Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಆಷಾಢ ಶುಕ್ರವಾರ: ಯಾವ ಶುಕ್ರವಾರ ಯಾವ ದೇವಿಯ ಆರಾಧನೆ ಮಾಡಬೇಕು?
ಆಷಾಢ ಮಾಸ ಕರ್ನಾಟಕದಲ್ಲಿ ಜುಲೈ 11-ಆಗಸ್ಟ್ 8ರವರೆಗೆ ಇದೆ. ಆದರೆ ಕರ್ನಾಟಕದ ಕೆಲವು ಕಡೆ ಅಂದ್ರೆ ಕೊಡಗು, ಮಂಗಳೂರು ಕಡೆ ಆಷಾಢ ಜುಲೈ 17ರಿಂದ ಪ್ರಾರಂಭವಾಗಿ ಆಗಸ್ಟ್ 16ರವರೆಗೆ ಇರುತ್ತದೆ. ಆಗಸ್ಟ್ 17ರಿಂದ ಶ್ರಾವಣ ಪ್ರಾರಂಭ.
ನಿಮಗೆ ಆಷಾಢ ಜುಲೈ 11ರಿಂದ ಪ್ರಾರಂಭವಾಗಲಿ ಅಥವಾ ಜುಲೈ 17ರಿಂದ ಪ್ರಾರಂಭವಾಗಲಿ ಈ ವರ್ಷ 4 ಆಷಾಢ ಶುಕ್ರವಾರ ಸಿಗುವುದು. ಈ ನಾಲ್ಕು ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೆ ತುಂಬಾ ಶ್ರೇಷ್ಠ ಎಂದು ಹೇಳಲಾಗುವುದು.
ಆಷಾಢ ಮಾಸದಲ್ಲಿ ದೇವಿ ಶಕ್ತಿಗಳನ್ನು ಆರಾಧಿಸಲಾಗುವುದು. ಈ ತಿಂಗಳಿನಲ್ಲಿ ದೇವಿಯ ಶಕ್ತಿ ಭೂಮಿಯ ಮೇಲೆ ಅಧಿಕವಿರುತ್ತದೆ, ಇದರಿಂದಾಗಿ ದೇವಿಯನ್ನು ಆರಾಧಿಸುವುದರಿಂದ ಅನೇಕ ಪ್ರಯೋಜನಗಳು ಸಿಗುವುದು.
ಆಷಾಢ ಮಾಸದ ನಾಲ್ಕು ವಾರಗಳಲ್ಲಿ ದೇವಿಯ ಯಾವ ಸ್ವರೂಪ ಆರಾಧಿಸಲಾಗುವುದು ಎಂಬ ಮಾಹಿತಿ ಇಲ್ಲಿದೆ.

ಆಷಾಢ ಮೊದಲನೇ ಶುಕ್ರವಾರ: ಸ್ವರ್ಣಾಂಬಿಕ ದೇವಿಯ ಆರಾಧನೆ
ಆಷಾಢ ಮಾಸದ ಮೊದಲನೇ ಶುಕ್ರವಾರ ಸ್ವರ್ಣಾಂಬಿಕ ದೇವಿಯನ್ನು ಆರಾಧಿಸಲಾಗುವುದು. ಇದು ಪಾರ್ವತಿಯ ಒಂದು ರೂಪವಾಗಿದೆ. ಸ್ವರ್ಣಾಂಬಿಕ ದೇವಿಯನ್ನು ಭಕ್ತಿಯಿಂದ ಆರಾಧಿಸುವುದರಿಂದ ಐಶ್ವರ್ಯ ವೃದ್ಧಿಸುವುದು.

ಆಷಾಢ 2ನೇ ಶುಕ್ರವಾರ: ಕಾಳಿ ದೇವಿಯ ಆರಾಧನೆ
ಕಾಳಿ ಸ್ವರೂಪವನ್ನು ಆರಾಧಿಸುವುದರಿಂದ ಜ್ಞಾನ ಹೆಚ್ಚುವುದು, ಬುದ್ಧಿ ಶಕ್ತಿ ಹೆಚ್ಚುವುದು. ವಿದ್ಯಾರ್ಥಿಗಳು, ಅಧ್ಯಯನ ಮಾಡುವವರು ಒಳ್ಳೆಯ ಫಲ ಕಾಣಬಹುದು.

ಆಷಾಢ 3ನೇ ಶುಕ್ರವಾರ: ಕಾಳಿಂಕಾಂಬ ದೇವಿಯ ಆರಾಧನೆ
ಪಾರ್ವತಿ ದೇವಿಯ ಈ ಅವತಾರವನ್ನು ಆರಾಧಿಸುವುದರಿಂದ ದೇವಿಯು ಧೈರ್ಯ ಹಾಗೂ ಆರೋಗ್ಯ ನೀಡಿ ಕರುಣಿಸುತ್ತಾಳೆ.

ಆಷಾಢ 4ನೇ ಶುಕ್ರವಾರ: ಕಾಮಾಕ್ಷಿ ದೇವಿ ಆರಾಧನೆ ಹಾಗೂ ಲಕ್ಷ್ಮಿ ಪೂಜೆ
ಶಿವ ಶಕ್ತಿಯ ಸ್ವರೂಪವಾದ ಕಾಮಾಕ್ಷಿ ದೇವಿಯನ್ನು ಆರಾಧಿಸಲಾಗುವುದು. ಇನ್ನು ಕೊನೆಯ ಆಷಾಢ ಶುಕ್ರವಾರದಂದು ಲಕ್ಷ್ಮಿಯನ್ನು ಕೂಡ ಆರಾಧನೆ ಮಾಡಲಾಗುವುದು. ಈ ದಿನ ಲಕ್ಷ್ಮಿಯು ನಮ್ಮ ಬೇಡಿಕೆಗಳನ್ನು ಆಲಿಸುತ್ತಾಳೆ, ಮಹಿಳೆಯರು ಭಕ್ತಿಯಿಂದ ಪೂಜೆ ಮಾಡಿ ಬೇಡಿಕೊಂಡರೆ ಅವರ ಇಷ್ಟಾರ್ಥಗಳು ನೆರವೇರುವುದು, ಕುಟುಂಬ ನೆಮ್ಮದಿ, ಸಂತೋಷ, ಐಶ್ಚರ್ಯ ಕರುಣಿಸುವಳು.
ಹೀಗೆ ಆಷಾಢ ಶುಕ್ರವಾರ ತುಂಬಾ ಪ್ರಮುಖವಾಗಿದ್ದು ಈ ದಿನ ವ್ರತ ಮಾಡುವವರು ದೇವಿ ಮೂರ್ತಿಯನ್ನು ಅಲಂಕರಿಸಿ, ಮಂತ್ರಗಳನ್ನು ಪಠಿಸಿ ಪೂಜೆ ಮಾಡುತ್ತಾರೆ, ನಂತರ ದೇವಿಗೆ ನೈವೇದ್ಯ ಅರ್ಪಿಸಿ, ಮುತ್ತೈದೆಯರನ್ನು ಕರೆದು ಅವರಿಗೆ ತಾಂಬೂಲ ನೀಡಲಾಗುವುದು.



Click it and Unblock the Notifications
