Latest Updates
-
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ?
ಮನೆಯಲ್ಲಿ ಹೀಗಿದ್ದರೆ ಪಿತೃದೋಷವಿದೆ: ಜುಲೈ 17, ಆಷಾಢ ಅಮವಾಸ್ಯೆಯಂದು ಈ ಪರಿಹಾರ ಮಾಡಿ
ಆಷಾಢ ಅಮವಾಸ್ಯೆ ಹಲವಾರು ಕಾರಣಗಳಿಂದ ತುಂಬಾ ಮಹತ್ವವನ್ನು ಹೊಂದಿದೆ. ಈ ದಿನ ಭೀಮನ ಅಮವಾಸ್ಯೆ ಆಚರಿಸಲಾಗುವುದು ಹಾಗೂ ಈ ದಿನ ಪಿತೃ ತರ್ಪಣ ಕೂಡ ಮಾಡಲಾಗುವುದು. ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು. ಈ ವರ್ಷ ಆಷಾಢ ಅಮವಾಸ್ಯೆಯನ್ನು ಜುಲೈ 17ರಂದು ಆಚರಿಸಲಾಗುವುದು.
ಆಷಾಢ ಅಮವಾಸ್ಯೆಗೆ ಪಿತೃತರ್ಪಣ ಮಾಡುವುದರ ಹಿಂದಿನ ಉದ್ದೇಶವೇನು? ಪಿತೃದೋಷವಿದ್ದರೆ ಏನೆಲ್ಲಾ ತೊಂದರೆಗಳಾಗುವುದು? ಈ ತೊಂದರೆಗಳ ನಿವಾರಣೆಗೆ ಆಷಾಢ ಅಮವಾಸ್ಯೆಯಂದು ಏನು ಪರಿಹಾರ ಮಾಡಬೇಕು ಎಂದು ನೋಡೋಣ ಬನ್ನಿ:

ಆಷಾಢ ಅಮವಾಸ್ಯೆ
ಆಷಾಢ ಅಮವಾಸ್ಯೆ ಪಿತೃತರ್ಪಣಕ್ಕೆ ತುಂಬಾ ಶ್ರೇಷ್ಠವಾದ ದಿನವೆಂದು ನಂಬಲಾಗಿದೆ. ಆಷಾಢ ಅಮವಾಸ್ಯೆಯಂದು ಶ್ರಾದ್ಧಕಾರ್ಯ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುತ್ತದೆ ಅಷ್ಟು ಮಾತ್ರವಲ್ಲ ಅವರ ಆಶೀರ್ವಾದದಿಂದ ಒಳಿತಾಗುವುದು ಎಂದು ನಂಬಲಾಗಿದೆ.
ಪಿತೃದೋಷವಿದ್ದರೆ ಕುಟುಂಬಕ್ಕೆ ಒಳಿತಾಗಲ್ಲ ಎಂದು ಹೇಳಲಾಗುವುದು, ಈ ಬಗೆಯ ಲಕ್ಷಣಗಳು ಕಂಡು ಬಂದರೆ ಪಿತೃದೋಷವಿದೆ ಎಂದು ಹೇಳಲಾಗುವುದು:
* ವೃತ್ತಿ ಜೀವನದಲ್ಲಿ ಅನೇಕ ಅಡೆತಡೆಗಳಿಂದ ಪ್ರಗತಿಗೆ ತೊಂದರೆಯಾಗುವುದು
* ವೈವಾಜಿಕ ಜೀವನ ಸರಿಯಿಲ್ಲದಿರುವುದು
* ಸಂತಾಭಾಗ್ಯ ಇಲ್ಲದಿರುವುದು
* ಆಗಾಗ ಗರ್ಭಪಾತ
* ಮನೆಯಲ್ಲಿ ಸದಾ ಜಗಳ, ನೆಮ್ಮದಿಯೇ ಇಲ್ಲದಿರುವುದು
* ಮನೆಯಲ್ಲಿ ಅಸ್ವಾಭಾವಿಕ ಸಾವು
* ಕಳ್ಳತನ, ಅಪಘಾತ, ದರೋಡೆ ಇವೆಲ್ಲಾ ಪದೇ ಪದೇ ಆಗುವುದು
* ಸದಾ ಆರೋಗ್ಯ ಸಮಸ್ಯೆ
* ಆರ್ಥಿಕ ಸಮಸ್ಯೆ
* ಕನಸಿನಲ್ಲಿ ಹಾವು ಬರುವುದು
* ಕನಸಿನಲ್ಲಿ ಪೂರ್ವಜರು ಬಂದು ಆಹಾರ, ವಸ್ತ್ರ ಕೇಳುವುದು
* ಗಂಡ-ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದಿರುವುದು
* ಸಮಾಜದಲ್ಲಿ ಕೆಟ್ಟ ಹೆಸರು ಬರುವುದು
ಪಿತೃದೋಷ ಯಾವಾಗ ಉಂಟಾಗುವುದು
* ಸತ್ತ ವ್ಯಕ್ತಿಯ ಶ್ರಾದ್ಧ, ಪಿಂಡ ದಾನ ಅಥವಾ ಅವರ ಕರ್ಮಗಳನ್ನು ಮಾಡದೇ ಇದ್ದಾಗ ಅವರಿಗೆ ಮೋಕ್ಷ ಸಿಗದೆ ಪಿತೃದೊಷ ಉಂಟಾಗುವುದು
* ಬೇರೆಯವರ ಶಾಪದಿಂದ ಕೂಡ ಪಿತೃದೋಷ ಉಂಟಾಗುವುದು
* ಮನೆಯಲ್ಲಿ ಹಿರಿಯರನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಕೂಡ ಪಿತೃ ದೋಷ ಉಂಟಾಗುವುದು.
ಪಿತೃದೋಷಕ್ಕೆ ಆಷಾಢ ಅಮವಾಸ್ಯೆಯಂದು ಪರಿಹಾರ ಮಾಡಿ
* ಈ ದಿನ ಪಿತೃ ತರ್ಪಣ ಮಾಡಿ
* ನಿರ್ಗತಿಕರಿಗೆ ದಾನ ಮಾಡಿ
ಈ ರೀತಿ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುವುದು, ನೀವು ಪಿತೃದೋಷದಿಂದ ಮುಕ್ತರಾಗುತ್ತೀರಿ.
ಈ ಮಂತ್ರ ಪಠಿಸಿ
ಓಂ ಶ್ರೀಂ ಸರ್ವ ಪಿತೃ ದೋಷ ನಿವಾರಣಾಯ ಕ್ಲೇಶಂ ಹನ ಹನ ಸುಖ ಶಾಂತಿಂ ಫಟ್ ಸ್ವಾಹಾ |
" ಓಂ ಶ್ರೀಂ ಸರ್ವ ಪಿತ್ರ ದೋಷ ನಿವಾರಣಾಯ ಕ್ಲೇಶಂ ಹನ್ ಹನ್ ಸುಖ ಶಾಂತಿಂ ದೇಹಿ ಫಟ್ ಸ್ವಾಹಾ"



Click it and Unblock the Notifications

