Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಮಕ್ಕಳು ರುದ್ರಾಕ್ಷಿ ಧರಿಸಿದರೆ ಈ ಪ್ರಯೋಜನಗಳಿವೆ, ಈ ನಿಯಮಗಳೂ ತಿಳಿದಿರಲಿ
ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ತುಂಬಾನೇ ಪ್ರಾಮುಖ್ಯತೆ ಇದೆ. ಯಾರು ರುದ್ರಾಕ್ಷಿಯನ್ನು ಧರಿಸುತ್ತಾರೋ ಅವರು ಇದರ ಪ್ರಯೋಜನಗಳನ್ನು ಪಡೆಯುತ್ತಾರೆ ಎಂಬುವುದು ಬಲವಾದ ನಂಬಿಕೆ. ರುದ್ರಾಕ್ಷಿಗೆ ಅಂಥ ಶಕ್ತಿ ಇದೆ. ರುದ್ರಾಕ್ಷಿಯನ್ನು ಶಿವನ ಪ್ರತಿರೂಪವೆಂದೇ ಹೇಳಲಾಗುವುದು.

ರುದ್ರಾಕ್ಷಿ ಧರಿಸಿದರೆ ಮನಸ್ಸಿಗೆ ಶಾಂತಿ ಸಿಗುವುದು, ದೇಹದ ಆರೋಗ್ಯ ಉತ್ತಮವಾಗುವುದು, ಜೀವನದಲ್ಲಿ ಖುಷಿ ಇರುತ್ತದೆ. ಆದರೆ ಈ ರುದ್ರಾಕ್ಷಿಯನ್ನು ಯಾರು, ಯಾವಾಗ ಬೇಕಾದರೂ ಧರಿಸಲು ಸಾಧ್ಯವಿಲ್ಲ. ಈ ರುದ್ರಾಕ್ಷಿಯನ್ನು ಧರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರೆ ಮಾತ್ರ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು. ಅವುಗಳ ಕುರಿತ ಹೆಚ್ಚಿನ ಮಾಹಿತಿ ತಿಳಿಯುವುದಾದರೆ :
ರುದ್ರಾಕ್ಷಿಯನ್ನು ಬೆಳಗ್ಗೆ ಹೊತ್ತಿನಲ್ಲಿಯೇ ಧರಿಸಬೇಕು
ರುದ್ರಾಕ್ಷಿಯನ್ನು ಯಾವುದೋ ಹೊತ್ತಿನಲ್ಲಿ ಧರಿಸುವಂತಿಲ್ಲ, ರುದ್ರಾಕ್ಷಿಯನ್ನು ಬೆಳಗ್ಗೆ ಹೊತ್ತಿನಲ್ಲಿ ಶುಭ ಸಮಯದಲ್ಲಿಯೇ ಧರಿಸಬೇಕು. ಅಲ್ಲದೆ ಮಲಗುವ ಮುನ್ನ ರುದ್ರಾಕ್ಷಿ ಬಿಚ್ಚಿ ದೇವರ ಮುಂದೆ ಇಡಬೇಕು. ಹೀಗೆ ಇಡುವಾಗ ರುದ್ರಾಕ್ಷಿ ಮಂತ್ರವನ್ನು 9 ಬಾರಿ ಪಠಿಸಬೇಕು.
ರುದ್ರಾಕ್ಷಿಯನ್ನು ಮಡಿಯಿಂದಲೇ ಧರಿಸಬೇಕು
ಯಾರು ರುದ್ರಾಕ್ಷಿಯನ್ನು ಧರಿಸುತ್ತಾರೋ ಅವರು ದೇಹ ಹಾಗೂ ಮನಸ್ಸಿನಲ್ಲಿ ಮಡಿಯಿಂದಿರಬೇಕು. ಸ್ನಾನ ಮಾಡಿದ ಬಳಿಕ ರುದ್ರಾಕ್ಷಿ ಧರಿಸಬೇಕು. ರುದ್ರಾಕ್ಷಿ ಧರಿಸಿದವರು ಸುಳ್ಳು ಹೇಳಬಾರದು. ಮತ್ತೊಬ್ಬರಿಗೆ ವಂಚನೆ ಮಾಡಬಾರದು.
