Latest Updates
-
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ!
ಕೃಷ್ಣ ಜನ್ಮಾಷ್ಟಮಿ 2023: ಶ್ರೀ ಕೃಷ್ಣನ ಪವರ್ಫುಲ್ ಮಂತ್ರಗಳಿವು
ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೆಪ್ಟೆಂಬರ್ 6ರಂದು ಆಚರಿಸಲಾಗುವುದು. ಶ್ರೀ ಕೃಷ್ಣ ಜನಿಸಿದ ದಿನಾಂಕವನ್ನು ಜನ್ಮಾಷ್ಟಮಿ ಎಂದು ಆಚರಿಸಲಾಗುವುದು. ಶ್ರೀ ವಿಷ್ಣುವಿನ 9ನೇ ಅವತಾರವೇ ಶ್ರೀಕೃಷ್ಣ ಎಂದು ಹೇಳಲಾಗುವುದು. ಶ್ರೀ ಕೃಷ್ಣ ಭಕ್ತಿಯಿಂದ ಪೂಜಿಸಿದರೆ ಬದುಕಿನಲ್ಲಿರುವ ಎಲ್ಲಾ ಗೊಂದಲಗಳು ದೂರಾಗುವುದು. ಶ್ರೀಕೃಷ್ಣನ ಜನ್ಮಾಷ್ಟಮಿಯಂದು ಶ್ರೀ ವಿಷ್ಣುವಿನ ಆರಾಧನೆ ಮಾಡುವಾಗ ಈ ಪವರ್ಫುಲ್ ಮಂತ್ರಗಳನ್ನು ಪಠಿಸಿ. ಇದರಿಂದ ನಿಮಗೆ ಎಲ್ಲಾ ರೀತಿಯಲ್ಲೂ ಒಳಿತಾಗಲಿದೆ.

ಕೃಷ್ಣ ಮೂಲ ಮಂತ್ರ
ಓಂ ಕೃಷ್ಣಾಯ ಮಂತ್ರ
ಈ ಮಂತ್ರವನ್ನು ಯಾವುದೇ ಸಮಯದಲ್ಲಿ ಬೇಕಾದರೂ ಪಠಿಸಬಹುದು.
ಹರೇ ಕೃಷ್ಣ ಮಹಾ ಮಂತ್ರ
ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ
ಹರೇ ರಾಮ, ಹರೇ ರಾಮ, ರಾಮ ರಾಮ ಹರೇ ಹರೇ
ಈ ಮಂತ್ರವನ್ನು ಮಹಾಮಂತ್ರ ಎಂದು ಕರೆಯಲಾಗುವುದು. ಈ ಮಂತ್ರವನ್ನು ಪ್ರತಿದಿನ ಪಠಿಸಿ.
ಕೃಷ್ಣ ಗಾಯತ್ರಿ ಮಂತ್ರ
|| ಓಂ ದೇವಕಿ ನಂದನಾಯ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ಕೃಷ್ಣಃ ಪ್ರಚೋದಯಾತ್ ||
|| ಓಂ ದೇವಕಿನಂದನಾಯ ವಿದ್ಮಿಹೇ ವಾಸುದೇವಾಯ ಧೀಮಹಿ |
ತನ್ನೋ: ಕೃಷ್ಣಃ ಪ್ರಚೋದಯಾತ್ ||
ಈ ಮಂತ್ರವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಧೈರ್ಯ ಹೆಚ್ಚಾಗುವುದು. ಅಲ್ಲದ ಎಬದುಕಿನಲ್ಲಿರುವ ಕಷ್ಟಗಳು ದೂರಾಗುವುದು ಎಂದು ನಂಬಲಾಗುವುದು.
ಯಶಸ್ವಿಗೆ ಶ್ರೀ ಕೃಷ್ಣ ಮಂತ್ರ
ಓಂ ಶ್ರೀ ಕೃಷ್ಣ ಶರಣಂ ನಮಃ
ಈ ಮಂತ್ರವನ್ನು ಪಠಿಸುವುದರಿಂದ ಯಶಸ್ಸು ಸಿಗಲಿದೆ.
ಹಣದ ಸ್ಥಿತಿಗತಿ ಉತ್ತಮವಾಗಲು
ಕ್ಲೀಂ ಗ್ಲೈಂ ಕ್ಲೀಂ ಶ್ಯಾಮಲಾಂಗಾಯ ನಮಃ
ಪ್ರೇಮ ವಿವಾಹವಾಗಲು ಬಯಸಿದರೆ
ಓಂ ನಮೋ ಭಾಗ್ವತೇ ಶ್ರೀ ಗೋವಿಂದಾಯೇ
ಓಂ
ಕ್ಲೀಂ ಕೃಷ್ಣಾಯ ಗೋಪಿಜಾನ್ ವಲ್ಲಾಬಾಯ್ ಸ್ವಾಹಾ
ಕೃಷ್ಣ ಭಕ್ತಿ ಮಂತ್ರ
ಜೈ ಶ್ರೀ ಕೃಷ್ಣ ಚೈತನ್ಯ ಪ್ರಭು ನಿತ್ಯಾನಂದ ಶ್ರೀ ಅದ್ವೈತ ಗದಾಧರ ಶ್ರೀವಾಸದಿ ಗೌರ ಭಕ್ತ ವೃಂದ
ಕೃಷ್ಣ ಕ್ಲೀಂ ಮಂತ್ರ
ಓಂ ಕ್ಲೀಂ ಕೃಷ್ಣಾಯ ನಮಃ
ಕೃಷ್ಣ ಮಂತ್ರವನ್ನು ಪಠಿಸುವುದರಿಂದ ದೊರೆಯುವ ಪ್ರಯೋಜನಗಳು
* ಆತ್ಮವಿಶ್ವಾಸ ಹೆಚ್ಚಾಗುವುದು
* ಭಯ ದೂರಾಗುವುದು, ಗೊಂದಲ ದೂರಾಗುವುದು
* ಜ್ಞಾನವನ್ನು ಹೆಚ್ಚಿಸುತ್ತದೆ
* ಕಾಯಿಲೆಯನ್ನು ಗುಣಪಡಿಸುತ್ತದೆ
* ಯಶಸ್ಸು ಸಿಗಲಿದೆ
* ಖುಷಿ ಸಿಗಲಿದೆ, ಮಾನಸಿಕ ನೆಮ್ಮದಿ ಸಿಗಲಿದೆ
* ಪಾಪಕರ್ಮಗಳಿಂದ ಮುಕ್ತಿ ಸಿಗಲಿದೆ
* ನಿಮ್ಮ ಇಷ್ಟಾರ್ಥಗಳು ನೆರವೇರುವುದು
ಕೃಷ್ಣ ಮಂತ್ರ
* ಕೃಷ್ಣ ಮಂತ್ರ ಪಠಿಸುವಾಗ ಉತ್ತರಕ್ಕೆ ಮುಖ ಮಾಡಿ ಕುಳಿತುಕೊಳ್ಳಿ
* ಹಳದಿ ಬಣ್ಣದ ಬಟ್ಟೆ ಧರಿಸಿ
* ಶ್ರೀ ಕೃಷ್ಣನಿಗೆ ತುಪ್ಪದ ದೀಪ ಹಚ್ಚಿ ಆರಾಧಿಸಿ



Click it and Unblock the Notifications