ಜನವರಿ 22ಕ್ಕೆ ಕರ್ನಾಟಕದ ಎಲ್ಲಾ ದೇಗುಲಗಳಲ್ಲಿ ಮಧ್ಯಾಹ್ನ 12:29ರಿಂದ 1:32ರವರೆಗೆ ನಡೆಯಲಿದೆ ವಿಶೇಷಪೂಜೆ

ಈಗ ಎಲ್ಲರ ಬಾಯಲ್ಲಿ ಕೇಳಿ ಬರುತ್ತಿರುವ ವಿಷಯವೆಂದರೆ ಅಯೋಧ್ಯೆ.. ಎಲ್ಲರಲ್ಲೂ ಕುತೂಹಲ, ಸಂಭ್ರಮ, ಇಡೀ ದೇಶ ಅಯೋಧ್ಯೆಯಲ್ಲಿ ಶ್ರೀರಾಮ ಕಣ್ತುಂಬಿಕೊಳ್ಳಲು ಆಸೆಪಡುತ್ತಿದ್ದು, ಜನವರಿ 22 ಬೇಗ ಬರಲಿ ಎಂದು ಬಯಸುತ್ತಿದ್ದಾರೆ. ಅಯೋಧ್ಯೆ ಶ್ರೀರಾಮನ ಜನ್ಮ ಸ್ಥಳ, ಅದೇ ಜನ್ಮಸ್ಥಳದಲ್ಲಿ ಮತ್ತೆ ಶ್ರೀರಾಮ ದರ್ಶನ ಪಡೆಯುವ ಪುಣ್ಯ ನಮಗೆ ಲಭಿಸಿದೆ.

ಜನವರಿ 22ಕ್ಕೆ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಅದೇ ಸಮಯದಲ್ಲಿ ಕರ್ನಾಟಕದಲ್ಲಿ ದೇವಾಲಯದಲ್ಲಿ ಮಹಾ ಮಂಗಳಾರತಿ ಮಾಡಲು ರಾಜ್ಯ ಸರ್ಕಾರ ಸೂಚಿಸದೆ. ಕರ್ನಾಟಕದಲ್ಲಿರುವ ಅಷ್ಟೂ ದೇವಾಲಯಗಳಲ್ಲಿ ಈ ದಿನ ವಿಶೇಷ ಪೂಜೆ ಏರ್ಪಡಿಸಲಿದ್ದು ಮಧ್ಯಾಹ್ನ 12:29ರಿಂದ 1:32ರವರೆಗೆ ವಿಶೇಷ ಪೂಜೆ ನಡೆಯಲಿದೆ.

Ram Mandir inauguration

ಅಮೃತ ಮಹೋತ್ಸವ
ವಾರಣಸಿಯ ಅರ್ಚಕರಾಗಿರುವ ಲಕ್ಷ್ಮಿ ಕಾಂತ್‌ ದೀಕ್ಷಿತ್ ಈ ದಿನ ರಾಮ ಲಲ್ಲಾದಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡಲಿದ್ದಾರೆ. ಜನವರಿ 14ರಿಂದ ಜನವರಿ 22ರವರೆಗೆ ಅಮೃತ ಮಹೋತ್ಸವ ನೆರವೇರಲಿದೆ. ಅಮೃತ ಮಹೋತ್ಸವದಲ್ಲಿ ಪ್ರತಿದಿನ 60, 000ಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.

ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ
ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹ ಪ್ರಾಣಪ್ರತಿಷ್ಠಾಪನೆ 84 ಸೆಕೆಂಡ್‌ಗ ಒಳಗೆ ಆಗಬೇಕು. ಈ 84 ಸೆಕೆಂಡ್‌ ಅತ್ಯಂತ ಶುಭ ಘಳಿಗೆ ಎಂದು ಹೇಳಲಾಗುವುದು, ಈ ಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡುವುದರಿಂದ ಭಾರತಕ್ಕೆ ಒಳಿತಾಗಲಿದೆ. ಶ್ರೀರಾಮನ ಕೃಪೆಯಿಂದ ಅಗ್ನಿ, ಅಕಾಲಿಕ ಸಾವು, ಕಳ್ಳತನ, ಕಾಯಿಲೆ, ಸಾವಿನ ಸಂಕೋಲೆ ಈ ಬಗೆಯ ಆಪತ್ತುಗಳು ದೂರಾಗಲಿದೆ ಎಂಬುವುದು ಧಾರ್ಮಿಕ ನಂಬಿಕೆ.
ಪ್ರಾಣ ಪ್ರತಿಷ್ಠಾಪನೆಗೆ ಇರುವ ಶುಭ ಮುಹೂರ್ತ ಜನವರಿ 22 ಮಧ್ಯಾಹ್ನ 12:29:08 ಸೆಕೆಂಡ್‌ನಿಂದ 12:30:32 ಸೆಕೆಂಡ್‌ ಒಳಗಡೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು.

