Just In
- 1 min ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 31 min ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 1 hr ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 2 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜು. 27ಕ್ಕೆ ಅಂಗಾರಕ ಸಂಕಷ್ಟ ಚತುರ್ಥಿ: ಇದರ ಮಹತ್ವವೇನು, ಪೂಜಾ ವಿಧಿಗಳು ಹೇಗಿರಬೇಕು?
ಪ್ರತೀ ತಿಂಗಳು ಬರುವ ಸಂಕಷ್ಟಿಯಂದು ಭಕ್ತರು ಉಪವಾಸವಿದ್ದು ವಿಘ್ನ ನಿವಾರಕನನ್ನು ಆರಾಧಿಸಲಾಗುವುದು. ಗಣಪನನ್ನು ಭಕ್ತಿಯಿಂದ ನಂಬಿ ಆರಾಧಿಸಿದರೆ ಅವನು ತನ್ನ ಭಕ್ತರನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಅಚಲ ನಂಬಿಕೆ.
ಈ ತಿಂಗಳು ಬಂದಿರುವ ಸಂಕಷ್ಟಿ ವಿಶೇಷವಾಗಿದೆ. ಈ ತಿಂಗಳು ಜುಲೈ 27ಕ್ಕೆ ಅಂಗಾರಕ ಸಂಕಷ್ಟಿ ಬಂದಿದೆ. ಮಂಗಳವಾರದಂದು ಬರುವ ಸಂಕಷ್ಟಿಯನ್ನು ಅಂಗಾರಕ ಸಂಕಷ್ಟ ಚತುರ್ಥಿ ಎಂದು ಆಚರಿಸಲಾಗುವುದು.
ಈ ವರ್ಷ ಇನ್ನು ಅಂಗಾರಕ ಸಂಕಷ್ಟ ಚತುರ್ಥಿ ನವೆಂಬರ್ 23ಕ್ಕೆ ಇದೆ. ಒಟ್ಟಿನಲ್ಲಿ ಈ ವರ್ಷ 3 ಬಾರಿ ಅಂಗಾರಕ ಸಂಕಷ್ಟ ಚತುರ್ಥಿ ಬಂದಿದೆ. ಮಾರ್ಚ್ 2ರಂದು ಅಂಗಾರಕ ಚತುರ್ಥಿಯನ್ನು ಆಚರಿಸಲಾಗಿತ್ತು.
ಅಂಗಾರಕ ಸಂಕಷ್ಟ ಚತುರ್ಥಿಯ ಮಹತ್ವೇನು, ಪೂಜಾ ವಿಧಿಗಳೇನು ಎಂದು ತಿಳಿಯೋಣ ಬನ್ನಿ:
ಅಂಗಾರಕ ಸಂಕಷ್ಟ ಚತುರ್ಥಿಯ ವಿಶೇಷವೇನು?
'ಅಂಗಾರಕ' ಎಂಬುವುದು ಸಂಸ್ಕೃತ ಪದವಾಗಿದ್ದು ಬೆಂಕಿ ಕೆಂಡದಂಥ ಹೊಳಪು ಎಂಬುವುದು ಇದರ ಅರ್ಥವಾಗಿದೆ. ಈ ದಿನ ಉಪವಾಸವಿದ್ದು ವಿಘ್ನ ನಿವಾರಕನನ್ನು ಪೂಜಿಸಿದರೆ ಆತನ ಎಲ್ಲಾ ಆಸೆಯೂ ಈಡೇರುವುದು. ಈ ದಿನ ಗಣೇಶನು ಮಂಗಳನಿಗೆ ವಿಮೋಚನೆ ನೀಡಿದ ದಿನ ಎಂಬ ಪೌರಾಣಿಕ ಕತೆಯಿದೆ. ಹಾಗಾಗಿ ಈ ದಿನದಂದು ಪೂಜೆ ಮಾಡುವುದರಿಂದ ಮಂಗಳ ಕೃಪೆ ಕೂಡ ನಿಮ್ಮ ಮೇಲಿರುವುದು. ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಈ ದಿನ ಪೂಜೆ ಸಲ್ಲಿಸುತ್ತಾರೋ ಅವರಿಗೆ ಜೀವನದಲ್ಲಿ ಕಷ್ಟಗಳು ಇರಲ್ಲ, ವಿಘ್ನೇಶ ಅವರ ಜೀವನದಲ್ಲಿ ಬರುವ ಎಲ್ಲಾ ವಿಘ್ನಗಳನ್ನು ನಿವಾರಿಸುತ್ತಾನೆ.
ಅಂಗಾರಕ ಚತುರ್ಥಿ ಶುಭ ಮುಹೂರ್ತ
ಚತುರ್ಥಿ ತಿಥಿ ಪ್ರಾರಂಭ ಜುಲೈ 26 ರಾತ್ರಿ 2:54ಕ್ಕೆ
ಚತುರ್ಥಿ ತಿಥಿ ಮುಕ್ತಾಯ ಜುಲೈ 28 ಮಧ್ಯಾಹ್ನ 2:28ಕ್ಕೆ
ಅಂಗಾರಕ ಚತುರ್ಥಿ ಪೂಜಾ ವಿಧಿ
* ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ತೊಟ್ಟು ಗಣೇಶನಿಗೆ ಗರಿಕೆ, ಮೋದಕವನ್ನು ಅರ್ಪಿಸಬೇಕು. ಈ ಪ್ರಸಾದವನ್ನು ಆರತಿ ಬಳಿಕ ಹಂಚಬಹುದು.
