದಾನ ಮಾಡಿ
ಈ ರೀತಿ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುವುದು, ನೀವು ಪಿತೃದೋಷದಿಂದ ಮುಕ್ತರಾಗುತ್ತೀರಿ.
ಈ ಮಂತ್ರ ಪಠಿಸಿ
ಓಂ ಶ್ರೀಂ ಸರ್ವ ಪಿತೃ ದೋಷ ನಿವಾರಣಾಯ ಕ್ಲೇಶಂ ಹನ ಹನ ಸುಖ ಶಾಂತಿಂ ಫಟ್ ಸ್ವಾಹಾ |
" ಓಂ ಶ್ರೀಂ ಸರ್ವ ಪಿತ್ರ ದೋಷ ನಿವಾರಣಾಯ ಕ್ಲೇಶಂ ಹನ್ ಹನ್ ಸುಖ ಶಾಂತಿಂ ದೇಹಿ ಫಟ್ ಸ್ವಾಹಾ"



Click it and Unblock the Notifications
