Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಹಿಂದೂ ಧರ್ಮದಲ್ಲಿ ಇವರು 'ಕೋಪಿಷ್ಠ ದೇವರು' ಎಂದೇ ಪ್ರಸಿದ್ಧಿ!
ಹಿಂದೂ ಧರ್ಮದಲ್ಲಿ ಕೆಲವು ದೇವರುಗಳು ಶಾಂತ ಮೂರ್ತಿಗಳಾದರೆ ಇನ್ನು ಕೆಲವರು ದೇವರುಗಳಿಗೆ ಕೋಪ ಜಾಸ್ತಿ. ಇಂತಹ ದೇವರುಗಳು ಕೋಪದಲ್ಲಿದ್ದಾಗ ನಿಮ್ಮ ಯಾವುದೇ ಪೂಜೆ, ಪುರಸ್ಕಾರಗಳು, ಭಕ್ತಿಯೂ ನಡೆಯಲ್ಲ...!
ಸಾವಿರಾರು ವರ್ಷಗಳಿಂದಲೂ ಇರುವಂತಹ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ ಎನ್ನುತ್ತವೆ ಪುರಾಣಗಳು. ಕೆಲವು ದೇವರುಗಳು ಭಕ್ತರ ಭಕ್ತಿಗೆ ಬೇಗನೆ ಒಲಿದರೆ ಇನ್ನು ಕೆಲವು ದೇವರುಗಳನ್ನು ಒಲಿಸಿಕೊಳ್ಳಲು ತುಂಬಾ ಕಷ್ಟಪಡಬೇಕಾಗುತ್ತದೆ. ಜಗತ್ತಿನ 'ಚಿತ್ತವನ್ನೇ ಕೆದಕುವ' ಹಿಂದೂ ಧರ್ಮದ ಆಚಾರ-ವಿಚಾರ
ಹಿಂದೂ ಧರ್ಮದಲ್ಲಿ ಕೆಲವು ದೇವರುಗಳು ಶಾಂತ ಮೂರ್ತಿಗಳಾದರೆ ಇನ್ನು ಕೆಲವರು ದೇವರುಗಳಿಗೆ ಕೋಪ ಜಾಸ್ತಿ. ಇಂತಹ ದೇವರುಗಳು ಕೋಪದಲ್ಲಿದ್ದಾಗ ನಿಮ್ಮ ಯಾವುದೇ ಪೂಜೆ, ಪುರಸ್ಕಾರಗಳು, ಭಕ್ತಿಯೂ ನಡೆಯಲ್ಲ. ಆದರೆ ಶಾಂತ ಸ್ವರೂಪಕ್ಕೆ ಬಂದಾಗ ನಿಮ್ಮ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾಗುತ್ತದೆ. ಹಿಂದೂ ಧರ್ಮದಲ್ಲಿ ಇರುವಂತಹ ಕೋಪಿಷ್ಠ ದೇವರುಗಳು ಯಾರು ಎಂದು ನಾವು ತಿಳಿದುಕೊಳ್ಳುವ...

ಕಾಳಿಮಾತೆ
ಕಾಳಿಮಾತೆಯನ್ನು ಹಿಂದೂಗಳು ಹೆಚ್ಚಾಗಿ ಪೂಜಿಸುತ್ತಾರೆ. ಕಾಳಿಯು ದುಷ್ಟರನ್ನು ನಾಶ ಮಾಡಿ ಭಕ್ತರಿಗೆ ಸುಖವನ್ನು ನೀಡುತ್ತಾಳೆ. ಈಕೆ ಶಿವನ ಮಡದಿ. ಆಕೆಯನ್ನು ಸಾವಿನ ದೇವತೆಯೆಂದು ಪರಿಗಣಿಸಲಾಗಿದೆ. ಕಾಳಿಯ ಅವತಾರವು ಪ್ರಾಣಿಯೊಂದರ ಚರ್ಮವನ್ನು ಸುತ್ತಿಕೊಂಡು ಕೈಯಲ್ಲಿ ತಲೆಬುರುಡೆಯನ್ನು ಇಟ್ಟುಕೊಂಡಿದ್ದಾಳೆ.

ಕಾಳಿಮಾತೆ
ಜನರ ದುಷ್ಟ ಕೃತ್ಯಗಳಿಂದ ಕೋಪಗೊಳ್ಳುವ ಆಕೆ ಇದನ್ನು ಧ್ವಂಸ ಮಾಡಿಬಿಡುತ್ತಾಳೆ. ಇದರಿಂದಾಗಿ ಡಕಾಯಿತರು ಕಾಳಿಯನ್ನು ಪೂಜಿಸುತ್ತಾರೆ. ಕಾಳಿ ಮಾತೆಯನ್ನು ಪೂಜಿಸಿದರೆ ತಮ್ಮ ದುಷ್ಕೃತ್ಯಗಳನ್ನು ಆಕೆ ಕ್ಷಮಿಸುತ್ತಾಳೆ ಎನ್ನುವ ನಂಬಿಕೆ ಅವರದ್ದಾಗಿದೆ. ಅಘೋರಿಗಳ ಮಹಾನ್ ಶಕ್ತಿಗೆ ಮೂಲ ಕಾಳಿ ಮಾತೆಯೇ?

ಶಿವ
ಒಳ್ಳೆಯ ಪತಿಯಲ್ಲಿರುವ ಮೂರ್ತಿರೂಪವೇ ಶಿವನೆಂದು ಪರಿಗಣಿಸಲಾಗಿದೆ. ಶಿವನನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ. ಆದರೆ ಆತನಿಗೆ ಕೋಪ ಬಂದಾಗ ತಾಂಡವ ನೃತ್ಯ ಮಾಡುತ್ತಾನೆ. ಹಿಂದೂ ಪುರಾಣಗಳ ಪ್ರಕಾರ ಶಿವನಿಗೆ ಹೆಚ್ಚು ಕೋಪ ಬಂದಾಗ ಆತ ತನ್ನ ಮೂರನೇ ಕಣ್ಣನ್ನು ತೆರೆದು ಎಲ್ಲವನ್ನೂ ಧ್ವಂಸ ಮಾಡಿಬಿಡುತ್ತಾನೆ.ಮುಕ್ಕಣ್ಣ ಶಿವನ ಮೂರನೆಯ ಕಣ್ಣಿನ ರೋಚಕ ಕಹಾನಿ...

ದುರ್ಗೆ
ದುರ್ಗೆಯನ್ನು ಹಿಂದೂ ಧರ್ಮದಲ್ಲಿ ಮಾತೆಯೆಂದು ಪೂಜಿಸಲಾಗುತ್ತದೆ. ಮಹಿಷಾಸುರನನ್ನು ಕೊಂದಿರುವ ಕಾರಣದಿಂದಾಗಿ ಆಕೆಯನ್ನು ಮಹಿಷಾಸುರ ಮರ್ದಿನಿ ಎಂದು ಕರೆಯಲಾಗುತ್ತದೆ. ದುರ್ಗೆ ಶಕ್ತಿಯ ಸಂಕೇತ. ಹತ್ತು ಕೈಗಳು ಇರುವಂತಹ ದುರ್ಗೆಯ ಪ್ರತಿಯೊಂದು ಕೈಯಲ್ಲಿ ಒಂದೊಂದು ರೀತಿಯ ಆಯುಧಗಳಿವೆ. ಮಹಿಳೆಯ ಶಕ್ತಿ ಮತ್ತು ಕ್ರೋಧವನ್ನು ದುರ್ಗೆಯೆಂದು ಪರಿಗಣಿಸಲಾಗಿದೆ.

ಶನಿ ದೇವರು
ಅತ್ಯಂತ ವೇಗವಾಗಿ ಕೋಪಗೊಳ್ಳುವ ದೇವರೆಂದರೆ ಅದು ಶನಿ ದೇವರು. ಇದರಿಂದಾಗಿ ಪ್ರತಿಯೊಬ್ಬರೂ ಶನಿದೇವರನ್ನು ಪೂಜಿಸಿ ಆಶೀರ್ವಾದ ಪಡೆಯಲು ಬಯಸುತ್ತಾರೆ. ಶನಿದೇವರ ಕೋಪಕ್ಕೆ ತುತ್ತಾಗಲು ಯಾರು ಬಯಸುವುದಿಲ್ಲ. ಶನಿ ದೇವರು ಆಶೀರ್ವದಿಸಿದರೆ ಅವರು ಹೆಚ್ಚಿನ ಸುಖವನ್ನು ಪಡೆಯುತ್ತಾರೆ. ಶನಿ ಪೂಜಾ ವಿಧಿ - ಕೇಳಿ ಗೊತ್ತು, ಆಚರಿಸುವುದು ಹೇಗೆ?

ಶನಿ ದೇವರು
ಇದೇ ವೇಳೆ ಅವರ ಮೇಲೆ ಶನಿ ದೇವರು ಕೋಪಗೊಂಡರೆ ಎಲ್ಲವೂ ನಿರ್ನಾಮವಾಗುತ್ತದೆ. ಶನಿ ದೇವರನ್ನು ಕಡುನೀಲಿ ಬಣ್ಣವೆಂದು ಹೇಳಲಾಗುತ್ತದೆ. ಪ್ರತಿಯೊಂದು ಜ್ಯೋತಿಷ್ಯಶಾಸ್ತ್ರದ ಮೇಲೆ ಶನಿ ದೇವರ ಪ್ರಭಾವವಿರುತ್ತದೆ.



Click it and Unblock the Notifications