Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
ಆಷಾಢ ಶುಕ್ರವಾರ: ಯಾವ ಶುಕ್ರವಾರ ಯಾವ ದೇವಿಯ ಆರಾಧನೆ ಮಾಡಬೇಕು?
ಆಷಾಢ ಮಾಸ ಕರ್ನಾಟಕದಲ್ಲಿ ಜುಲೈ 11-ಆಗಸ್ಟ್ 8ರವರೆಗೆ ಇದೆ. ಆದರೆ ಕರ್ನಾಟಕದ ಕೆಲವು ಕಡೆ ಅಂದ್ರೆ ಕೊಡಗು, ಮಂಗಳೂರು ಕಡೆ ಆಷಾಢ ಜುಲೈ 17ರಿಂದ ಪ್ರಾರಂಭವಾಗಿ ಆಗಸ್ಟ್ 16ರವರೆಗೆ ಇರುತ್ತದೆ. ಆಗಸ್ಟ್ 17ರಿಂದ ಶ್ರಾವಣ ಪ್ರಾರಂಭ.
ನಿಮಗೆ ಆಷಾಢ ಜುಲೈ 11ರಿಂದ ಪ್ರಾರಂಭವಾಗಲಿ ಅಥವಾ ಜುಲೈ 17ರಿಂದ ಪ್ರಾರಂಭವಾಗಲಿ ಈ ವರ್ಷ 4 ಆಷಾಢ ಶುಕ್ರವಾರ ಸಿಗುವುದು. ಈ ನಾಲ್ಕು ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೆ ತುಂಬಾ ಶ್ರೇಷ್ಠ ಎಂದು ಹೇಳಲಾಗುವುದು.
ಆಷಾಢ ಮಾಸದಲ್ಲಿ ದೇವಿ ಶಕ್ತಿಗಳನ್ನು ಆರಾಧಿಸಲಾಗುವುದು. ಈ ತಿಂಗಳಿನಲ್ಲಿ ದೇವಿಯ ಶಕ್ತಿ ಭೂಮಿಯ ಮೇಲೆ ಅಧಿಕವಿರುತ್ತದೆ, ಇದರಿಂದಾಗಿ ದೇವಿಯನ್ನು ಆರಾಧಿಸುವುದರಿಂದ ಅನೇಕ ಪ್ರಯೋಜನಗಳು ಸಿಗುವುದು.
ಆಷಾಢ ಮಾಸದ ನಾಲ್ಕು ವಾರಗಳಲ್ಲಿ ದೇವಿಯ ಯಾವ ಸ್ವರೂಪ ಆರಾಧಿಸಲಾಗುವುದು ಎಂಬ ಮಾಹಿತಿ ಇಲ್ಲಿದೆ.

ಆಷಾಢ ಮೊದಲನೇ ಶುಕ್ರವಾರ: ಸ್ವರ್ಣಾಂಬಿಕ ದೇವಿಯ ಆರಾಧನೆ
ಆಷಾಢ ಮಾಸದ ಮೊದಲನೇ ಶುಕ್ರವಾರ ಸ್ವರ್ಣಾಂಬಿಕ ದೇವಿಯನ್ನು ಆರಾಧಿಸಲಾಗುವುದು. ಇದು ಪಾರ್ವತಿಯ ಒಂದು ರೂಪವಾಗಿದೆ. ಸ್ವರ್ಣಾಂಬಿಕ ದೇವಿಯನ್ನು ಭಕ್ತಿಯಿಂದ ಆರಾಧಿಸುವುದರಿಂದ ಐಶ್ವರ್ಯ ವೃದ್ಧಿಸುವುದು.

ಆಷಾಢ 2ನೇ ಶುಕ್ರವಾರ: ಕಾಳಿ ದೇವಿಯ ಆರಾಧನೆ
ಕಾಳಿ ಸ್ವರೂಪವನ್ನು ಆರಾಧಿಸುವುದರಿಂದ ಜ್ಞಾನ ಹೆಚ್ಚುವುದು, ಬುದ್ಧಿ ಶಕ್ತಿ ಹೆಚ್ಚುವುದು. ವಿದ್ಯಾರ್ಥಿಗಳು, ಅಧ್ಯಯನ ಮಾಡುವವರು ಒಳ್ಳೆಯ ಫಲ ಕಾಣಬಹುದು.

ಆಷಾಢ 3ನೇ ಶುಕ್ರವಾರ: ಕಾಳಿಂಕಾಂಬ ದೇವಿಯ ಆರಾಧನೆ
ಪಾರ್ವತಿ ದೇವಿಯ ಈ ಅವತಾರವನ್ನು ಆರಾಧಿಸುವುದರಿಂದ ದೇವಿಯು ಧೈರ್ಯ ಹಾಗೂ ಆರೋಗ್ಯ ನೀಡಿ ಕರುಣಿಸುತ್ತಾಳೆ.

ಆಷಾಢ 4ನೇ ಶುಕ್ರವಾರ: ಕಾಮಾಕ್ಷಿ ದೇವಿ ಆರಾಧನೆ ಹಾಗೂ ಲಕ್ಷ್ಮಿ ಪೂಜೆ
ಶಿವ ಶಕ್ತಿಯ ಸ್ವರೂಪವಾದ ಕಾಮಾಕ್ಷಿ ದೇವಿಯನ್ನು ಆರಾಧಿಸಲಾಗುವುದು. ಇನ್ನು ಕೊನೆಯ ಆಷಾಢ ಶುಕ್ರವಾರದಂದು ಲಕ್ಷ್ಮಿಯನ್ನು ಕೂಡ ಆರಾಧನೆ ಮಾಡಲಾಗುವುದು. ಈ ದಿನ ಲಕ್ಷ್ಮಿಯು ನಮ್ಮ ಬೇಡಿಕೆಗಳನ್ನು ಆಲಿಸುತ್ತಾಳೆ, ಮಹಿಳೆಯರು ಭಕ್ತಿಯಿಂದ ಪೂಜೆ ಮಾಡಿ ಬೇಡಿಕೊಂಡರೆ ಅವರ ಇಷ್ಟಾರ್ಥಗಳು ನೆರವೇರುವುದು, ಕುಟುಂಬ ನೆಮ್ಮದಿ, ಸಂತೋಷ, ಐಶ್ಚರ್ಯ ಕರುಣಿಸುವಳು.
ಹೀಗೆ ಆಷಾಢ ಶುಕ್ರವಾರ ತುಂಬಾ ಪ್ರಮುಖವಾಗಿದ್ದು ಈ ದಿನ ವ್ರತ ಮಾಡುವವರು ದೇವಿ ಮೂರ್ತಿಯನ್ನು ಅಲಂಕರಿಸಿ, ಮಂತ್ರಗಳನ್ನು ಪಠಿಸಿ ಪೂಜೆ ಮಾಡುತ್ತಾರೆ, ನಂತರ ದೇವಿಗೆ ನೈವೇದ್ಯ ಅರ್ಪಿಸಿ, ಮುತ್ತೈದೆಯರನ್ನು ಕರೆದು ಅವರಿಗೆ ತಾಂಬೂಲ ನೀಡಲಾಗುವುದು.



Click it and Unblock the Notifications











