Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಕೃಷ್ಣ ಜನ್ಮಾಷ್ಟಮಿ 2023: ಶ್ರೀ ಕೃಷ್ಣನ ಪವರ್ಫುಲ್ ಮಂತ್ರಗಳಿವು
ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೆಪ್ಟೆಂಬರ್ 6ರಂದು ಆಚರಿಸಲಾಗುವುದು. ಶ್ರೀ ಕೃಷ್ಣ ಜನಿಸಿದ ದಿನಾಂಕವನ್ನು ಜನ್ಮಾಷ್ಟಮಿ ಎಂದು ಆಚರಿಸಲಾಗುವುದು. ಶ್ರೀ ವಿಷ್ಣುವಿನ 9ನೇ ಅವತಾರವೇ ಶ್ರೀಕೃಷ್ಣ ಎಂದು ಹೇಳಲಾಗುವುದು. ಶ್ರೀ ಕೃಷ್ಣ ಭಕ್ತಿಯಿಂದ ಪೂಜಿಸಿದರೆ ಬದುಕಿನಲ್ಲಿರುವ ಎಲ್ಲಾ ಗೊಂದಲಗಳು ದೂರಾಗುವುದು. ಶ್ರೀಕೃಷ್ಣನ ಜನ್ಮಾಷ್ಟಮಿಯಂದು ಶ್ರೀ ವಿಷ್ಣುವಿನ ಆರಾಧನೆ ಮಾಡುವಾಗ ಈ ಪವರ್ಫುಲ್ ಮಂತ್ರಗಳನ್ನು ಪಠಿಸಿ. ಇದರಿಂದ ನಿಮಗೆ ಎಲ್ಲಾ ರೀತಿಯಲ್ಲೂ ಒಳಿತಾಗಲಿದೆ.

ಕೃಷ್ಣ ಮೂಲ ಮಂತ್ರ
ಓಂ ಕೃಷ್ಣಾಯ ಮಂತ್ರ
ಈ ಮಂತ್ರವನ್ನು ಯಾವುದೇ ಸಮಯದಲ್ಲಿ ಬೇಕಾದರೂ ಪಠಿಸಬಹುದು.
ಹರೇ ಕೃಷ್ಣ ಮಹಾ ಮಂತ್ರ
ಹರೇ ಕೃಷ್ಣ, ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ
ಹರೇ ರಾಮ, ಹರೇ ರಾಮ, ರಾಮ ರಾಮ ಹರೇ ಹರೇ
ಈ ಮಂತ್ರವನ್ನು ಮಹಾಮಂತ್ರ ಎಂದು ಕರೆಯಲಾಗುವುದು. ಈ ಮಂತ್ರವನ್ನು ಪ್ರತಿದಿನ ಪಠಿಸಿ.
ಕೃಷ್ಣ ಗಾಯತ್ರಿ ಮಂತ್ರ
|| ಓಂ ದೇವಕಿ ನಂದನಾಯ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ಕೃಷ್ಣಃ ಪ್ರಚೋದಯಾತ್ ||
|| ಓಂ ದೇವಕಿನಂದನಾಯ ವಿದ್ಮಿಹೇ ವಾಸುದೇವಾಯ ಧೀಮಹಿ |
ತನ್ನೋ: ಕೃಷ್ಣಃ ಪ್ರಚೋದಯಾತ್ ||
ಈ ಮಂತ್ರವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಧೈರ್ಯ ಹೆಚ್ಚಾಗುವುದು. ಅಲ್ಲದ ಎಬದುಕಿನಲ್ಲಿರುವ ಕಷ್ಟಗಳು ದೂರಾಗುವುದು ಎಂದು ನಂಬಲಾಗುವುದು.
ಯಶಸ್ವಿಗೆ ಶ್ರೀ ಕೃಷ್ಣ ಮಂತ್ರ
ಓಂ ಶ್ರೀ ಕೃಷ್ಣ ಶರಣಂ ನಮಃ
ಈ ಮಂತ್ರವನ್ನು ಪಠಿಸುವುದರಿಂದ ಯಶಸ್ಸು ಸಿಗಲಿದೆ.
ಹಣದ ಸ್ಥಿತಿಗತಿ ಉತ್ತಮವಾಗಲು
ಕ್ಲೀಂ ಗ್ಲೈಂ ಕ್ಲೀಂ ಶ್ಯಾಮಲಾಂಗಾಯ ನಮಃ
ಪ್ರೇಮ ವಿವಾಹವಾಗಲು ಬಯಸಿದರೆ
ಓಂ ನಮೋ ಭಾಗ್ವತೇ ಶ್ರೀ ಗೋವಿಂದಾಯೇ
ಓಂ
ಕ್ಲೀಂ ಕೃಷ್ಣಾಯ ಗೋಪಿಜಾನ್ ವಲ್ಲಾಬಾಯ್ ಸ್ವಾಹಾ
ಕೃಷ್ಣ ಭಕ್ತಿ ಮಂತ್ರ
ಜೈ ಶ್ರೀ ಕೃಷ್ಣ ಚೈತನ್ಯ ಪ್ರಭು ನಿತ್ಯಾನಂದ ಶ್ರೀ ಅದ್ವೈತ ಗದಾಧರ ಶ್ರೀವಾಸದಿ ಗೌರ ಭಕ್ತ ವೃಂದ
ಕೃಷ್ಣ ಕ್ಲೀಂ ಮಂತ್ರ
ಓಂ ಕ್ಲೀಂ ಕೃಷ್ಣಾಯ ನಮಃ
ಕೃಷ್ಣ ಮಂತ್ರವನ್ನು ಪಠಿಸುವುದರಿಂದ ದೊರೆಯುವ ಪ್ರಯೋಜನಗಳು
* ಆತ್ಮವಿಶ್ವಾಸ ಹೆಚ್ಚಾಗುವುದು
* ಭಯ ದೂರಾಗುವುದು, ಗೊಂದಲ ದೂರಾಗುವುದು
* ಜ್ಞಾನವನ್ನು ಹೆಚ್ಚಿಸುತ್ತದೆ
* ಕಾಯಿಲೆಯನ್ನು ಗುಣಪಡಿಸುತ್ತದೆ
* ಯಶಸ್ಸು ಸಿಗಲಿದೆ
* ಖುಷಿ ಸಿಗಲಿದೆ, ಮಾನಸಿಕ ನೆಮ್ಮದಿ ಸಿಗಲಿದೆ
* ಪಾಪಕರ್ಮಗಳಿಂದ ಮುಕ್ತಿ ಸಿಗಲಿದೆ
* ನಿಮ್ಮ ಇಷ್ಟಾರ್ಥಗಳು ನೆರವೇರುವುದು
ಕೃಷ್ಣ ಮಂತ್ರ
* ಕೃಷ್ಣ ಮಂತ್ರ ಪಠಿಸುವಾಗ ಉತ್ತರಕ್ಕೆ ಮುಖ ಮಾಡಿ ಕುಳಿತುಕೊಳ್ಳಿ
* ಹಳದಿ ಬಣ್ಣದ ಬಟ್ಟೆ ಧರಿಸಿ
* ಶ್ರೀ ಕೃಷ್ಣನಿಗೆ ತುಪ್ಪದ ದೀಪ ಹಚ್ಚಿ ಆರಾಧಿಸಿ



Click it and Unblock the Notifications