Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕೃಷ್ಣ ಜನ್ಮಾಷ್ಟಮಿ 2023: ಶ್ರೀ ಕೃಷ್ಣನ ಪವರ್ಫುಲ್ ಮಂತ್ರಗಳಿವು
ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೆಪ್ಟೆಂಬರ್ 6ರಂದು ಆಚರಿಸಲಾಗುವುದು. ಶ್ರೀ ಕೃಷ್ಣ ಜನಿಸಿದ ದಿನಾಂಕವನ್ನು ಜನ್ಮಾಷ್ಟಮಿ ಎಂದು ಆಚರಿಸಲಾಗುವುದು. ಶ್ರೀ ವಿಷ್ಣುವಿನ 9ನೇ ಅವತಾರವೇ ಶ್ರೀಕೃಷ್ಣ ಎಂದು ಹೇಳಲಾಗುವುದು. ಶ್ರೀ ಕೃಷ್ಣ ಭಕ್ತಿಯಿಂದ ಪೂಜಿಸಿದರೆ ಬದುಕಿನಲ್ಲಿರುವ ಎಲ್ಲಾ ಗೊಂದಲಗಳು ದೂರಾಗುವುದು. ಶ್ರೀಕೃಷ್ಣನ ಜನ್ಮಾಷ್ಟಮಿಯಂದು ಶ್ರೀ ವಿಷ್ಣುವಿನ ಆರಾಧನೆ ಮಾಡುವಾಗ ಈ ಪವರ್ಫುಲ್ ಮಂತ್ರಗಳನ್ನು ಪಠಿಸಿ. ಇದರಿಂದ ನಿಮಗೆ ಎಲ್ಲಾ ರೀತಿಯಲ್ಲೂ ಒಳಿತಾಗಲಿದೆ.

ಕೃಷ್ಣ ಮೂಲ ಮಂತ್ರ
ಓಂ ಕೃಷ್ಣಾಯ ಮಂತ್ರ
ಈ ಮಂತ್ರವನ್ನು ಯಾವುದೇ ಸಮಯದಲ್ಲಿ ಬೇಕಾದರೂ ಪಠಿಸಬಹುದು.
ಹರೇ ಕೃಷ್ಣ ಮಹಾ ಮಂತ್ರ
ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ
ಹರೇ ರಾಮ, ಹರೇ ರಾಮ, ರಾಮ ರಾಮ ಹರೇ ಹರೇ
ಈ ಮಂತ್ರವನ್ನು ಮಹಾಮಂತ್ರ ಎಂದು ಕರೆಯಲಾಗುವುದು. ಈ ಮಂತ್ರವನ್ನು ಪ್ರತಿದಿನ ಪಠಿಸಿ.
ಕೃಷ್ಣ ಗಾಯತ್ರಿ ಮಂತ್ರ
|| ಓಂ ದೇವಕಿ ನಂದನಾಯ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ಕೃಷ್ಣಃ ಪ್ರಚೋದಯಾತ್ ||
|| ಓಂ ದೇವಕಿನಂದನಾಯ ವಿದ್ಮಿಹೇ ವಾಸುದೇವಾಯ ಧೀಮಹಿ |
ತನ್ನೋ: ಕೃಷ್ಣಃ ಪ್ರಚೋದಯಾತ್ ||
ಈ ಮಂತ್ರವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಧೈರ್ಯ ಹೆಚ್ಚಾಗುವುದು. ಅಲ್ಲದ ಎಬದುಕಿನಲ್ಲಿರುವ ಕಷ್ಟಗಳು ದೂರಾಗುವುದು ಎಂದು ನಂಬಲಾಗುವುದು.
ಯಶಸ್ವಿಗೆ ಶ್ರೀ ಕೃಷ್ಣ ಮಂತ್ರ
ಓಂ ಶ್ರೀ ಕೃಷ್ಣ ಶರಣಂ ನಮಃ
ಈ ಮಂತ್ರವನ್ನು ಪಠಿಸುವುದರಿಂದ ಯಶಸ್ಸು ಸಿಗಲಿದೆ.
ಹಣದ ಸ್ಥಿತಿಗತಿ ಉತ್ತಮವಾಗಲು
ಕ್ಲೀಂ ಗ್ಲೈಂ ಕ್ಲೀಂ ಶ್ಯಾಮಲಾಂಗಾಯ ನಮಃ
ಪ್ರೇಮ ವಿವಾಹವಾಗಲು ಬಯಸಿದರೆ
ಓಂ ನಮೋ ಭಾಗ್ವತೇ ಶ್ರೀ ಗೋವಿಂದಾಯೇ
ಓಂ
ಕ್ಲೀಂ ಕೃಷ್ಣಾಯ ಗೋಪಿಜಾನ್ ವಲ್ಲಾಬಾಯ್ ಸ್ವಾಹಾ
ಕೃಷ್ಣ ಭಕ್ತಿ ಮಂತ್ರ
ಜೈ ಶ್ರೀ ಕೃಷ್ಣ ಚೈತನ್ಯ ಪ್ರಭು ನಿತ್ಯಾನಂದ ಶ್ರೀ ಅದ್ವೈತ ಗದಾಧರ ಶ್ರೀವಾಸದಿ ಗೌರ ಭಕ್ತ ವೃಂದ
ಕೃಷ್ಣ ಕ್ಲೀಂ ಮಂತ್ರ
ಓಂ ಕ್ಲೀಂ ಕೃಷ್ಣಾಯ ನಮಃ
ಕೃಷ್ಣ ಮಂತ್ರವನ್ನು ಪಠಿಸುವುದರಿಂದ ದೊರೆಯುವ ಪ್ರಯೋಜನಗಳು
* ಆತ್ಮವಿಶ್ವಾಸ ಹೆಚ್ಚಾಗುವುದು
* ಭಯ ದೂರಾಗುವುದು, ಗೊಂದಲ ದೂರಾಗುವುದು
* ಜ್ಞಾನವನ್ನು ಹೆಚ್ಚಿಸುತ್ತದೆ
* ಕಾಯಿಲೆಯನ್ನು ಗುಣಪಡಿಸುತ್ತದೆ
* ಯಶಸ್ಸು ಸಿಗಲಿದೆ
* ಖುಷಿ ಸಿಗಲಿದೆ, ಮಾನಸಿಕ ನೆಮ್ಮದಿ ಸಿಗಲಿದೆ
* ಪಾಪಕರ್ಮಗಳಿಂದ ಮುಕ್ತಿ ಸಿಗಲಿದೆ
* ನಿಮ್ಮ ಇಷ್ಟಾರ್ಥಗಳು ನೆರವೇರುವುದು
ಕೃಷ್ಣ ಮಂತ್ರ
* ಕೃಷ್ಣ ಮಂತ್ರ ಪಠಿಸುವಾಗ ಉತ್ತರಕ್ಕೆ ಮುಖ ಮಾಡಿ ಕುಳಿತುಕೊಳ್ಳಿ
* ಹಳದಿ ಬಣ್ಣದ ಬಟ್ಟೆ ಧರಿಸಿ
* ಶ್ರೀ ಕೃಷ್ಣನಿಗೆ ತುಪ್ಪದ ದೀಪ ಹಚ್ಚಿ ಆರಾಧಿಸಿ



Click it and Unblock the Notifications