Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಆಗಸ್ಟ್ 5ಕ್ಕೆ ಸಂಪತ್ತು ಶನಿವಾರ: ಶನಿದೋಷದಿಂದ ಪಾರಾಗಲು ಶ್ರಾವಣ ಶನಿವಾರ ಏನು ಮಾಡಬೇಕು?
ಶ್ರಾವಣ ತಿಂಗಳು ಹಿಂದೂಗಳಿಗೆ ಪವಿತ್ರವಾದ ತಿಂಗಳು, ಅದರಲ್ಲೂ ಈ ವರ್ಷ ಅಧಿಕ ಮಾಸ ಬಂದಿರುವುದರಿಂದ ಎರಡು ತಿಂಗಳು ಶ್ರಾವಣ ಮಾಸವಿದೆ. ಶ್ರಾವಣ ಸೋಮವಾರ ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನವೆಂದು ಹೇಳಲಾಗುವುದು, ಶ್ರಾವಣ ಸೋಮವಾರದಂತೆ ಶ್ರಾವಣ ಶನಿವಾರ ಕೂಡ ತುಂಬಾನೇ ಮುಖ್ಯ. ಶ್ರಾವಣ ಶನಿವಾರವನ್ನು ಸಂಪತ್ತು ಶನಿವಾರ ಎಂದು ಕರೆಯಲಾಗುವುದು.
ಶನಿವಾರದಂದು ಶನಿದೇವನ ಪೂಜಿಸಲಾಗುವುದು, ಶ್ರಾವಣ ಶನಿವಾರದಲ್ಲಿ ಶಿವನ ಪೂಜೆ ಮಾಡಿ ಶನಿಯ ಆರಾಧನೆ ಮಾಡುವುದರಿಂದ ಶನಿದೋಷವಿರುವವರಿಗೆ ಉತ್ತಮ ಪರಿಹಾರ ಸಿಗಲಿದೆ.

ಸಂಪತ್ತು ಶನಿವಾರದ ಮಹತ್ವ
ಶ್ರಾವಣ ಶನಿವಾರದಂದುಶಿವನ ಆರಾಧನೆ ಮಾಡುವುದರಿಂದ ಕಷ್ಟಗಳೆಲ್ಲಾ ದೂರಾಗಿ ಸಂಪತ್ತು ಹೆಚ್ಚಾಗಲಿದೆ ಎಂಬ ನಂಬಿಕೆ ಇದೆ, ಈ ಕಾರಣಕ್ಕೆ ಶ್ರಾವಣ ಶನಿವಾರವನ್ನು ಸಂಪತ್ತು ಶನಿವಾರ ಎಂದು ಕರೆಯಲಾಗುವುದು. ಶ್ರಾವಣ ಶನಿವಾರದಂದು ಸಂಪತ್ತು ವೃದ್ಧಿಗಾಗಿ ಶಿವನಿಗೆ ಅಭಿಷೇಕ ಮಾಡಿಸಬೇಕು.
ಶನಿ ದೋಷ ನಿವಾರಣೆಗೆ
ರಾಶಿಯಲ್ಲಿ ಶನಿದೋಷವಿದ್ದರೆ ತುಂಬಾನೇ ಕಷ್ಟಗಳನ್ನು ಎದುರಿಸಬೇಕಾಗುವುದು, ವೃತ್ತಿ ಜೀವನ, ವೈಯಕ್ತಿಕ ಬದುಕು, ಸಾಮಜಿಕ ಜೀವನ ಎಲ್ಲದರ ಮೇಲೂ ಕೆಟ್ಟ ಪ್ರಭಾವ ಬೀರುವುದು, ಈ ಕಾರಣಕ್ಕೆ ಶನಿದೋಷಕ್ಕೆ ಜನ ಭಯಪಡುತ್ತಾರೆ. ಶನಿ ಸಾಡೇಸಾತಿ ಅಥವಾ ಶನಿ ಧೈಯ್ಯ ಇರುವವರು ದೀರ್ಘ ಸಮಯದವರೆಗೆ ತುಂಬಾನೇ ಕಷ್ಟಪಡಬೇಕಾಗುತ್ತದೆ. ಶನಿಯ ಕೆಟ್ಟ ಪ್ರಭಾವ ಕಡಿಮೆ ಮಾಡಲು ಶನಿವಾರ ಶನಿ ದೇವಾಲಯಕ್ಕೆ ಹೋಗಿ ಪೂಜೆ ಮಾಡುವುದು ಒಳ್ಳೆಯದು.
