Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ಶಿವನ ಸಿದ್ಧಿ ಪಡೆಯಲು ಶ್ರಾವಣ ಮಾಸದಲ್ಲಿ ಈ ಮಂತ್ರಗಳನ್ನು ಪಠಿಸಿ
ಇದೇ ಬರುವ ಆಗಸ್ಟ್ 9ರಿಂದ ಶ್ರಾವಣ ಮಾಸ ಆರಂಭವಾಗುವುದು. ಶಿವನಿಗೆ ವಿಶೇಷವಾದ ಈ ತಿಂಗಳಲ್ಲಿ, ಶಿವ ಮತ್ತು ಪಾರ್ವತಿ ಭಕ್ತರು ತಮ್ಮ ಆಶೀರ್ವಾದ ಪಡೆಯಲು ದೇವಸ್ಥಾನಗಳಿಗೆ ಆಗಮಿಸುತ್ತಾರೆ. ಶ್ರಾವಣತಿಂಗಳ ಸೋಮವಾರ ಅತ್ಯಂತ ಮಹತ್ವದ್ದಾಗಿದ್ದು, ಈ ಅವಧಿಯಲ್ಲಿ ಭಕ್ತರು, ವ್ರತ ಹಾಗೂ ಪೂಜೆಗಳನ್ನು ಸಲ್ಲಿಸಿ, ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಈ ಸಮಯದಲ್ಲಿ ಕೆಲವೊಂದು ಮಂತ್ರ ಪಠಿಸುವ ಮೂಲಕ ಶಿವನನ್ನು ಒಲಿಸಿಕೊಳ್ಳಬಹುದು, ಇಷ್ಟಾರ್ಥ ಸಿದ್ದಿಸಿಕೊಳ್ಳಬಹುದು.
ಶ್ರಾವಣ ಸೋಮವಾರದಂದು, ಶಿವನ ಕೃಪೆಗೆ ಪಾತ್ರರಾಗಲು ಪಠಿಸಬೇಕಾದ ಮಂತ್ರಗಳನ್ನು ಈ ಕೆಳಗೆ ನೀಡಲಾಗಿದೆ:

ಶಿವ ಮೂಲ ಮಂತ್ರ:
ಓಂ ನಮಃ ಶಿವಾಯ
ಅರ್ಥ: ಓ ಪರಮಾತ್ಮನೇ, ನನ್ನ ಆತ್ಮದಲ್ಲಿ ನೆಲೆಸಿರುವ ನಿನಗೆ ತಲೆಬಾಗುತ್ತೇನೆ.

ರುದ್ರ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ
ತನ್ನೋ ರುದ್ರಃ ಪ್ರಚೋದಯಾತ್||
ರುದ್ರ ಗಾಯತ್ರಿ ಮಂತ್ರದ ಅರ್ಥ: ದೇವರುಗಳಲ್ಲಿ ಅತ್ಯಂತ ಶಕ್ತಿಶಾಲಿ, ಆದರ್ಶ ಪುರುಷ, ಮಹಾದೇವನನ್ನು ನಾನು ಪ್ರಾರ್ಥಿಸುತ್ತೇನೆ. ಬುದ್ಧಿ ನೀಡಿ ನನ್ನನ್ನು ಆಶೀರ್ವದಿಸು ಮತ್ತು ಜ್ಞಾನದಿಂದ ನನ್ನನ್ನು ಬೆಳಗಿಸು.

ಮಹಾಮೃತ್ಯುಂಜಯ ಮಂತ್ರ:
ಓ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಶಿ-ವರ್ಧನಂ ǀ
ಉರ್ವರುಕಂ-ಇವ ಬಂಧನ ಮತ್ಯೋರ್ಮುಕಾಯ ಮಾಮಿತಿತಾ ǁ
ಅರ್ಥ: ನಾವು ನಿನ್ನನ್ನು ಧ್ಯಾನಿಸುತ್ತೇವೆ ಓಹ್ ಶಿವ. ಸಾವಿನ ಬಂಧಗಳಿಂದ ತಪ್ಪಿಸಿಕೊಳ್ಳಲು ನಮಗೆ ಸಹಾಯ ಮಾಡಿ ಮತ್ತು ಅಮರತ್ವವು ಸಾಧ್ಯವಾಗದಿದ್ದರೂ, ದಯವಿಟ್ಟು ಮೋಕ್ಷವನ್ನು ಸಾಧಿಸಲು ನಮಗೆ ಸಹಾಯ ಮಾಡಿ.

ಶಿವ ಧ್ಯಾನ ಮಂತ್ರ:
ಕರ್ಚರಂಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವಣ್ಣಯಂಜಂ ವಾ ಮಾಂಸಂ ವಾ ಪರಧಂ |
ವಿಹಿತಂ ವಿಹಿತಂ ವಾ ಸರ್ವ ಮೆಟತ್ ಕ್ಷಮಸ್ವ ಜೈ ಜೈ ಕರುಣಾಬ್ಧೆ ಶ್ರೀ ಮಹಾದೇವ ಶಂಭೋ
ಅರ್ಥ :ಒಬ್ಬ ವ್ಯಕ್ತಿಯು ಎದುರಿಸುವ ಎಲ್ಲಾ ಒತ್ತಡ, ನಿರಾಕರಣೆ, ವೈಫಲ್ಯ, ಖಿನ್ನತೆ ಮತ್ತು ಇತರ ನಕಾರಾತ್ಮಕ ಶಕ್ತಿಗಳಿಂದ ದೇಹ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸಲು ಪರಮಾತ್ಮನಿಗೆ ವಿನಂತಿಸಿಕೊಳ್ಳುತ್ತಿದ್ದೇನೆ,

ರುದ್ರ ಮಂತ್ರ:
ಓಂ ನಮೋ ಭಗವತೇ ರುದ್ರಾಯ
ಅರ್ಥ : ಶಿವನ ಆಶೀರ್ವಾದ ಪಡೆಯಲು ರುದ್ರ ಮಂತ್ರವನ್ನು ಪಠಿಸಲಾಗುತ್ತದೆ ಮತ್ತು ಒಬ್ಬರ ಆಸೆಗಳನ್ನು ಈಡೇರಿಸಲು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ.



Click it and Unblock the Notifications