Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
Ash Wednesday 2023: ಬೂದಿ ಬುಧವಾರ ಬಂತು: ಕ್ರೈಸ್ತರಿಗೆ ತಪಸ್ಸು ಕಾಲ ಆರಂಭ
ಫೆ. 22ರಿಂದ ಕ್ರೈಸ್ತರಿಗೆ ತಪಸ್ಸು ಕಾಲ ಆರಂಭ. ಬುಧವಾರದಂದು ಪ್ರಾರಂಭವಾಗುವ ಆಚರಣೆ 40 ದಿನಗಳವರೆಗೆ ಇರುತ್ತದೆ. ಇದನ್ನು ಬೂದಿ ಬುಧವಾರ ಅಥವಾ ಆ್ಯಷ್ ವೆನ್ಸ್ಡೇ ಎಂದು ಕರೆಯುತ್ತಾರೆ. ಅಂದರೆ ಈ ದಿನದಿಂದ ಗುಡ್ಫ್ರೈಡೇಯವರಿಗೆ ಕ್ರೈಸ್ತರು ತ್ಯಾಗ ಜೀವನ ನಡೆಸುತ್ತಾರೆ. ಮಾಂಸಾಹಾರದಿಂದ ದೂರವಿರುತ್ತಾರೆ. ಮಾದಕ ವಸ್ತುಗಳಿಂದ ದೂರವಿರುತ್ತಾರೆ. ಪಾರ್ಟಿಗಳು, ಔತಣ ಕೂಡಗಳನ್ನು ಏರ್ಪಡಿಸುವುದಿಲ್ಲ.

ಇದೊಂದು ಯಹೂದಿಗಳು ಆಚರಿಸುತ್ತಿದ್ದ ಸಂಸ್ಕೃತ್ತಿಯಾಗಿತ್ತು. ದೇವರಿಗೆ ವಿಮುಖವಾಗಿದ್ದರಿಂದ ಕಷ್ಟ ಅನುಭವಿಸಬೇಕಾಗಿ ಬಂತು ಎಂಬ ಪ್ರಾಯಶ್ಚಿತ್ತ ರೂಪವಾಗಿ ಮೈಗೆಲ್ಲಾ ಬೂದಿ ಬಳಿದುಕೊಂಡು, ನಾರುಮುಡಿಯುಟ್ಟು ತಪ್ಪಸ್ಸು ಮಾಡುತ್ತಿದ್ದರು. ಇಂದು ಕ್ರೈಸ್ತರು ಅದನ್ನೇ ಸಾಂಕೇತವಾಗಿ ಆಚರಿಸುತ್ತಾರೆ.
ಬೂದಿ ಬುಧವಾರದಂದು ಚರ್ಚ್ಗೆ ತೆರಳಿ ಯೇಸುವನ್ನು ಆರಾಧಿಸಿ ಪಾದ್ರಿ ಮುಂದೆ ಸಾಲಾಗಿ ನಿಲ್ಲುತ್ತಾರೆ. ಪಾದ್ರಿ ಬೂದಿ ಬಟ್ಟಲನ್ನು ಕೈಯಲ್ಲಿ ಹಿಡಿದು, ಅದರಿಂದ ಸ್ವಲ್ಪ ಬೂದಿ ತೆಗೆದು ಎಲ್ಲರ ಹಣೆಗೆ ಶಿಲುಬೆ ಆಕಾರದಲ್ಲಿ ಬರೆಯುತ್ತಾರೆ. ಮರಳಿನಿಂದ ಬಂದ ದೇಹವಿದು, ಮರಳಿಗೆ ಮಣ್ಣಿಗೆ ಸೇರುತ್ತದೆ ಎಂಬ ಅರ್ಥದ ಹಾಡುಗಳನ್ನು ಹೇಳುತ್ತಾರೆ. ಇದು ತ್ಯಾಗದ ಸಂಕೇತವಾಗಿದ್ದು, ಮೋಜು ಮಸ್ತಿಗೆ ಖರ್ಚು ಮಾಡುವ ದುಡ್ಡನ್ನು ಬಡಬಗ್ಗರಿಗೆ ದಾನ ಮಾಡಬೇಕು ಎಂಬ ಆಶಯ ಈ ಆಚರಣೆ ಹಿಂದಿದೆ.
ದರ್ಪ, ದಬ್ಬಾಳಿಕೆ ಮರೆತು ಮನುಷ್ಯತ್ವವನ್ನು ಎತ್ತಿ ಹಿಡಿಯಲು ಬೂದಿ ಬುಧವಾರ ಆಚರಿಸುತ್ತಾರೆ.



Click it and Unblock the Notifications