Just In
- 3 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 12 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 13 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 13 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
Don't Miss
- News Lok Sabha election: ಬೆಂಗಳೂರಿನಲ್ಲಿ ಒಂದು ಕೋಟಿ ದಾಟಿದ ಮತದಾರರ ಸಂಖ್ಯೆ
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಷಾಢ ಶುಕ್ರವಾರ: ಯಾವ ಶುಕ್ರವಾರ ಯಾವ ದೇವಿಯ ಆರಾಧನೆ ಮಾಡಬೇಕು?
ಆಷಾಢ ಮಾಸ ಕರ್ನಾಟಕದಲ್ಲಿ ಜುಲೈ 11-ಆಗಸ್ಟ್ 8ರವರೆಗೆ ಇದೆ. ಆದರೆ ಕರ್ನಾಟಕದ ಕೆಲವು ಕಡೆ ಅಂದ್ರೆ ಕೊಡಗು, ಮಂಗಳೂರು ಕಡೆ ಆಷಾಢ ಜುಲೈ 17ರಿಂದ ಪ್ರಾರಂಭವಾಗಿ ಆಗಸ್ಟ್ 16ರವರೆಗೆ ಇರುತ್ತದೆ. ಆಗಸ್ಟ್ 17ರಿಂದ ಶ್ರಾವಣ ಪ್ರಾರಂಭ.
ನಿಮಗೆ ಆಷಾಢ ಜುಲೈ 11ರಿಂದ ಪ್ರಾರಂಭವಾಗಲಿ ಅಥವಾ ಜುಲೈ 17ರಿಂದ ಪ್ರಾರಂಭವಾಗಲಿ ಈ ವರ್ಷ 4 ಆಷಾಢ ಶುಕ್ರವಾರ ಸಿಗುವುದು. ಈ ನಾಲ್ಕು ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೆ ತುಂಬಾ ಶ್ರೇಷ್ಠ ಎಂದು ಹೇಳಲಾಗುವುದು.
ಆಷಾಢ ಮಾಸದಲ್ಲಿ ದೇವಿ ಶಕ್ತಿಗಳನ್ನು ಆರಾಧಿಸಲಾಗುವುದು. ಈ ತಿಂಗಳಿನಲ್ಲಿ ದೇವಿಯ ಶಕ್ತಿ ಭೂಮಿಯ ಮೇಲೆ ಅಧಿಕವಿರುತ್ತದೆ, ಇದರಿಂದಾಗಿ ದೇವಿಯನ್ನು ಆರಾಧಿಸುವುದರಿಂದ ಅನೇಕ ಪ್ರಯೋಜನಗಳು ಸಿಗುವುದು.
ಆಷಾಢ ಮಾಸದ ನಾಲ್ಕು ವಾರಗಳಲ್ಲಿ ದೇವಿಯ ಯಾವ ಸ್ವರೂಪ ಆರಾಧಿಸಲಾಗುವುದು ಎಂಬ ಮಾಹಿತಿ ಇಲ್ಲಿದೆ.
ಆಷಾಢ ಮೊದಲನೇ ಶುಕ್ರವಾರ: ಸ್ವರ್ಣಾಂಬಿಕ ದೇವಿಯ ಆರಾಧನೆ
ಆಷಾಢ ಮಾಸದ ಮೊದಲನೇ ಶುಕ್ರವಾರ ಸ್ವರ್ಣಾಂಬಿಕ ದೇವಿಯನ್ನು ಆರಾಧಿಸಲಾಗುವುದು. ಇದು ಪಾರ್ವತಿಯ ಒಂದು ರೂಪವಾಗಿದೆ. ಸ್ವರ್ಣಾಂಬಿಕ ದೇವಿಯನ್ನು ಭಕ್ತಿಯಿಂದ ಆರಾಧಿಸುವುದರಿಂದ ಐಶ್ವರ್ಯ ವೃದ್ಧಿಸುವುದು.
ಆಷಾಢ 2ನೇ ಶುಕ್ರವಾರ: ಕಾಳಿ ದೇವಿಯ ಆರಾಧನೆ
ಕಾಳಿ ಸ್ವರೂಪವನ್ನು ಆರಾಧಿಸುವುದರಿಂದ ಜ್ಞಾನ ಹೆಚ್ಚುವುದು, ಬುದ್ಧಿ ಶಕ್ತಿ ಹೆಚ್ಚುವುದು. ವಿದ್ಯಾರ್ಥಿಗಳು, ಅಧ್ಯಯನ ಮಾಡುವವರು ಒಳ್ಳೆಯ ಫಲ ಕಾಣಬಹುದು.
ಆಷಾಢ 3ನೇ ಶುಕ್ರವಾರ: ಕಾಳಿಂಕಾಂಬ ದೇವಿಯ ಆರಾಧನೆ
ಪಾರ್ವತಿ ದೇವಿಯ ಈ ಅವತಾರವನ್ನು ಆರಾಧಿಸುವುದರಿಂದ ದೇವಿಯು ಧೈರ್ಯ ಹಾಗೂ ಆರೋಗ್ಯ ನೀಡಿ ಕರುಣಿಸುತ್ತಾಳೆ.
ಆಷಾಢ 4ನೇ ಶುಕ್ರವಾರ: ಕಾಮಾಕ್ಷಿ ದೇವಿ ಆರಾಧನೆ ಹಾಗೂ ಲಕ್ಷ್ಮಿ ಪೂಜೆ
ಶಿವ ಶಕ್ತಿಯ ಸ್ವರೂಪವಾದ ಕಾಮಾಕ್ಷಿ ದೇವಿಯನ್ನು ಆರಾಧಿಸಲಾಗುವುದು. ಇನ್ನು ಕೊನೆಯ ಆಷಾಢ ಶುಕ್ರವಾರದಂದು ಲಕ್ಷ್ಮಿಯನ್ನು ಕೂಡ ಆರಾಧನೆ ಮಾಡಲಾಗುವುದು. ಈ ದಿನ ಲಕ್ಷ್ಮಿಯು ನಮ್ಮ ಬೇಡಿಕೆಗಳನ್ನು ಆಲಿಸುತ್ತಾಳೆ, ಮಹಿಳೆಯರು ಭಕ್ತಿಯಿಂದ ಪೂಜೆ ಮಾಡಿ ಬೇಡಿಕೊಂಡರೆ ಅವರ ಇಷ್ಟಾರ್ಥಗಳು ನೆರವೇರುವುದು, ಕುಟುಂಬ ನೆಮ್ಮದಿ, ಸಂತೋಷ, ಐಶ್ಚರ್ಯ ಕರುಣಿಸುವಳು.
ಹೀಗೆ ಆಷಾಢ ಶುಕ್ರವಾರ ತುಂಬಾ ಪ್ರಮುಖವಾಗಿದ್ದು ಈ ದಿನ ವ್ರತ ಮಾಡುವವರು ದೇವಿ ಮೂರ್ತಿಯನ್ನು ಅಲಂಕರಿಸಿ, ಮಂತ್ರಗಳನ್ನು ಪಠಿಸಿ ಪೂಜೆ ಮಾಡುತ್ತಾರೆ, ನಂತರ ದೇವಿಗೆ ನೈವೇದ್ಯ ಅರ್ಪಿಸಿ, ಮುತ್ತೈದೆಯರನ್ನು ಕರೆದು ಅವರಿಗೆ ತಾಂಬೂಲ ನೀಡಲಾಗುವುದು.