Latest Updates
-
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ?
ಆಗಸ್ಟ್ 5ಕ್ಕೆ ಸಂಪತ್ತು ಶನಿವಾರ: ಶನಿದೋಷದಿಂದ ಪಾರಾಗಲು ಶ್ರಾವಣ ಶನಿವಾರ ಏನು ಮಾಡಬೇಕು?
ಶ್ರಾವಣ ತಿಂಗಳು ಹಿಂದೂಗಳಿಗೆ ಪವಿತ್ರವಾದ ತಿಂಗಳು, ಅದರಲ್ಲೂ ಈ ವರ್ಷ ಅಧಿಕ ಮಾಸ ಬಂದಿರುವುದರಿಂದ ಎರಡು ತಿಂಗಳು ಶ್ರಾವಣ ಮಾಸವಿದೆ. ಶ್ರಾವಣ ಸೋಮವಾರ ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನವೆಂದು ಹೇಳಲಾಗುವುದು, ಶ್ರಾವಣ ಸೋಮವಾರದಂತೆ ಶ್ರಾವಣ ಶನಿವಾರ ಕೂಡ ತುಂಬಾನೇ ಮುಖ್ಯ. ಶ್ರಾವಣ ಶನಿವಾರವನ್ನು ಸಂಪತ್ತು ಶನಿವಾರ ಎಂದು ಕರೆಯಲಾಗುವುದು.
ಶನಿವಾರದಂದು ಶನಿದೇವನ ಪೂಜಿಸಲಾಗುವುದು, ಶ್ರಾವಣ ಶನಿವಾರದಲ್ಲಿ ಶಿವನ ಪೂಜೆ ಮಾಡಿ ಶನಿಯ ಆರಾಧನೆ ಮಾಡುವುದರಿಂದ ಶನಿದೋಷವಿರುವವರಿಗೆ ಉತ್ತಮ ಪರಿಹಾರ ಸಿಗಲಿದೆ.

ಸಂಪತ್ತು ಶನಿವಾರದ ಮಹತ್ವ
ಶ್ರಾವಣ ಶನಿವಾರದಂದುಶಿವನ ಆರಾಧನೆ ಮಾಡುವುದರಿಂದ ಕಷ್ಟಗಳೆಲ್ಲಾ ದೂರಾಗಿ ಸಂಪತ್ತು ಹೆಚ್ಚಾಗಲಿದೆ ಎಂಬ ನಂಬಿಕೆ ಇದೆ, ಈ ಕಾರಣಕ್ಕೆ ಶ್ರಾವಣ ಶನಿವಾರವನ್ನು ಸಂಪತ್ತು ಶನಿವಾರ ಎಂದು ಕರೆಯಲಾಗುವುದು. ಶ್ರಾವಣ ಶನಿವಾರದಂದು ಸಂಪತ್ತು ವೃದ್ಧಿಗಾಗಿ ಶಿವನಿಗೆ ಅಭಿಷೇಕ ಮಾಡಿಸಬೇಕು.
ಶನಿ ದೋಷ ನಿವಾರಣೆಗೆ
ರಾಶಿಯಲ್ಲಿ ಶನಿದೋಷವಿದ್ದರೆ ತುಂಬಾನೇ ಕಷ್ಟಗಳನ್ನು ಎದುರಿಸಬೇಕಾಗುವುದು, ವೃತ್ತಿ ಜೀವನ, ವೈಯಕ್ತಿಕ ಬದುಕು, ಸಾಮಜಿಕ ಜೀವನ ಎಲ್ಲದರ ಮೇಲೂ ಕೆಟ್ಟ ಪ್ರಭಾವ ಬೀರುವುದು, ಈ ಕಾರಣಕ್ಕೆ ಶನಿದೋಷಕ್ಕೆ ಜನ ಭಯಪಡುತ್ತಾರೆ. ಶನಿ ಸಾಡೇಸಾತಿ ಅಥವಾ ಶನಿ ಧೈಯ್ಯ ಇರುವವರು ದೀರ್ಘ ಸಮಯದವರೆಗೆ ತುಂಬಾನೇ ಕಷ್ಟಪಡಬೇಕಾಗುತ್ತದೆ. ಶನಿಯ ಕೆಟ್ಟ ಪ್ರಭಾವ ಕಡಿಮೆ ಮಾಡಲು ಶನಿವಾರ ಶನಿ ದೇವಾಲಯಕ್ಕೆ ಹೋಗಿ ಪೂಜೆ ಮಾಡುವುದು ಒಳ್ಳೆಯದು.
