Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
ನಾಗರ ಪಂಚಮಿಯಂದು ಕಾಳ ಸರ್ಪದೋಷ ನಿವಾರಣೆಗೆ ಪರಿಹಾರ
ಜ್ಯೋತಿಷ್ಯದ ಪ್ರಕಾರ ಹಾವು ರಾಹು-ಕೇತುವನ್ನು ಪ್ರತಿನಿಧಿಸುತ್ತದೆ. ಹಾವಿನ ತಲೆ ರಾಹು, ಬಾಲ ಕೇತುವನ್ನು ಪ್ರತಿನಿಧಿಸುತ್ತದೆ. ಉಳಿದ 7 ಗ್ರಹಗಳ ಮೇಲೆ ರಾಹು-ಕೇತು ಪ್ರಭಾವ ಬೀರುವುದು. ರಾಹು-ಕೇತು ದೋಷವಿರುವವರಲ್ಲಿ ಕಾಳಸರ್ಪ ದೋಷವಿರುತ್ತದೆ. ಕಾಳ ಸರ್ಪ ದೋಷವಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಕಾಳಸರ್ಪ ದೋಷವಿದ್ದರೆ ಕೆಲವೊಂದು ಸೂಚನೆಗಳು ದೊರೆಯುತ್ತದೆ, ಆ ಸೂಚನೆಗಳು ಕಂಡು ಬಂದರೆ ಕಾಳ ಸರ್ಪದೋಷವಿದೆ ಎಂದರ್ಥ:

ಕಾಳಸರ್ಪ ದೋಷದ ಸೂಚನೆಗಳು
* ಕಾಳ ಸರ್ಪ ದೋಷವಿದ್ದರೆ ತೀರಿ ಹೋದವರು ಕನಸ್ಸಿನಲ್ಲಿ ಬರುತ್ತದೆ. ಇತ್ತೀಚೆಗೆ ಯಾರಾದರೂ ತೀರಿ ಹೋಗಿದ್ದರೆ ಅವರು ಕನಸ್ಸಿನಲ್ಲಿ ಬರುತ್ತದೆ.
* ನಮ್ಮೆಲ್ಲಾ ಕೆಲಸಗಳು ಯಾವುದೋ ಕಾರಣದಿಂದಾಗಿ ಅಡೆತಡೆಯಾಗುತ್ತಿದೆಯೆಲ್ಲಾ ಎಂದನಿಸಲಾರಂಭಿಸುವುದು
* ತಮ್ಮದೇ ಮನೆಯ ಕನಸು ಬೀಳಬಹುದು'
* ಸಾಮಾಜಿಕವಾಗಿ ಇಮೇಜ್ಗೆ ಧಕ್ಕೆಯಾಗಬಹುದು
* ಕಾಳಸರ್ಪದೋಷವಿದ್ದರೆ ಸಂತಾನದೋಷ ಉಂಟಾಗುವುದು
* ಹಾವು, ಹಾವು ಕಚ್ಚಿದಂಥ ಕನಸು ಬೀಳುವುದು
ನಾಗರ ಪಂಚಮಿಯನ್ನು ಆಗಸ್ಟ್ 21ರಂದು ಆಚರಿಸಲಾಗುವುದು. ಈ ದಿನ ನಾಗದೇವತೆಯನ್ನು ಪೂಜಿಸಲಾಗುವುದು. ನಾಗನ ಆರಾಧನೆ ಮಾಡದರೆ ನಾಗದೋಷದಿಂದ ಪರಿಹಾರ ಸಿಗುವುದು ಎಂಬ ನಂಬಿಕೆ. ಈ ದಿನ ಕಾಳ ಸರ್ಪ ದೋಷಕ್ಕೆ ಈ ರೀತಿ ಆರಾಧನೆ ಮಾಡಿದರೆ ಒಳ್ಳೆಯದು
* ಈ ದಿನ ನಾಗಮೂರ್ತಿಯನ್ನು ಆರಾಧಿಸಲಾಗುವುದು.
* ನೀರು, ಹಾಲು, ಆಹಾರ, ಹಣ್ಣುಗಳನ್ನು ನಾಗನಿಗೆ ಅರ್ಪಿಸಿ
* ಶ್ರೀ ಕೃಷ್ಣನ ಆರಾಧಿಸಿ, 11 ತೆಂಗಿನಕಾಯಿಯನ್ನು ಹರಿಯುವ ನೀರಿನಲ್ಲಿ ಬಿಡಿ
* ರಾಹು ಬೀಜ ಮಂತ್ರವನ್ನು ಪಠಿಸಿ.