* ಈ ದಿನ ಉಪವಾಸವಿದ್ದು ರಾತ್ರಿ ಚಂದ್ರನ ನೋಡಿದ ಬಳಿಕವಷ್ಟೇ ಉಪವಾಸ ಆಹಾರ ಸೇವಿಸಬೇಕು.
* ಸಂಪೂರ್ಣ ಉಪವಾಸ ಇರಲು ಸಾಧ್ಯವಾಗದವರು ಹಣ್ಣುಗಳನ್ನಷ್ಟೇ ಈ ದಿನ ತೆಗೆದುಕೊಳ್ಳುತ್ತಾರೆ.
* ಈ ದಿನ ತುಂಬಾ ನೀರು ಕುಡಿಯುವಂತಿಲ್ಲ, ಎಲೆ ಅಡಿಕೆ, ತಂಬಾಕು ಸೇವಿಸುವಂತಿಲ್ಲ
* ಚಂದ್ರನ ನೋಡಿದ ಬಳಿ ಗಣೇಶನಿಗೆ ಪೂಜೆ ಸಲ್ಲಿಸಿ ಉಪವಾಸವನ್ನು ಮುರಿಯಲಾಗುವುದು.
* ಈ ದಿನ ಪೂಜೆಯ ವೇಳೆ ಗಣೇಶನ ಮಂತ್ರಗಳನ್ನು ಪಠಿಸಿ.
ಅಂಗಾರಕ ಚತುರ್ಥಿಯ ಮಹತ್ವ
ಅಂಗಾರಕ ಚತುರ್ಥಿಯನ್ನು ಆಚರಿಸಿದರೆ 21 ವ್ರತಗಳನ್ನು ಪಾಲಿಸಿದ್ದಕ್ಕೆ ಸಮ. ಈ ದಿನ ಉಪವಾಸವಿದ್ದು ಏನಾದರೂ ಸಂಕಲ್ಪ ಕೈಗೊಂಡರೆ ಅದು ನೆರವೇರುವುದು.
ಈ ಸ್ತೋತ್ರ ಪಠಿಸಿ
ಸಂಕಟ ಹರ ಗಣೇಶ ಸ್ತೋತ್ರ:
|| ಓಂ ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ ಭಕ್ತವಾಸಂ ಸ್ಮರೇನ್ನಿತ್ಯಂ ಆಯುಃ ಕಾಮಾರ್ಥ ಸಿದ್ಧಯೇ
ಪ್ರಥಮಂ ವಕ್ರತುಂಡಂಚ ಏಕದಂತಮಂ ದ್ವಿತೀಯಕಂ ತೃತೀಯಂ ಕೃಷ್ಣ ಪಿಂಗಾಕ್ಷಂ, ಗಜವಕ್ತ್ರಂ ಚತುರ್ಥಕಂ
ಲಂಬೋಧರಂ ಪಂಚಮಂ ಚ ಷಷ್ಠಂ ವಿಕಟಮೇವಚ ಸಪ್ತಮಂ ವಿಘ್ನ ರಾಜಂಚ ಧೂಮ್ರವರ್ಣಂ ತಥಾಷ್ಠಕಂ
ನವಮಂ ಫಲ ಚಂದ್ರಂಚ ದಶಮಂ ತು ವಿನಾಯಕಂ ಏಕಾದಶಂ ಗಣಪತಿಂ ದ್ವಾದಶಂತು ಗಜಾನನಂ
ದ್ವಾದಶೈತಾನಿ ನಾಮಾನಿ ತ್ರಿ ಸಂಧ್ಯಂ ಯಃ ಪಠೇನ್ನರಃ ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರೀಂ ಪ್ರಭೋ
ವಿದ್ಯಾರ್ಥಿ ಲಭತೆ ವಿದ್ಯಂ ವಿದ್ಯಾಂ ಧನಾರ್ಥಿ ಲಭತೆ ಧನಂ ಪುತ್ರಾರ್ಥಿ ಲಭತೆ ಪುತ್ರಂ ಮೋಕ್ಷಾರ್ಥಿ ಲಭತೆ ಗತಿಂ ಜಪೇತ್ ಗಣಪತಿ ಸ್ತೋತ್ರಂ ಷಡ್ಭೀರ್ಮಾಸೈ ಫಲಂ ಲಭೇತ್, ಸಂವತ್ಸರೇಣ ಸಿದ್ಧಿಂ ಚ ಲಭತೆ ನಾತ್ರ ಸಮಸ್ಯಾಃ ಅಷ್ಟಾಭ್ಯೋ ಬ್ರಹ್ಮಣೇಭ್ಯಾಷ ಚ ಲಿಖಿತ್ವ ಯಃ ಸಮರ್ಪಯೇತ್ ತಸ್ಯ ವಿದ್ಯಾ ಭವೇತ್ಸರ್ವ ಗಣೇಶಸ್ಯ ಪ್ರಸಾದತಃ
ಇತಿ ಶ್ರೀ ನಾರದ ಪುರಾಣೆ ಸಂಕಷ್ಟ ನಾಶನ ಗಣಪತಿ ಸ್ತೋತ್ರಂ ಸಂಪೂರ್ಣಂ ||