Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮನೆಯಲ್ಲಿ ಹೀಗಿದ್ದರೆ ಪಿತೃದೋಷವಿದೆ: ಜುಲೈ 17, ಆಷಾಢ ಅಮವಾಸ್ಯೆಯಂದು ಈ ಪರಿಹಾರ ಮಾಡಿ
ಆಷಾಢ ಅಮವಾಸ್ಯೆ ಹಲವಾರು ಕಾರಣಗಳಿಂದ ತುಂಬಾ ಮಹತ್ವವನ್ನು ಹೊಂದಿದೆ. ಈ ದಿನ ಭೀಮನ ಅಮವಾಸ್ಯೆ ಆಚರಿಸಲಾಗುವುದು ಹಾಗೂ ಈ ದಿನ ಪಿತೃ ತರ್ಪಣ ಕೂಡ ಮಾಡಲಾಗುವುದು. ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು. ಈ ವರ್ಷ ಆಷಾಢ ಅಮವಾಸ್ಯೆಯನ್ನು ಜುಲೈ 17ರಂದು ಆಚರಿಸಲಾಗುವುದು.
ಆಷಾಢ ಅಮವಾಸ್ಯೆಗೆ ಪಿತೃತರ್ಪಣ ಮಾಡುವುದರ ಹಿಂದಿನ ಉದ್ದೇಶವೇನು? ಪಿತೃದೋಷವಿದ್ದರೆ ಏನೆಲ್ಲಾ ತೊಂದರೆಗಳಾಗುವುದು? ಈ ತೊಂದರೆಗಳ ನಿವಾರಣೆಗೆ ಆಷಾಢ ಅಮವಾಸ್ಯೆಯಂದು ಏನು ಪರಿಹಾರ ಮಾಡಬೇಕು ಎಂದು ನೋಡೋಣ ಬನ್ನಿ:

ಆಷಾಢ ಅಮವಾಸ್ಯೆ
ಆಷಾಢ ಅಮವಾಸ್ಯೆ ಪಿತೃತರ್ಪಣಕ್ಕೆ ತುಂಬಾ ಶ್ರೇಷ್ಠವಾದ ದಿನವೆಂದು ನಂಬಲಾಗಿದೆ. ಆಷಾಢ ಅಮವಾಸ್ಯೆಯಂದು ಶ್ರಾದ್ಧಕಾರ್ಯ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುತ್ತದೆ ಅಷ್ಟು ಮಾತ್ರವಲ್ಲ ಅವರ ಆಶೀರ್ವಾದದಿಂದ ಒಳಿತಾಗುವುದು ಎಂದು ನಂಬಲಾಗಿದೆ.
ಪಿತೃದೋಷವಿದ್ದರೆ ಕುಟುಂಬಕ್ಕೆ ಒಳಿತಾಗಲ್ಲ ಎಂದು ಹೇಳಲಾಗುವುದು, ಈ ಬಗೆಯ ಲಕ್ಷಣಗಳು ಕಂಡು ಬಂದರೆ ಪಿತೃದೋಷವಿದೆ ಎಂದು ಹೇಳಲಾಗುವುದು:
* ವೃತ್ತಿ ಜೀವನದಲ್ಲಿ ಅನೇಕ ಅಡೆತಡೆಗಳಿಂದ ಪ್ರಗತಿಗೆ ತೊಂದರೆಯಾಗುವುದು
* ವೈವಾಜಿಕ ಜೀವನ ಸರಿಯಿಲ್ಲದಿರುವುದು
* ಸಂತಾಭಾಗ್ಯ ಇಲ್ಲದಿರುವುದು
* ಆಗಾಗ ಗರ್ಭಪಾತ
* ಮನೆಯಲ್ಲಿ ಸದಾ ಜಗಳ, ನೆಮ್ಮದಿಯೇ ಇಲ್ಲದಿರುವುದು
* ಮನೆಯಲ್ಲಿ ಅಸ್ವಾಭಾವಿಕ ಸಾವು
* ಕಳ್ಳತನ, ಅಪಘಾತ, ದರೋಡೆ ಇವೆಲ್ಲಾ ಪದೇ ಪದೇ ಆಗುವುದು
* ಸದಾ ಆರೋಗ್ಯ ಸಮಸ್ಯೆ
* ಆರ್ಥಿಕ ಸಮಸ್ಯೆ
* ಕನಸಿನಲ್ಲಿ ಹಾವು ಬರುವುದು
* ಕನಸಿನಲ್ಲಿ ಪೂರ್ವಜರು ಬಂದು ಆಹಾರ, ವಸ್ತ್ರ ಕೇಳುವುದು
* ಗಂಡ-ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದಿರುವುದು
* ಸಮಾಜದಲ್ಲಿ ಕೆಟ್ಟ ಹೆಸರು ಬರುವುದು
ಪಿತೃದೋಷ ಯಾವಾಗ ಉಂಟಾಗುವುದು
* ಸತ್ತ ವ್ಯಕ್ತಿಯ ಶ್ರಾದ್ಧ, ಪಿಂಡ ದಾನ ಅಥವಾ ಅವರ ಕರ್ಮಗಳನ್ನು ಮಾಡದೇ ಇದ್ದಾಗ ಅವರಿಗೆ ಮೋಕ್ಷ ಸಿಗದೆ ಪಿತೃದೊಷ ಉಂಟಾಗುವುದು
* ಬೇರೆಯವರ ಶಾಪದಿಂದ ಕೂಡ ಪಿತೃದೋಷ ಉಂಟಾಗುವುದು
* ಮನೆಯಲ್ಲಿ ಹಿರಿಯರನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಕೂಡ ಪಿತೃ ದೋಷ ಉಂಟಾಗುವುದು.
ಪಿತೃದೋಷಕ್ಕೆ ಆಷಾಢ ಅಮವಾಸ್ಯೆಯಂದು ಪರಿಹಾರ ಮಾಡಿ
* ಈ ದಿನ ಪಿತೃ ತರ್ಪಣ ಮಾಡಿ
* ನಿರ್ಗತಿಕರಿಗೆ ದಾನ ಮಾಡಿ
ಈ ರೀತಿ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುವುದು, ನೀವು ಪಿತೃದೋಷದಿಂದ ಮುಕ್ತರಾಗುತ್ತೀರಿ.
ಈ ಮಂತ್ರ ಪಠಿಸಿ
ಓಂ ಶ್ರೀಂ ಸರ್ವ ಪಿತೃ ದೋಷ ನಿವಾರಣಾಯ ಕ್ಲೇಶಂ ಹನ ಹನ ಸುಖ ಶಾಂತಿಂ ಫಟ್ ಸ್ವಾಹಾ |
" ಓಂ ಶ್ರೀಂ ಸರ್ವ ಪಿತ್ರ ದೋಷ ನಿವಾರಣಾಯ ಕ್ಲೇಶಂ ಹನ್ ಹನ್ ಸುಖ ಶಾಂತಿಂ ದೇಹಿ ಫಟ್ ಸ್ವಾಹಾ"



Click it and Unblock the Notifications
