Latest Updates
-
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್!
Ash Wednesday 2023: ಬೂದಿ ಬುಧವಾರ ಬಂತು: ಕ್ರೈಸ್ತರಿಗೆ ತಪಸ್ಸು ಕಾಲ ಆರಂಭ
ಫೆ. 22ರಿಂದ ಕ್ರೈಸ್ತರಿಗೆ ತಪಸ್ಸು ಕಾಲ ಆರಂಭ. ಬುಧವಾರದಂದು ಪ್ರಾರಂಭವಾಗುವ ಆಚರಣೆ 40 ದಿನಗಳವರೆಗೆ ಇರುತ್ತದೆ. ಇದನ್ನು ಬೂದಿ ಬುಧವಾರ ಅಥವಾ ಆ್ಯಷ್ ವೆನ್ಸ್ಡೇ ಎಂದು ಕರೆಯುತ್ತಾರೆ. ಅಂದರೆ ಈ ದಿನದಿಂದ ಗುಡ್ಫ್ರೈಡೇಯವರಿಗೆ ಕ್ರೈಸ್ತರು ತ್ಯಾಗ ಜೀವನ ನಡೆಸುತ್ತಾರೆ. ಮಾಂಸಾಹಾರದಿಂದ ದೂರವಿರುತ್ತಾರೆ. ಮಾದಕ ವಸ್ತುಗಳಿಂದ ದೂರವಿರುತ್ತಾರೆ. ಪಾರ್ಟಿಗಳು, ಔತಣ ಕೂಡಗಳನ್ನು ಏರ್ಪಡಿಸುವುದಿಲ್ಲ.

ಇದೊಂದು ಯಹೂದಿಗಳು ಆಚರಿಸುತ್ತಿದ್ದ ಸಂಸ್ಕೃತ್ತಿಯಾಗಿತ್ತು. ದೇವರಿಗೆ ವಿಮುಖವಾಗಿದ್ದರಿಂದ ಕಷ್ಟ ಅನುಭವಿಸಬೇಕಾಗಿ ಬಂತು ಎಂಬ ಪ್ರಾಯಶ್ಚಿತ್ತ ರೂಪವಾಗಿ ಮೈಗೆಲ್ಲಾ ಬೂದಿ ಬಳಿದುಕೊಂಡು, ನಾರುಮುಡಿಯುಟ್ಟು ತಪ್ಪಸ್ಸು ಮಾಡುತ್ತಿದ್ದರು. ಇಂದು ಕ್ರೈಸ್ತರು ಅದನ್ನೇ ಸಾಂಕೇತವಾಗಿ ಆಚರಿಸುತ್ತಾರೆ.
ಬೂದಿ ಬುಧವಾರದಂದು ಚರ್ಚ್ಗೆ ತೆರಳಿ ಯೇಸುವನ್ನು ಆರಾಧಿಸಿ ಪಾದ್ರಿ ಮುಂದೆ ಸಾಲಾಗಿ ನಿಲ್ಲುತ್ತಾರೆ. ಪಾದ್ರಿ ಬೂದಿ ಬಟ್ಟಲನ್ನು ಕೈಯಲ್ಲಿ ಹಿಡಿದು, ಅದರಿಂದ ಸ್ವಲ್ಪ ಬೂದಿ ತೆಗೆದು ಎಲ್ಲರ ಹಣೆಗೆ ಶಿಲುಬೆ ಆಕಾರದಲ್ಲಿ ಬರೆಯುತ್ತಾರೆ. ಮರಳಿನಿಂದ ಬಂದ ದೇಹವಿದು, ಮರಳಿಗೆ ಮಣ್ಣಿಗೆ ಸೇರುತ್ತದೆ ಎಂಬ ಅರ್ಥದ ಹಾಡುಗಳನ್ನು ಹೇಳುತ್ತಾರೆ. ಇದು ತ್ಯಾಗದ ಸಂಕೇತವಾಗಿದ್ದು, ಮೋಜು ಮಸ್ತಿಗೆ ಖರ್ಚು ಮಾಡುವ ದುಡ್ಡನ್ನು ಬಡಬಗ್ಗರಿಗೆ ದಾನ ಮಾಡಬೇಕು ಎಂಬ ಆಶಯ ಈ ಆಚರಣೆ ಹಿಂದಿದೆ.
ದರ್ಪ, ದಬ್ಬಾಳಿಕೆ ಮರೆತು ಮನುಷ್ಯತ್ವವನ್ನು ಎತ್ತಿ ಹಿಡಿಯಲು ಬೂದಿ ಬುಧವಾರ ಆಚರಿಸುತ್ತಾರೆ.



Click it and Unblock the Notifications