Just In
Don't Miss
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮಲಕಿ ಏಕಾದಶಿಯ ಮಹತ್ವವೇನು? ಪೂಜೆಗೆ ಶುಭ ಮುಹೂರ್ತ ಹಾಗೂ ಪೂಜಾವಿಧಿ
ಏಕಾದಶಿ ಶ್ರೀವಿಷ್ಣುವಿನ ಆರಾಧನೆಗೆ ಮೀಲಾಗಿರುವ ದಿನ. ವರ್ಷದಲ್ಲಿ 12 ಏಕಾದಶಿ ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಯೂ ಒಂದೊಂದು ರೀತಿಯಲ್ಲಿ ಮಹತ್ವವನ್ನು ಹೊಂದಿದೆ. ಮಾರ್ಚ್ 14ಕ್ಕೆ ಅಮಲಕಿ ಏಕಾದಶಿಯನ್ನು ಆಚರಿಸಲಾಗುವುದು.
ಈ ಅಮಲಕಿ ಏಕಾದಶಿಯ ಮಹತ್ವವೇನು? ಪೂಜೆಗೆ ಶುಭ ಮುಹೂರ್ತ ಯಾವಾಗ ಎಂದು ನೋಡೋಣ ಬನ್ನಿ:
ಅಮಲಕಿ ಏಕಾದಶಿಯ ವಿಶೇಷ
ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಮರ ಅಥವಾ ಚಿಕ್ಕ ಗಿಡಕ್ಕೆ ಪೂಜೆಯನ್ನು ಮಾಡಲಾಗುವುದು. ಆಮ್ಲ ಅಂದರೆ ನೆಲ್ಲಿಕಾಯಿ, ಈ ದಿನ ನೆಲ್ಲಿಕಾಯಿ ಮರಕ್ಕೆ ಪೂಜೆ ಸಲ್ಲಿಸುವುದರಿಂದ ಆಮಲಕಿ ಏಕಾದಶಿಯಂದು ಕರೆಯಲಾಗುವುದು. ನೆಲ್ಲಿಕಾಯಿ ಮರವು ವಿಷ್ಣುವಿಗೆ ಪ್ರಿಯವಾದ ಮರ, ಅದು ಮಹಾಲಕ್ಷ್ಮಿ ಹಾಗೂ ಶ್ರೀ ವಿಷ್ಣುವಿನ ವಾಸ ಸ್ಥಾನವಾಗಿದೆ ಎಂದು ಪದ್ಮ ಪುರಾಣದಲ್ಲಿ ಹೇಳಲಾಗಿದೆ. ಆದ್ದರಿಂದ ಶ್ರೀವಿಷ್ಣುವಿನ ಪೂಜೆಯಲ್ಲಿ ನೆಲ್ಲಿಕಾಯಿ ಮರಕ್ಕೆ ಪ್ರಮುಖ ಸ್ಥಾನವಿದೆ.
ಅಮಲಕಿ ಏಕಾದಶಿಯ ಮಹತ್ವ
ಈ ಏಕಾದಶಿಯಂದು ಉಪವಾಸವಿದ್ದು ಯಾರು ಶ್ರೀವಿಷ್ಣುವಿನ ಆರಾನೆ ಮಾಡುತ್ತಾರೋ ಅವರಿಗೆ ಪುಣ್ಯ ಕ್ಷೇತ್ರಗಳಿಗೆ ತೀರ್ಥಾಟನೆ ಹಾಗೂ ಯಜ್ಞ -ಯಾಗ ಮಾಡಿದಷ್ಟು ಪುಣ್ಯ ಫಲ ಸಿಗುವುದು ಎಂದು ಹೇಳಲಾಗುವುದು. ಸಂತಾನ ಅಪೇಕ್ಷಿತ ದಂಪತಿ ಈ ಏಕಾದಶಿಯಂದು ನೆಲ್ಲಿಕಾಯಿ ಗಿಡವನ್ನು ಅಲಂಕರಿಸಿ ಪೂಜೆಯನ್ನು ಮಾಡುವುದರಿಂದ ಸಂತಾನ ಭಾಗ್ಯ ಲಭಿಸುವುದು.
ಅಮಲಕಿ ಏಕಾದಶಿ 2022 ಪೂಜಾ ಮುಹೂರ್ತ
ಏಕಾದಶಿ ತಿಥಿ ಪ್ರಾರಂಭ ಮಾರ್ಚ್ 13 ಬೆಳಗ್ಗೆ 10:21ರಿಂದ
ಏಕಾದಶಿ ತಿಥಿ ಮುಕ್ತಾಯ: ಮಾರ್ಚ್ 14 ಮಧ್ಯಾಹ್ನ 12:05ಕ್ಕೆ
ಪಾರಣ ಸಮಯ: ಮಾರ್ಚ್ 15 ಬೆಲಗ್ಗೆ 06:31ರಿಂದ 8:55ರವರೆಗೆ
ಪೂಜಾವಿಧಿ
* ಮಾರ್ಚ್ 13ರಂದೇ ಬೇಗ ಎದ್ದು ಸ್ನಾನ ಮಾಡಿ, ಪೂಜೆಗೆ ಸಿದ್ಧತೆಗಳನ್ನು ಮಾಡಿ ಉಪವಾಸಕ್ಕೆ ಸಂಕಲ್ಪ ಮಾಡಬೇಕು.
* ನಂತರ ಶ್ರೀ ವಿಷ್ಣುವನ್ನು ಆರಾಧಿಸಿ, ಈ ದಿನ ತುಪ್ಪದ ದೀಪ ಹಚ್ಚಿ.
* ನೆಲ್ಲಿಕಾಯಿ ಗಿಡವನ್ನು ತುಳಸಿ ಹಾಗೂ ಹೂಗಳಿಂದ ಅಲಂಕರಿಸಿ.
* ನಂತರ ನೆಲ್ಲಿಕಾಯಿ ಗಿಡದ ಕೆಳಗಡೆ ಕಲಶ ಸ್ಥಾಪಿಸಿ.
* ಶ್ರೀವಿಷ್ಣುವಿನ ನೈವೇದ್ಯಕ್ಕೆ ನೆಲ್ಲಿಕಾಯಿ ಇಡಿ.
* ನಂತರ ಶ್ರೀಷ್ಣು ಹಾಗೂ ಲಕ್ಷ್ಮಿ ದೇವಿಯನ್ನು ಪೂಜಿಸಿ.
* ಮರುದಿನ ಕೂಡ ಮಡಿಯಿಂದಲೇ ವಿಷ್ಣು-ಲಕ್ಷ್ಮಿಯನ್ನು ಪೂಜಿಸಿ, ದೇವರಿಗೆ ಇಟ್ಟ ನೈವೇದ್ಯವನ್ನು ಬಡವರಿಗೆ ದಾನ ಮಾಡಿ.
* ನಂತರ ಪಾರಣ ಸಮಯದಲ್ಲಿ ಉಪವಾಸವನ್ನು ಮುರಿಯಬೇಕು.