Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಮಕ್ಕಳು ರುದ್ರಾಕ್ಷಿ ಧರಿಸಿದರೆ ಈ ಪ್ರಯೋಜನಗಳಿವೆ, ಈ ನಿಯಮಗಳೂ ತಿಳಿದಿರಲಿ
ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ತುಂಬಾನೇ ಪ್ರಾಮುಖ್ಯತೆ ಇದೆ. ಯಾರು ರುದ್ರಾಕ್ಷಿಯನ್ನು ಧರಿಸುತ್ತಾರೋ ಅವರು ಇದರ ಪ್ರಯೋಜನಗಳನ್ನು ಪಡೆಯುತ್ತಾರೆ ಎಂಬುವುದು ಬಲವಾದ ನಂಬಿಕೆ. ರುದ್ರಾಕ್ಷಿಗೆ ಅಂಥ ಶಕ್ತಿ ಇದೆ. ರುದ್ರಾಕ್ಷಿಯನ್ನು ಶಿವನ ಪ್ರತಿರೂಪವೆಂದೇ ಹೇಳಲಾಗುವುದು.

ರುದ್ರಾಕ್ಷಿ ಧರಿಸಿದರೆ ಮನಸ್ಸಿಗೆ ಶಾಂತಿ ಸಿಗುವುದು, ದೇಹದ ಆರೋಗ್ಯ ಉತ್ತಮವಾಗುವುದು, ಜೀವನದಲ್ಲಿ ಖುಷಿ ಇರುತ್ತದೆ. ಆದರೆ ಈ ರುದ್ರಾಕ್ಷಿಯನ್ನು ಯಾರು, ಯಾವಾಗ ಬೇಕಾದರೂ ಧರಿಸಲು ಸಾಧ್ಯವಿಲ್ಲ. ಈ ರುದ್ರಾಕ್ಷಿಯನ್ನು ಧರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರೆ ಮಾತ್ರ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು. ಅವುಗಳ ಕುರಿತ ಹೆಚ್ಚಿನ ಮಾಹಿತಿ ತಿಳಿಯುವುದಾದರೆ :
ರುದ್ರಾಕ್ಷಿಯನ್ನು ಬೆಳಗ್ಗೆ ಹೊತ್ತಿನಲ್ಲಿಯೇ ಧರಿಸಬೇಕು
ರುದ್ರಾಕ್ಷಿಯನ್ನು ಯಾವುದೋ ಹೊತ್ತಿನಲ್ಲಿ ಧರಿಸುವಂತಿಲ್ಲ, ರುದ್ರಾಕ್ಷಿಯನ್ನು ಬೆಳಗ್ಗೆ ಹೊತ್ತಿನಲ್ಲಿ ಶುಭ ಸಮಯದಲ್ಲಿಯೇ ಧರಿಸಬೇಕು. ಅಲ್ಲದೆ ಮಲಗುವ ಮುನ್ನ ರುದ್ರಾಕ್ಷಿ ಬಿಚ್ಚಿ ದೇವರ ಮುಂದೆ ಇಡಬೇಕು. ಹೀಗೆ ಇಡುವಾಗ ರುದ್ರಾಕ್ಷಿ ಮಂತ್ರವನ್ನು 9 ಬಾರಿ ಪಠಿಸಬೇಕು.
ರುದ್ರಾಕ್ಷಿಯನ್ನು ಮಡಿಯಿಂದಲೇ ಧರಿಸಬೇಕು
ಯಾರು ರುದ್ರಾಕ್ಷಿಯನ್ನು ಧರಿಸುತ್ತಾರೋ ಅವರು ದೇಹ ಹಾಗೂ ಮನಸ್ಸಿನಲ್ಲಿ ಮಡಿಯಿಂದಿರಬೇಕು. ಸ್ನಾನ ಮಾಡಿದ ಬಳಿಕ ರುದ್ರಾಕ್ಷಿ ಧರಿಸಬೇಕು. ರುದ್ರಾಕ್ಷಿ ಧರಿಸಿದವರು ಸುಳ್ಳು ಹೇಳಬಾರದು. ಮತ್ತೊಬ್ಬರಿಗೆ ವಂಚನೆ ಮಾಡಬಾರದು.
ಇನ್ನು ರುದ್ರಾಕ್ಷಿ ಮಾಲೆಯನ್ನು ಮಕ್ಕಳಿಗೆ ಧರಿಸುವುದರಿಂದ ಈ ಪ್ರಯೋಜನಗಳಿವೆ
* ಮಕ್ಕಳನ್ನು ಋಣಾತ್ಮಕ ಶಕ್ತಿಯಿಂದ ರಕ್ಷಿಸುತ್ತದೆ. ಮಕ್ಕಳಲ್ಲಿ ಆಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಿಸುತ್ತದೆ. ರುದ್ರಾಕ್ಷಿಯನ್ನು ಧರಿಸಿದಾಗ ಓಂ ನಮ ಶಿವಾಯ ಮಂತ್ರ ಪಠಿಸಲು ಮಕ್ಕಳಿಗೆ ಹೇಳಬೇಕು.
* ವಿದ್ಯಾರ್ಥಿಗಳಿಗೆ ತುಂಬಾ ಒಳ್ಲೆಯದು
ಓದುವ ವಿದ್ಯಾರ್ಥಿಗಳು 4 ಮುಖಿ ಅಥವಾ 6 ಮುಖಿ ರುದ್ರಾಕ್ಷಿ ಧರಿಸಿದರೆ ಒಳ್ಳೆಯದು. ಮಕ್ಕಳಿಗೆ ಏಕಮುಖಿ ರುದ್ರಾಕ್ಷಿ ಧರಿಸಲೇಬಾರದು, ಈ ರುದ್ರಾಕ್ಷಿಯನ್ನು ತಪಸ್ವಿಗಳಷ್ಟೇ ಧರಿಸುತ್ತಾರೆ.
* ರುದ್ರಾಕ್ಷಿ ಧರಿಸುವುದರಿಂದ ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿ.
* ರುದ್ರಾಕ್ಷಿಯನ್ನು ಬೇರೆಯವರಿಂದ ಪಡೆದಿರಬಾರದು ಅಥವಾ ಸಾಲ ಮಾಡಿ ತೆಗೆದಿರಬಾರದು.
ರುದ್ರಾಕ್ಷಿಯನ್ನು ಕಪ್ಪು ದಾರದಲ್ಲಿ ಧರಿಸಬಾರದು
ಕೆಲವರು ರುದ್ರಾಕ್ಷಿಯನ್ನು ಕಪ್ಪು ದಾರದಲ್ಲಿ ಧರಿಸುತ್ತಾರೆ. ಆದರೆ ರುದ್ರಾಕ್ಷಿಯನ್ನು ಕಪ್ಪು ದಾರದಲ್ಲಿ ಧರಿಸಬಾರದು. ರುದ್ರಾಕ್ಷಿಯನ್ನು ಕೆಂಪು ಅಥವಾ ಅರಿಶಿಣ ದಾರದಲ್ಲಿ ಧರಿಸಬೇಕು.
* ಒಡೆದ ರುದ್ರಾಕ್ಷಿ ಧರಿಸಬಾರದು
ರುದ್ರಾಕ್ಷಿ ಒಡೆದು ಹೋಗಿದ್ದರೆ ಅದನ್ನು ಬದಲಾಯಿಸಬೇಕು.
ಮನೆಯಲ್ಲಿ ಈ ರೀತಿಯಾದಾಗ ಧರಿಸಬಾರದು
* ಮನೆಯಲ್ಲಿ ಮಗುವಿನ ಜನನವಾದರೆ ಧರಿಸಬಾರದು
* ಮನೆಯಲ್ಲಿ ಸಾವಾದರೆ ಅಥವಾ ಸಾವಿಗೆ ಹೋಗುವಾಗ ಧರಿಸಬಾರದು
* ರುದ್ರಾಕ್ಷಿ ಧರಿಸಿ ಮಾಂಸಾಹಾರ ಸೇವಿಸಬಾರದು.
ತುಂಬಾ ಚಿಕ್ಕ ಮಕ್ಕಳಿಗೆ ಧರಿಸಬೇಡಿ
ರುದ್ರಾಕ್ಷಿಯನ್ನು ಸ್ವಲ್ಪ ತಿಳುವಳಿಕೆ ಬಂದ ಮೇಲೆ ಮಕ್ಕಲಿಗೆ ಧರಿಸಬೇಕು, ಆವಾಗ ಅವರು ರುದ್ರಾಕ್ಷಿ ನಿಯಮಗಳನ್ನು ಚೆನ್ನಾಗಿ ಅನುಸರಿಸುತ್ತಾರೆ.



Click it and Unblock the Notifications