ಜನವರಿ 22ರ ಸೋಮವಾರ ಮಂಗಳಕರವಾದ ಮೃಗಶಿರಾ ನಕ್ಷತ್ರ ಬೆಳಗ್ಗೆ 3.52ಕ್ಕೆ ಶುರುವಾಗುವುದು. ಮೃಗಶಿರಾ ನಕ್ಷತ್ರ ಸಮಯ ಜನವರಿ 23ರ ಮಂಗಳವಾರ ಬೆಳಗ್ಗೆ 4:58ರ ವರೆಗೆ ಇರಲಿದೆ, ಇದು ಕೂಡ ಅತ್ಯಂತ ಶುಭ ಸಮಯವಾಗಿದೆ.

ಅಯೋಧ್ಯೆ ಜನ್ಮದಿನದಂದೇ ಪ್ರಾಣಪ್ರತಿಷ್ಠಾಪನೆ
. ಜನವರಿ 22ರ 12.30ರ ಸಮಯ ಅಭಿಜಿತ್ ಮುಹೂರ್ತವಾಗಿದೆ. ಅಭಿಜಿತ್ ಮುಹೂರ್ತವು ಬೆಳಗ್ಗೆ 11:51 ರಿಂದ ಮಧ್ಯಾಹ್ನ 12:33 ರವರೆಗೆ ಇರಲಿದೆ. ಶ್ರೀರಾಮನ ಈ ಅಭಿಜಿತ್ ಮುಹೂರ್ತದಲ್ಲಿಯೇ ಜನಿಸಿದನು ಎಂದು ರಾಮಾಯಣದಲ್ಲಿ ಹೇಳಲಾಗಿದೆ.

ಹಿಂದೂ ಪುರಾಣದ ಪ್ರಕಾರ ಇದೇ ಅಭಿಜಿತ್ ಮುಹೂರ್ತದಲ್ಲಿ ಶಿವನು ರಾಕ್ಷಸನಾದ ತ್ರಿಪುರಾಸುರನನ್ನು ಕೊಂದ ಎಂದು ಹೇಳಲಾಗುವುದು. ಹೀಗೆ ಶತ್ರುಗಳ ಅವನತಿಗೆ ಈ ಮುಹೂರ್ತ ಶುಭವಾಗಿದೆ, ಈ ಸಮಯ ಸದಾ ಜಯವನ್ನು ನೀಡಲಿದೆ. ಹೀಗಾಗಿ ಹೊಸ ಉದ್ಯಮ, ವ್ಯವಹಾರ, ಕೆಲಸ, ಹಣಕಾಸು ಹೂಡಿಕೆ, ಗೃಹಪ್ರವೇಶ, ಸಮಾರಂಭ ಮುಂತಾದ ಶುಭ ಕಾರ್ಯಗಳಿಗೆ ಈ ಮುಹೂರ್ತ ಉತ್ತಮವೆಂದು ಪರಿಗಣಿಸಲಾಗುವುದು.

ಜನವರಿ 22ರಂದು ಪ್ರಾಣಪ್ರತಿಷ್ಠಾಪನೆಯ ಸಮಯದಲ್ಲಿ ಪ್ರಧಾನಿ ಮೋದಿ, ಲಕ್ಷ್ಮಿ ಕಾಂತ್‌ ದೀಕ್ಷಿತ್, ಉತ್ತರ ಪ್ರದೇಶದ ಮುಖ್ಯಮಂತ್ರ ಯೋಗಿ ಆದಿತ್ಯ ನಾಥ್‌, ರಾಜ್ಯಪಾಲರಾದ ಆನಂದಿಬೆನ್‌ ಪಾಟೇಲ್, ಆರ್‌ಎಸ್‌ಎಸ್‌ ಮುಖಂಡ ಮೋಹನ್ ಭಾಗವತ್‌ರಷ್ಟೇ ಇರಲಿದ್ದಾರೆ.

English summary

Ram Mandir inauguration: Karnataka Govt Directs All Temples To Perform Special Aarti

Ram Mandir inauguration: Karnataka govt directs all temples to perform special aarti
Story first published: Monday, January 8, 2024, 20:34 [IST]
X
Desktop Bottom Promotion