Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಮನೆಯಲ್ಲಿ ಹೀಗಿದ್ದರೆ ಪಿತೃದೋಷವಿದೆ: ಜುಲೈ 17, ಆಷಾಢ ಅಮವಾಸ್ಯೆಯಂದು ಈ ಪರಿಹಾರ ಮಾಡಿ
ಆಷಾಢ ಅಮವಾಸ್ಯೆ ಹಲವಾರು ಕಾರಣಗಳಿಂದ ತುಂಬಾ ಮಹತ್ವವನ್ನು ಹೊಂದಿದೆ. ಈ ದಿನ ಭೀಮನ ಅಮವಾಸ್ಯೆ ಆಚರಿಸಲಾಗುವುದು ಹಾಗೂ ಈ ದಿನ ಪಿತೃ ತರ್ಪಣ ಕೂಡ ಮಾಡಲಾಗುವುದು. ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು. ಈ ವರ್ಷ ಆಷಾಢ ಅಮವಾಸ್ಯೆಯನ್ನು ಜುಲೈ 17ರಂದು ಆಚರಿಸಲಾಗುವುದು.
ಆಷಾಢ ಅಮವಾಸ್ಯೆಗೆ ಪಿತೃತರ್ಪಣ ಮಾಡುವುದರ ಹಿಂದಿನ ಉದ್ದೇಶವೇನು? ಪಿತೃದೋಷವಿದ್ದರೆ ಏನೆಲ್ಲಾ ತೊಂದರೆಗಳಾಗುವುದು? ಈ ತೊಂದರೆಗಳ ನಿವಾರಣೆಗೆ ಆಷಾಢ ಅಮವಾಸ್ಯೆಯಂದು ಏನು ಪರಿಹಾರ ಮಾಡಬೇಕು ಎಂದು ನೋಡೋಣ ಬನ್ನಿ:

ಆಷಾಢ ಅಮವಾಸ್ಯೆ
ಆಷಾಢ ಅಮವಾಸ್ಯೆ ಪಿತೃತರ್ಪಣಕ್ಕೆ ತುಂಬಾ ಶ್ರೇಷ್ಠವಾದ ದಿನವೆಂದು ನಂಬಲಾಗಿದೆ. ಆಷಾಢ ಅಮವಾಸ್ಯೆಯಂದು ಶ್ರಾದ್ಧಕಾರ್ಯ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುತ್ತದೆ ಅಷ್ಟು ಮಾತ್ರವಲ್ಲ ಅವರ ಆಶೀರ್ವಾದದಿಂದ ಒಳಿತಾಗುವುದು ಎಂದು ನಂಬಲಾಗಿದೆ.
ಪಿತೃದೋಷವಿದ್ದರೆ ಕುಟುಂಬಕ್ಕೆ ಒಳಿತಾಗಲ್ಲ ಎಂದು ಹೇಳಲಾಗುವುದು, ಈ ಬಗೆಯ ಲಕ್ಷಣಗಳು ಕಂಡು ಬಂದರೆ ಪಿತೃದೋಷವಿದೆ ಎಂದು ಹೇಳಲಾಗುವುದು:
* ವೃತ್ತಿ ಜೀವನದಲ್ಲಿ ಅನೇಕ ಅಡೆತಡೆಗಳಿಂದ ಪ್ರಗತಿಗೆ ತೊಂದರೆಯಾಗುವುದು
* ವೈವಾಜಿಕ ಜೀವನ ಸರಿಯಿಲ್ಲದಿರುವುದು
* ಸಂತಾಭಾಗ್ಯ ಇಲ್ಲದಿರುವುದು
* ಆಗಾಗ ಗರ್ಭಪಾತ
* ಮನೆಯಲ್ಲಿ ಸದಾ ಜಗಳ, ನೆಮ್ಮದಿಯೇ ಇಲ್ಲದಿರುವುದು
* ಮನೆಯಲ್ಲಿ ಅಸ್ವಾಭಾವಿಕ ಸಾವು
* ಕಳ್ಳತನ, ಅಪಘಾತ, ದರೋಡೆ ಇವೆಲ್ಲಾ ಪದೇ ಪದೇ ಆಗುವುದು
* ಸದಾ ಆರೋಗ್ಯ ಸಮಸ್ಯೆ
* ಆರ್ಥಿಕ ಸಮಸ್ಯೆ
* ಕನಸಿನಲ್ಲಿ ಹಾವು ಬರುವುದು
* ಕನಸಿನಲ್ಲಿ ಪೂರ್ವಜರು ಬಂದು ಆಹಾರ, ವಸ್ತ್ರ ಕೇಳುವುದು
* ಗಂಡ-ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದಿರುವುದು
* ಸಮಾಜದಲ್ಲಿ ಕೆಟ್ಟ ಹೆಸರು ಬರುವುದು
ಪಿತೃದೋಷ ಯಾವಾಗ ಉಂಟಾಗುವುದು
* ಸತ್ತ ವ್ಯಕ್ತಿಯ ಶ್ರಾದ್ಧ, ಪಿಂಡ ದಾನ ಅಥವಾ ಅವರ ಕರ್ಮಗಳನ್ನು ಮಾಡದೇ ಇದ್ದಾಗ ಅವರಿಗೆ ಮೋಕ್ಷ ಸಿಗದೆ ಪಿತೃದೊಷ ಉಂಟಾಗುವುದು
* ಬೇರೆಯವರ ಶಾಪದಿಂದ ಕೂಡ ಪಿತೃದೋಷ ಉಂಟಾಗುವುದು
* ಮನೆಯಲ್ಲಿ ಹಿರಿಯರನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಕೂಡ ಪಿತೃ ದೋಷ ಉಂಟಾಗುವುದು.
ಪಿತೃದೋಷಕ್ಕೆ ಆಷಾಢ ಅಮವಾಸ್ಯೆಯಂದು ಪರಿಹಾರ ಮಾಡಿ
* ಈ ದಿನ ಪಿತೃ ತರ್ಪಣ ಮಾಡಿ
* ನಿರ್ಗತಿಕರಿಗೆ ದಾನ ಮಾಡಿ
ಈ ರೀತಿ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುವುದು, ನೀವು ಪಿತೃದೋಷದಿಂದ ಮುಕ್ತರಾಗುತ್ತೀರಿ.
ಈ ಮಂತ್ರ ಪಠಿಸಿ
ಓಂ ಶ್ರೀಂ ಸರ್ವ ಪಿತೃ ದೋಷ ನಿವಾರಣಾಯ ಕ್ಲೇಶಂ ಹನ ಹನ ಸುಖ ಶಾಂತಿಂ ಫಟ್ ಸ್ವಾಹಾ |
" ಓಂ ಶ್ರೀಂ ಸರ್ವ ಪಿತ್ರ ದೋಷ ನಿವಾರಣಾಯ ಕ್ಲೇಶಂ ಹನ್ ಹನ್ ಸುಖ ಶಾಂತಿಂ ದೇಹಿ ಫಟ್ ಸ್ವಾಹಾ"



Click it and Unblock the Notifications