ಶನಿ ದೋಷ ನಿವಾರಣೆಗೆ ಸಂಪತ್ತು ಶನಿವಾರ ಪೂಜೆ ಹೇಗೆ ಮಾಡಬೇಕು?
* ಈ ದಿನ ಕಪ್ಪು ಬಟ್ಟೆಗಳನ್ನು ಧರಿಸಬೇಕು
* ದೇವರಿಗೆ ಕಪ್ಪು ಎಳ್ಳು, ಕಪ್ಪು ಉದ್ದಿನ ಬೇಳೆ ಅರ್ಪಿಸಬೇಕು
* ಈ ದಿನ ಪೂರ್ತಿ ಉಪವಾಸವಿದ್ದು ಶನಿ ದೇವನಿಗೆ ಪೂಜೆ ಮಾಡಿದ ಬಳಿಕ ನಂತರ ಉಪವಾಸ ಮುರಿಯಬೇಕು.
* ಕೆಲವರು ಈ ದಿನ ಒಂದು ಹೊತ್ತಿನ ಊಟವನ್ನಷ್ಟೇ ಮಾಡುತ್ತಾರೆ, ಕೆಲವರು ಏನೂ ತಿನ್ನದೆ ಉಪವಾಸ ಮಾಡುತ್ತಾರೆ.
ಶನಿದೋಷವಿರುವವರು ಸಂಪತ್ತು ಶನಿವಾರ ಈ ಪರಿಹಾರವನ್ನು ಮಾಡಿ
* ಹನುಮಂತನ ದೇವಾಲಯಕ್ಕೆ ಹೋಗಿ ವೀಳ್ಯೆದೆಲೆ ಹಾಗೂ ಅಡಿಕೆಯನ್ನು ಅರ್ಪಿಸಿ, ಸಿಹಿ ಪಾನ್ ಕೂಡ ಅರ್ಪಿಸಬಹುದು, ಹೀಗೆ ಮಾಡುವುದರಿಂದ ನೀವು ಮಂಗಳಕರ ಫಲಿತಾಂಶವನ್ನು ಪಡೆಯಬಹುದು.
* ಹನುಮಂತನಿಗೆ ಸಿಂಧೂರ ಅರ್ಪಿಸಿ: ಶನಿವಾರ ಹನುಮಂತನಿಗೆ ಸಿಂಧೂರವನ್ನು ಅರ್ಪಿಸುವುದರಿಂದ ಹನುಮಂತನ ಕೃಪೆಯಿಂದಾಗಿ ಶನಿಯ ಕೆಟ್ಟ ಪ್ರಭಾವ ಕಡಿಮೆಯಾಗಲಿದೆ.
* ಹನುಮಂತನಿಗೆ ಧ್ವಜನಿಗೆ ಅರ್ಪಿಸಿ
ಶನಿ ಸಾಡೇಸಾತಿಯಿಂದಾಗಿ ತುಂಬಾನೇ ಕಷ್ಟಗಳನ್ನು ಎದುರಿಸುತ್ತಿದ್ದರು ಹನುಮಂತನಿಗೆ ಧ್ವಜವನ್ನು ಅರ್ಪಿಸಿ
ಹನುಮಾನ್ ಚಾಲೀಸ ಪಠಿಸಿ: ಈ ದಿನ ನೀವು ಹನುಮಾನ್ ಚಾಲೀಸ ಪಠಿಸಿ.
ಈ ಶನಿ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications