Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಷಾಢ ಶುಕ್ರವಾರ: ಯಾವ ಶುಕ್ರವಾರ ಯಾವ ದೇವಿಯ ಆರಾಧನೆ ಮಾಡಬೇಕು?
ಆಷಾಢ ಮಾಸ ಕರ್ನಾಟಕದಲ್ಲಿ ಜುಲೈ 11-ಆಗಸ್ಟ್ 8ರವರೆಗೆ ಇದೆ. ಆದರೆ ಕರ್ನಾಟಕದ ಕೆಲವು ಕಡೆ ಅಂದ್ರೆ ಕೊಡಗು, ಮಂಗಳೂರು ಕಡೆ ಆಷಾಢ ಜುಲೈ 17ರಿಂದ ಪ್ರಾರಂಭವಾಗಿ ಆಗಸ್ಟ್ 16ರವರೆಗೆ ಇರುತ್ತದೆ. ಆಗಸ್ಟ್ 17ರಿಂದ ಶ್ರಾವಣ ಪ್ರಾರಂಭ.
ನಿಮಗೆ ಆಷಾಢ ಜುಲೈ 11ರಿಂದ ಪ್ರಾರಂಭವಾಗಲಿ ಅಥವಾ ಜುಲೈ 17ರಿಂದ ಪ್ರಾರಂಭವಾಗಲಿ ಈ ವರ್ಷ 4 ಆಷಾಢ ಶುಕ್ರವಾರ ಸಿಗುವುದು. ಈ ನಾಲ್ಕು ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೆ ತುಂಬಾ ಶ್ರೇಷ್ಠ ಎಂದು ಹೇಳಲಾಗುವುದು.
ಆಷಾಢ ಮಾಸದಲ್ಲಿ ದೇವಿ ಶಕ್ತಿಗಳನ್ನು ಆರಾಧಿಸಲಾಗುವುದು. ಈ ತಿಂಗಳಿನಲ್ಲಿ ದೇವಿಯ ಶಕ್ತಿ ಭೂಮಿಯ ಮೇಲೆ ಅಧಿಕವಿರುತ್ತದೆ, ಇದರಿಂದಾಗಿ ದೇವಿಯನ್ನು ಆರಾಧಿಸುವುದರಿಂದ ಅನೇಕ ಪ್ರಯೋಜನಗಳು ಸಿಗುವುದು.
ಆಷಾಢ ಮಾಸದ ನಾಲ್ಕು ವಾರಗಳಲ್ಲಿ ದೇವಿಯ ಯಾವ ಸ್ವರೂಪ ಆರಾಧಿಸಲಾಗುವುದು ಎಂಬ ಮಾಹಿತಿ ಇಲ್ಲಿದೆ.

ಆಷಾಢ ಮೊದಲನೇ ಶುಕ್ರವಾರ: ಸ್ವರ್ಣಾಂಬಿಕ ದೇವಿಯ ಆರಾಧನೆ
ಆಷಾಢ ಮಾಸದ ಮೊದಲನೇ ಶುಕ್ರವಾರ ಸ್ವರ್ಣಾಂಬಿಕ ದೇವಿಯನ್ನು ಆರಾಧಿಸಲಾಗುವುದು. ಇದು ಪಾರ್ವತಿಯ ಒಂದು ರೂಪವಾಗಿದೆ. ಸ್ವರ್ಣಾಂಬಿಕ ದೇವಿಯನ್ನು ಭಕ್ತಿಯಿಂದ ಆರಾಧಿಸುವುದರಿಂದ ಐಶ್ವರ್ಯ ವೃದ್ಧಿಸುವುದು.

ಆಷಾಢ 2ನೇ ಶುಕ್ರವಾರ: ಕಾಳಿ ದೇವಿಯ ಆರಾಧನೆ
ಕಾಳಿ ಸ್ವರೂಪವನ್ನು ಆರಾಧಿಸುವುದರಿಂದ ಜ್ಞಾನ ಹೆಚ್ಚುವುದು, ಬುದ್ಧಿ ಶಕ್ತಿ ಹೆಚ್ಚುವುದು. ವಿದ್ಯಾರ್ಥಿಗಳು, ಅಧ್ಯಯನ ಮಾಡುವವರು ಒಳ್ಳೆಯ ಫಲ ಕಾಣಬಹುದು.

ಆಷಾಢ 3ನೇ ಶುಕ್ರವಾರ: ಕಾಳಿಂಕಾಂಬ ದೇವಿಯ ಆರಾಧನೆ
ಪಾರ್ವತಿ ದೇವಿಯ ಈ ಅವತಾರವನ್ನು ಆರಾಧಿಸುವುದರಿಂದ ದೇವಿಯು ಧೈರ್ಯ ಹಾಗೂ ಆರೋಗ್ಯ ನೀಡಿ ಕರುಣಿಸುತ್ತಾಳೆ.

ಆಷಾಢ 4ನೇ ಶುಕ್ರವಾರ: ಕಾಮಾಕ್ಷಿ ದೇವಿ ಆರಾಧನೆ ಹಾಗೂ ಲಕ್ಷ್ಮಿ ಪೂಜೆ
ಶಿವ ಶಕ್ತಿಯ ಸ್ವರೂಪವಾದ ಕಾಮಾಕ್ಷಿ ದೇವಿಯನ್ನು ಆರಾಧಿಸಲಾಗುವುದು. ಇನ್ನು ಕೊನೆಯ ಆಷಾಢ ಶುಕ್ರವಾರದಂದು ಲಕ್ಷ್ಮಿಯನ್ನು ಕೂಡ ಆರಾಧನೆ ಮಾಡಲಾಗುವುದು. ಈ ದಿನ ಲಕ್ಷ್ಮಿಯು ನಮ್ಮ ಬೇಡಿಕೆಗಳನ್ನು ಆಲಿಸುತ್ತಾಳೆ, ಮಹಿಳೆಯರು ಭಕ್ತಿಯಿಂದ ಪೂಜೆ ಮಾಡಿ ಬೇಡಿಕೊಂಡರೆ ಅವರ ಇಷ್ಟಾರ್ಥಗಳು ನೆರವೇರುವುದು, ಕುಟುಂಬ ನೆಮ್ಮದಿ, ಸಂತೋಷ, ಐಶ್ಚರ್ಯ ಕರುಣಿಸುವಳು.
ಹೀಗೆ ಆಷಾಢ ಶುಕ್ರವಾರ ತುಂಬಾ ಪ್ರಮುಖವಾಗಿದ್ದು ಈ ದಿನ ವ್ರತ ಮಾಡುವವರು ದೇವಿ ಮೂರ್ತಿಯನ್ನು ಅಲಂಕರಿಸಿ, ಮಂತ್ರಗಳನ್ನು ಪಠಿಸಿ ಪೂಜೆ ಮಾಡುತ್ತಾರೆ, ನಂತರ ದೇವಿಗೆ ನೈವೇದ್ಯ ಅರ್ಪಿಸಿ, ಮುತ್ತೈದೆಯರನ್ನು ಕರೆದು ಅವರಿಗೆ ತಾಂಬೂಲ ನೀಡಲಾಗುವುದು.



Click it and Unblock the Notifications