Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಶಿವನ ಸಿದ್ಧಿ ಪಡೆಯಲು ಶ್ರಾವಣ ಮಾಸದಲ್ಲಿ ಈ ಮಂತ್ರಗಳನ್ನು ಪಠಿಸಿ
ಇದೇ ಬರುವ ಆಗಸ್ಟ್ 9ರಿಂದ ಶ್ರಾವಣ ಮಾಸ ಆರಂಭವಾಗುವುದು. ಶಿವನಿಗೆ ವಿಶೇಷವಾದ ಈ ತಿಂಗಳಲ್ಲಿ, ಶಿವ ಮತ್ತು ಪಾರ್ವತಿ ಭಕ್ತರು ತಮ್ಮ ಆಶೀರ್ವಾದ ಪಡೆಯಲು ದೇವಸ್ಥಾನಗಳಿಗೆ ಆಗಮಿಸುತ್ತಾರೆ. ಶ್ರಾವಣತಿಂಗಳ ಸೋಮವಾರ ಅತ್ಯಂತ ಮಹತ್ವದ್ದಾಗಿದ್ದು, ಈ ಅವಧಿಯಲ್ಲಿ ಭಕ್ತರು, ವ್ರತ ಹಾಗೂ ಪೂಜೆಗಳನ್ನು ಸಲ್ಲಿಸಿ, ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಈ ಸಮಯದಲ್ಲಿ ಕೆಲವೊಂದು ಮಂತ್ರ ಪಠಿಸುವ ಮೂಲಕ ಶಿವನನ್ನು ಒಲಿಸಿಕೊಳ್ಳಬಹುದು, ಇಷ್ಟಾರ್ಥ ಸಿದ್ದಿಸಿಕೊಳ್ಳಬಹುದು.
ಶ್ರಾವಣ ಸೋಮವಾರದಂದು, ಶಿವನ ಕೃಪೆಗೆ ಪಾತ್ರರಾಗಲು ಪಠಿಸಬೇಕಾದ ಮಂತ್ರಗಳನ್ನು ಈ ಕೆಳಗೆ ನೀಡಲಾಗಿದೆ:

ಶಿವ ಮೂಲ ಮಂತ್ರ:
ಓಂ ನಮಃ ಶಿವಾಯ
ಅರ್ಥ: ಓ ಪರಮಾತ್ಮನೇ, ನನ್ನ ಆತ್ಮದಲ್ಲಿ ನೆಲೆಸಿರುವ ನಿನಗೆ ತಲೆಬಾಗುತ್ತೇನೆ.

ರುದ್ರ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ
ತನ್ನೋ ರುದ್ರಃ ಪ್ರಚೋದಯಾತ್||
ರುದ್ರ ಗಾಯತ್ರಿ ಮಂತ್ರದ ಅರ್ಥ: ದೇವರುಗಳಲ್ಲಿ ಅತ್ಯಂತ ಶಕ್ತಿಶಾಲಿ, ಆದರ್ಶ ಪುರುಷ, ಮಹಾದೇವನನ್ನು ನಾನು ಪ್ರಾರ್ಥಿಸುತ್ತೇನೆ. ಬುದ್ಧಿ ನೀಡಿ ನನ್ನನ್ನು ಆಶೀರ್ವದಿಸು ಮತ್ತು ಜ್ಞಾನದಿಂದ ನನ್ನನ್ನು ಬೆಳಗಿಸು.

ಮಹಾಮೃತ್ಯುಂಜಯ ಮಂತ್ರ:
ಓ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಶಿ-ವರ್ಧನಂ ǀ
ಉರ್ವರುಕಂ-ಇವ ಬಂಧನ ಮತ್ಯೋರ್ಮುಕಾಯ ಮಾಮಿತಿತಾ ǁ
ಅರ್ಥ: ನಾವು ನಿನ್ನನ್ನು ಧ್ಯಾನಿಸುತ್ತೇವೆ ಓಹ್ ಶಿವ. ಸಾವಿನ ಬಂಧಗಳಿಂದ ತಪ್ಪಿಸಿಕೊಳ್ಳಲು ನಮಗೆ ಸಹಾಯ ಮಾಡಿ ಮತ್ತು ಅಮರತ್ವವು ಸಾಧ್ಯವಾಗದಿದ್ದರೂ, ದಯವಿಟ್ಟು ಮೋಕ್ಷವನ್ನು ಸಾಧಿಸಲು ನಮಗೆ ಸಹಾಯ ಮಾಡಿ.

ಶಿವ ಧ್ಯಾನ ಮಂತ್ರ:
ಕರ್ಚರಂಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವಣ್ಣಯಂಜಂ ವಾ ಮಾಂಸಂ ವಾ ಪರಧಂ |
ವಿಹಿತಂ ವಿಹಿತಂ ವಾ ಸರ್ವ ಮೆಟತ್ ಕ್ಷಮಸ್ವ ಜೈ ಜೈ ಕರುಣಾಬ್ಧೆ ಶ್ರೀ ಮಹಾದೇವ ಶಂಭೋ
ಅರ್ಥ :ಒಬ್ಬ ವ್ಯಕ್ತಿಯು ಎದುರಿಸುವ ಎಲ್ಲಾ ಒತ್ತಡ, ನಿರಾಕರಣೆ, ವೈಫಲ್ಯ, ಖಿನ್ನತೆ ಮತ್ತು ಇತರ ನಕಾರಾತ್ಮಕ ಶಕ್ತಿಗಳಿಂದ ದೇಹ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸಲು ಪರಮಾತ್ಮನಿಗೆ ವಿನಂತಿಸಿಕೊಳ್ಳುತ್ತಿದ್ದೇನೆ,

ರುದ್ರ ಮಂತ್ರ:
ಓಂ ನಮೋ ಭಗವತೇ ರುದ್ರಾಯ
ಅರ್ಥ : ಶಿವನ ಆಶೀರ್ವಾದ ಪಡೆಯಲು ರುದ್ರ ಮಂತ್ರವನ್ನು ಪಠಿಸಲಾಗುತ್ತದೆ ಮತ್ತು ಒಬ್ಬರ ಆಸೆಗಳನ್ನು ಈಡೇರಿಸಲು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ.



Click it and Unblock the Notifications