ಇನ್ನು ರುದ್ರಾಕ್ಷಿ ಮಾಲೆಯನ್ನು ಮಕ್ಕಳಿಗೆ ಧರಿಸುವುದರಿಂದ ಈ ಪ್ರಯೋಜನಗಳಿವೆ
* ಮಕ್ಕಳನ್ನು ಋಣಾತ್ಮಕ ಶಕ್ತಿಯಿಂದ ರಕ್ಷಿಸುತ್ತದೆ. ಮಕ್ಕಳಲ್ಲಿ ಆಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಿಸುತ್ತದೆ. ರುದ್ರಾಕ್ಷಿಯನ್ನು ಧರಿಸಿದಾಗ ಓಂ ನಮ ಶಿವಾಯ ಮಂತ್ರ ಪಠಿಸಲು ಮಕ್ಕಳಿಗೆ ಹೇಳಬೇಕು.
* ವಿದ್ಯಾರ್ಥಿಗಳಿಗೆ ತುಂಬಾ ಒಳ್ಲೆಯದು
ಓದುವ ವಿದ್ಯಾರ್ಥಿಗಳು 4 ಮುಖಿ ಅಥವಾ 6 ಮುಖಿ ರುದ್ರಾಕ್ಷಿ ಧರಿಸಿದರೆ ಒಳ್ಳೆಯದು. ಮಕ್ಕಳಿಗೆ ಏಕಮುಖಿ ರುದ್ರಾಕ್ಷಿ ಧರಿಸಲೇಬಾರದು, ಈ ರುದ್ರಾಕ್ಷಿಯನ್ನು ತಪಸ್ವಿಗಳಷ್ಟೇ ಧರಿಸುತ್ತಾರೆ.
* ರುದ್ರಾಕ್ಷಿ ಧರಿಸುವುದರಿಂದ ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿ.
* ರುದ್ರಾಕ್ಷಿಯನ್ನು ಬೇರೆಯವರಿಂದ ಪಡೆದಿರಬಾರದು ಅಥವಾ ಸಾಲ ಮಾಡಿ ತೆಗೆದಿರಬಾರದು.
ರುದ್ರಾಕ್ಷಿಯನ್ನು ಕಪ್ಪು ದಾರದಲ್ಲಿ ಧರಿಸಬಾರದು
ಕೆಲವರು ರುದ್ರಾಕ್ಷಿಯನ್ನು ಕಪ್ಪು ದಾರದಲ್ಲಿ ಧರಿಸುತ್ತಾರೆ. ಆದರೆ ರುದ್ರಾಕ್ಷಿಯನ್ನು ಕಪ್ಪು ದಾರದಲ್ಲಿ ಧರಿಸಬಾರದು. ರುದ್ರಾಕ್ಷಿಯನ್ನು ಕೆಂಪು ಅಥವಾ ಅರಿಶಿಣ ದಾರದಲ್ಲಿ ಧರಿಸಬೇಕು.
* ಒಡೆದ ರುದ್ರಾಕ್ಷಿ ಧರಿಸಬಾರದು
ರುದ್ರಾಕ್ಷಿ ಒಡೆದು ಹೋಗಿದ್ದರೆ ಅದನ್ನು ಬದಲಾಯಿಸಬೇಕು.
ಮನೆಯಲ್ಲಿ ಈ ರೀತಿಯಾದಾಗ ಧರಿಸಬಾರದು
* ಮನೆಯಲ್ಲಿ ಮಗುವಿನ ಜನನವಾದರೆ ಧರಿಸಬಾರದು
* ಮನೆಯಲ್ಲಿ ಸಾವಾದರೆ ಅಥವಾ ಸಾವಿಗೆ ಹೋಗುವಾಗ ಧರಿಸಬಾರದು
* ರುದ್ರಾಕ್ಷಿ ಧರಿಸಿ ಮಾಂಸಾಹಾರ ಸೇವಿಸಬಾರದು.
ತುಂಬಾ ಚಿಕ್ಕ ಮಕ್ಕಳಿಗೆ ಧರಿಸಬೇಡಿ
ರುದ್ರಾಕ್ಷಿಯನ್ನು ಸ್ವಲ್ಪ ತಿಳುವಳಿಕೆ ಬಂದ ಮೇಲೆ ಮಕ್ಕಲಿಗೆ ಧರಿಸಬೇಕು, ಆವಾಗ ಅವರು ರುದ್ರಾಕ್ಷಿ ನಿಯಮಗಳನ್ನು ಚೆನ್ನಾಗಿ ಅನುಸರಿಸುತ್ತಾರೆ.



Click it and Unblock the Notifications