Latest Updates
-
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್
ಕೃಷ್ಣ ಜನ್ಮಾಷ್ಟಮಿ 2023: ಶ್ರೀ ಕೃಷ್ಣನ ಪವರ್ಫುಲ್ ಮಂತ್ರಗಳಿವು
ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೆಪ್ಟೆಂಬರ್ 6ರಂದು ಆಚರಿಸಲಾಗುವುದು. ಶ್ರೀ ಕೃಷ್ಣ ಜನಿಸಿದ ದಿನಾಂಕವನ್ನು ಜನ್ಮಾಷ್ಟಮಿ ಎಂದು ಆಚರಿಸಲಾಗುವುದು. ಶ್ರೀ ವಿಷ್ಣುವಿನ 9ನೇ ಅವತಾರವೇ ಶ್ರೀಕೃಷ್ಣ ಎಂದು ಹೇಳಲಾಗುವುದು. ಶ್ರೀ ಕೃಷ್ಣ ಭಕ್ತಿಯಿಂದ ಪೂಜಿಸಿದರೆ ಬದುಕಿನಲ್ಲಿರುವ ಎಲ್ಲಾ ಗೊಂದಲಗಳು ದೂರಾಗುವುದು. ಶ್ರೀಕೃಷ್ಣನ ಜನ್ಮಾಷ್ಟಮಿಯಂದು ಶ್ರೀ ವಿಷ್ಣುವಿನ ಆರಾಧನೆ ಮಾಡುವಾಗ ಈ ಪವರ್ಫುಲ್ ಮಂತ್ರಗಳನ್ನು ಪಠಿಸಿ. ಇದರಿಂದ ನಿಮಗೆ ಎಲ್ಲಾ ರೀತಿಯಲ್ಲೂ ಒಳಿತಾಗಲಿದೆ.

ಕೃಷ್ಣ ಮೂಲ ಮಂತ್ರ
ಓಂ ಕೃಷ್ಣಾಯ ಮಂತ್ರ
ಈ ಮಂತ್ರವನ್ನು ಯಾವುದೇ ಸಮಯದಲ್ಲಿ ಬೇಕಾದರೂ ಪಠಿಸಬಹುದು.
ಹರೇ ಕೃಷ್ಣ ಮಹಾ ಮಂತ್ರ
ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ
ಹರೇ ರಾಮ, ಹರೇ ರಾಮ, ರಾಮ ರಾಮ ಹರೇ ಹರೇ
ಈ ಮಂತ್ರವನ್ನು ಮಹಾಮಂತ್ರ ಎಂದು ಕರೆಯಲಾಗುವುದು. ಈ ಮಂತ್ರವನ್ನು ಪ್ರತಿದಿನ ಪಠಿಸಿ.
ಕೃಷ್ಣ ಗಾಯತ್ರಿ ಮಂತ್ರ
|| ಓಂ ದೇವಕಿ ನಂದನಾಯ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ಕೃಷ್ಣಃ ಪ್ರಚೋದಯಾತ್ ||
|| ಓಂ ದೇವಕಿನಂದನಾಯ ವಿದ್ಮಿಹೇ ವಾಸುದೇವಾಯ ಧೀಮಹಿ |
ತನ್ನೋ: ಕೃಷ್ಣಃ ಪ್ರಚೋದಯಾತ್ ||
ಈ ಮಂತ್ರವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಧೈರ್ಯ ಹೆಚ್ಚಾಗುವುದು. ಅಲ್ಲದ ಎಬದುಕಿನಲ್ಲಿರುವ ಕಷ್ಟಗಳು ದೂರಾಗುವುದು ಎಂದು ನಂಬಲಾಗುವುದು.
ಯಶಸ್ವಿಗೆ ಶ್ರೀ ಕೃಷ್ಣ ಮಂತ್ರ
ಓಂ ಶ್ರೀ ಕೃಷ್ಣ ಶರಣಂ ನಮಃ
ಈ ಮಂತ್ರವನ್ನು ಪಠಿಸುವುದರಿಂದ ಯಶಸ್ಸು ಸಿಗಲಿದೆ.
ಹಣದ ಸ್ಥಿತಿಗತಿ ಉತ್ತಮವಾಗಲು
ಕ್ಲೀಂ ಗ್ಲೈಂ ಕ್ಲೀಂ ಶ್ಯಾಮಲಾಂಗಾಯ ನಮಃ
ಪ್ರೇಮ ವಿವಾಹವಾಗಲು ಬಯಸಿದರೆ
ಓಂ ನಮೋ ಭಾಗ್ವತೇ ಶ್ರೀ ಗೋವಿಂದಾಯೇ
ಓಂ
ಕ್ಲೀಂ ಕೃಷ್ಣಾಯ ಗೋಪಿಜಾನ್ ವಲ್ಲಾಬಾಯ್ ಸ್ವಾಹಾ
ಕೃಷ್ಣ ಭಕ್ತಿ ಮಂತ್ರ
ಜೈ ಶ್ರೀ ಕೃಷ್ಣ ಚೈತನ್ಯ ಪ್ರಭು ನಿತ್ಯಾನಂದ ಶ್ರೀ ಅದ್ವೈತ ಗದಾಧರ ಶ್ರೀವಾಸದಿ ಗೌರ ಭಕ್ತ ವೃಂದ
ಕೃಷ್ಣ ಕ್ಲೀಂ ಮಂತ್ರ
ಓಂ ಕ್ಲೀಂ ಕೃಷ್ಣಾಯ ನಮಃ
ಕೃಷ್ಣ ಮಂತ್ರವನ್ನು ಪಠಿಸುವುದರಿಂದ ದೊರೆಯುವ ಪ್ರಯೋಜನಗಳು
* ಆತ್ಮವಿಶ್ವಾಸ ಹೆಚ್ಚಾಗುವುದು
* ಭಯ ದೂರಾಗುವುದು, ಗೊಂದಲ ದೂರಾಗುವುದು
* ಜ್ಞಾನವನ್ನು ಹೆಚ್ಚಿಸುತ್ತದೆ
* ಕಾಯಿಲೆಯನ್ನು ಗುಣಪಡಿಸುತ್ತದೆ
* ಯಶಸ್ಸು ಸಿಗಲಿದೆ
* ಖುಷಿ ಸಿಗಲಿದೆ, ಮಾನಸಿಕ ನೆಮ್ಮದಿ ಸಿಗಲಿದೆ
* ಪಾಪಕರ್ಮಗಳಿಂದ ಮುಕ್ತಿ ಸಿಗಲಿದೆ
* ನಿಮ್ಮ ಇಷ್ಟಾರ್ಥಗಳು ನೆರವೇರುವುದು
ಕೃಷ್ಣ ಮಂತ್ರ
* ಕೃಷ್ಣ ಮಂತ್ರ ಪಠಿಸುವಾಗ ಉತ್ತರಕ್ಕೆ ಮುಖ ಮಾಡಿ ಕುಳಿತುಕೊಳ್ಳಿ
* ಹಳದಿ ಬಣ್ಣದ ಬಟ್ಟೆ ಧರಿಸಿ
* ಶ್ರೀ ಕೃಷ್ಣನಿಗೆ ತುಪ್ಪದ ದೀಪ ಹಚ್ಚಿ ಆರಾಧಿಸಿ



Click it and Unblock the Notifications