ರಾಹು ಬೀಜ ಮಂತ್ರ: ಓಂ ಭ್ರಂ ಭ್ರೂಂ ಸಃ ರಾಹವೇ ನಮಃ
ಈ ಮಂತ್ರವನ್ನು 108 ಬಾರಿ ಪಠಿಸಿ.
* ಮಹಾ ಮೃತ್ಯುಂಜಯ ಮಂತ್ರವನ್ನು 108 ಬಾರಿ ಪಠಿಸಿ
ಕಾಳಸರ್ಪ ದೋಷಕ್ಕೆ ಪರಿಹಾರ
* ಸರ್ಪ ಮಂತ್ರ , ಸರ್ಪ ಗಾಯತ್ರಿ ಮಂತ್ರ ಪಠಿಸಿ
* ಭೈರವ ದೇವನನ್ನು ಆರಾಧಿಸಿ
* ನಾಗರ ಪಂಚಮಿ ಸೋಮವಾರ ಬಂದಿದೆ, ಈ ದಿನ ನೀವು ಶಿವಲಿಂಗಕ್ಕೆ ಅಭಿಷೇಕ ಮಾಡಿಸಿ.
* ಮಹಾ ಮೃತ್ಯುಂಜಯ ಮಂತ್ರ ಪಠಿಸಿ
* ಶಿವನಿಗೆ ಶ್ರೀಗಂಧವನ್ನು ಅರ್ಪಿಸಿ
* ಈ ದಿನ ಆಹಾರವನ್ನು ದಾನ ಮಾಡಿದರೆ ಒಳ್ಳೆಯದು
ಪ್ರತಿ ಶ್ರಾವಣ ಸೋಮವಾರ ಶಿವ ಲಿಂಗಕ್ಕೆ ತಪ್ಪದೆ ಜಲಾಭಿಷೇಕ ಮಾಡಿ.
ಮಂತ್ರ
ಓಂ ತ್ರ್ಯಯಂಬಕಂ ಯಜ್ಮಹೇ ಸುಗಂಧಿ ಪುಷ್ಠಿ ವರ್ಧನಂ
ಉರ್ವಾರುಕಮೀವ ಬಂಧನಾತ್ ಮೃತ್ಯುರೊರ್ಮುಕ್ಶಯ ಮಮ್ರಿತಾತ್
ಈ ಮಂತ್ರವನ್ನು 108 ಬಾರಿ ಪಠಿಸಬೇಕು. ಈ ಮಂತ್ರವನ್ನು ಪಠಿಸುವುದರಿಂದ ನಾಗದೋಷದಿಂದ ಪರಿಹಾರ ಸಿಗುವುದು ಮಾತ್ರವಲ್ಲ ಅಕಾಲಿಕ ಮರಣ ಭಯ ದೂರಾಗುವುದು.
ಈ ಮಂತ್ರವನ್ನು ದಿನದ ಯಾವುದೇ ಸಮಯದಲ್ಲಿ ಪಠಿಸಿ
ನೀವು ಈ ಮಂತ್ರವನ್ನು ದಿನದ ಯಾವುದೇ ಸಮಯದಲ್ಲಿ ಪಠಿಸಿ, ಸ್ನಾನದ ಬಳಿಕ ಈ ಮಂತ್ರವನ್ನು ಹೇಳುತ್ತಾ ದೇಹಕ್ಕೆ ವಿಭೂತಿ ಹಚ್ಚುವುದು ಒಳ್ಳೆಯದು.
ಮಂತ್ರ ಪಠಣೆ ವಿಧಾನ
ಈ ಮಂತ್ರವನ್ನು ಪಠಿಸುವಾಗ ಉಚ್ಛಾರಣೆ ದೋಷವಿರಬಹುದು. ಈ ಮಂತ್ರವನ್ನು ಪಠಿಸಲು ಒಂದೆಡೆ ಧ್ಯಾನಸ್ಥ ಸ್ಥಿತಿಯಲ್ಲಿ ಕೂತಿರಬೇಕು. ನಿಮ್ಮ ಮುಂದೆ ಒಂದು ಕಮಂಡಲದಲ್ಲಿ ನೀರನ್ನು ತುಂಬಿಡಿ, ನಿಮ್ಮ ಬಲ ಹಸ್ತದಿಂದ ಆ ಕಮಂಡಲವನ್ನು ಮುಚ್ಚಿ 108 ಬಾರಿ ಮಂತ್ರ ಫಠಣೆ ಮಾಡಬೇಕು, ನಂತರ ಆ ನೀರನ್ನು ಮನೆಯ ಒಳಗಡೆ ಪ್ರೋಕ್ಷಣೆ ಮಾಡಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುವುದು, ಮನೆಗೆ ಶುಭಫಲ ಉಂಟಾಗುವುದು.



Click it and Unblock the Notifications