ಶನಿ ದೋಷ ನಿವಾರಣೆಗೆ ಸಂಪತ್ತು ಶನಿವಾರ ಪೂಜೆ ಹೇಗೆ ಮಾಡಬೇಕು?
* ಈ ದಿನ ಕಪ್ಪು ಬಟ್ಟೆಗಳನ್ನು ಧರಿಸಬೇಕು
* ದೇವರಿಗೆ ಕಪ್ಪು ಎಳ್ಳು, ಕಪ್ಪು ಉದ್ದಿನ ಬೇಳೆ ಅರ್ಪಿಸಬೇಕು
* ಈ ದಿನ ಪೂರ್ತಿ ಉಪವಾಸವಿದ್ದು ಶನಿ ದೇವನಿಗೆ ಪೂಜೆ ಮಾಡಿದ ಬಳಿಕ ನಂತರ ಉಪವಾಸ ಮುರಿಯಬೇಕು.
* ಕೆಲವರು ಈ ದಿನ ಒಂದು ಹೊತ್ತಿನ ಊಟವನ್ನಷ್ಟೇ ಮಾಡುತ್ತಾರೆ, ಕೆಲವರು ಏನೂ ತಿನ್ನದೆ ಉಪವಾಸ ಮಾಡುತ್ತಾರೆ.
ಶನಿದೋಷವಿರುವವರು ಸಂಪತ್ತು ಶನಿವಾರ ಈ ಪರಿಹಾರವನ್ನು ಮಾಡಿ
* ಹನುಮಂತನ ದೇವಾಲಯಕ್ಕೆ ಹೋಗಿ ವೀಳ್ಯೆದೆಲೆ ಹಾಗೂ ಅಡಿಕೆಯನ್ನು ಅರ್ಪಿಸಿ, ಸಿಹಿ ಪಾನ್ ಕೂಡ ಅರ್ಪಿಸಬಹುದು, ಹೀಗೆ ಮಾಡುವುದರಿಂದ ನೀವು ಮಂಗಳಕರ ಫಲಿತಾಂಶವನ್ನು ಪಡೆಯಬಹುದು.
* ಹನುಮಂತನಿಗೆ ಸಿಂಧೂರ ಅರ್ಪಿಸಿ: ಶನಿವಾರ ಹನುಮಂತನಿಗೆ ಸಿಂಧೂರವನ್ನು ಅರ್ಪಿಸುವುದರಿಂದ ಹನುಮಂತನ ಕೃಪೆಯಿಂದಾಗಿ ಶನಿಯ ಕೆಟ್ಟ ಪ್ರಭಾವ ಕಡಿಮೆಯಾಗಲಿದೆ.
* ಹನುಮಂತನಿಗೆ ಧ್ವಜನಿಗೆ ಅರ್ಪಿಸಿ
ಶನಿ ಸಾಡೇಸಾತಿಯಿಂದಾಗಿ ತುಂಬಾನೇ ಕಷ್ಟಗಳನ್ನು ಎದುರಿಸುತ್ತಿದ್ದರು ಹನುಮಂತನಿಗೆ ಧ್ವಜವನ್ನು ಅರ್ಪಿಸಿ
ಹನುಮಾನ್ ಚಾಲೀಸ ಪಠಿಸಿ: ಈ ದಿನ ನೀವು ಹನುಮಾನ್ ಚಾಲೀಸ ಪಠಿಸಿ.
ಈ ಶನಿ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications











