Latest Updates
-
ಗುಜರಾತ್ ಲಿವ್-ಇನ್ ಜೋಡಿಗಳೇ, ಈ ಹೊಸ ನಿಯಮ ಮಿಸ್ ಮಾಡ್ಬೇಡಿ! -
ಹಬ್ಬದ ಅಲಂಕಾರ: ಕಡಿಮೆ ಖರ್ಚಿನಲ್ಲಿ ನಿಮ್ಮ ಮನೆ ಕಂಗೊಳಿಸಲಿ ಹೀಗೆ! -
ಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ಈ ಪಾನೀಯಗಳು ನಿಮ್ಮನ್ನು ಕಾಪಾಡುತ್ತವೆ -
ಬಿಸಿಗಾಳಿ ಕಾಟ: ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು! -
ಅನುಷ್ಕಾ ಶರ್ಮಾ ಫ್ಲೋರಲ್ ಲುಕ್: ಸ್ಟೇಡಿಯಂನಲ್ಲಿ ಮಿಂಚಲು ಹೀಗೆ ಮಾಡಿ -
ಬಿಸಿಲಿನಲ್ಲಿ ವ್ಯಾಯಾಮ: ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಹೈರಾಕ್ಸ್ ಬೆಂಗಳೂರು: ಗೆಲುವಿಗಾಗಿ ಬೆಳಗಿನ ತಯಾರಿ ಹೀಗಿರಲಿ -
ಡೇಟಿಂಗ್ ಆ್ಯಪ್ ಬಳಕೆದಾರರೇ ಎಚ್ಚರ: ಈ ಕೆಫೆಗಳೇ ನಿಮ್ಮ ಜೇಬಿಗೆ ಕತ್ತರಿ! -
ದೆಹಲಿ-ಎನ್ಸಿಆರ್ ಬಿರುಗಾಳಿ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಹೀಗೆ ಮಾಡಿ -
AJIO ಮಿಡ್ನೈಟ್ ಮೇನಿಯಾ: ಸ್ನೀಕರ್ಸ್ ಮೇಲೆ ಭರ್ಜರಿ ಆಫರ್ ಪಡೆಯೋದು ಹೇಗೆ?
ಶ್ರಾವಣ ಮಾಸದಲ್ಲಿ ಶಿವನನ್ನು ಒಲಿಸಿಕೊಂಡರೆ ಇಷ್ಟಾರ್ಥ ಸಿದ್ಧಿ
ಹಿಂದೂ ಶಾಸ್ತ್ರಗಳಲ್ಲಿ ಶ್ರಾವಣ ಮಾಸವನ್ನು ಪವಿತ್ರ ಮಾಸವೆಂದೇ ಪರಿಗಣಿಸಲಾಗಿದ್ದು ಶಿವನು ಭೂಮಿಯೊಂದಿಗೆ ಹೊಂದಿರುವ ಅವಿನಾಭಾವ ಸಂಬಂಧವನ್ನು ಈ ಮಾಸವು ತಿಳಿಸುತ್ತದೆ. ವ್ರತ ಮತ್ತು ಪೂಜೆ ಪುನಸ್ಕಾರಗಳಿಂದ ಶಿವನನ್ನು ಒಲಿಸಿಕೊಂಡರೆ ಅವರು ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂಬುದು ಈ ಮಾಸದ ವಿಶೇಷತೆಯಾಗಿದೆ.
ಶ್ರಾವಣ ಮಾಸದ ಸೋಮವಾರಗಳಂದು ಕನ್ಯೆಯರು ಮತ್ತು ಹೆಂಗಳೆಯರು ಶಿವನನ್ನು ಆರಾಧಿಸಿದಲ್ಲಿ ಅವರಿಗೆ ಉತ್ತಮ ವರನು ದೊರಕಿ ಕುಟುಂಬದಲ್ಲಿ ಶಾಂತಿ ನೆಲೆಸುವ ವರವನ್ನು ನೀಡುತ್ತಾರೆ ಎಂಬ ನಂಬಿಕೆ ಇದೆ. ಶ್ರಾವಣ ಮಾಸದ ವಿಶೇಷ: ಬೈದ್ಯನಾಥ ಶಿವನ ಕಥೆ

ಶಿವ ದೇವರಿಗೆ ಶ್ರಾವಣ ಮಾಸವು ಹೆಚ್ಚು ಅಚ್ಚುಮೆಚ್ಚಿನದ್ದಾಗಿದೆ. ಪಾರ್ವತಿ ದೇವಿಯೊಂದಿಗೆ ಶಿವನು ಮತ್ತೆ ಒಂದಾಗಿರುವುದು ಈ ಮಾಸದಂದೇ ಎಂಬ ಪ್ರತೀತಿ ಇದ್ದು ಸ್ತ್ರೀಯರು ತಾವು ಬಯಸಿದವರನ್ನು ಪತಿಯಾಗಿ ಪಡೆದುಕೊಳ್ಳಲು ಈ ಮಾಸದಂದು ಶಿವನನ್ನು ಬೇಡಿಕೊಂಡರೆ ಅವರ ಮನೋಭಿಲಾಷೆ ಈಡೇರುತ್ತದೆ.
ಅಂತೆಯೇ ಈ ಮಾಸ ಏಕೆ ಶಿವನಿಗೆ ಅಚ್ಚುಮೆಚ್ಚಿನದ್ದಾಗಿದೆ ಎಂಬುದನ್ನು ಈ ಕೆಳಗಿನ ಸ್ಲೈಡರ್ಗಳಲ್ಲಿ ತಿಳಿಸಿದ್ದು ಇದಕ್ಕೆ ಪುರಾಣದ ಹಿನ್ನಲೆ ಕೂಡ ಇದೆ,ಮುಂದೆ ಓದಿ....
ಪಾರ್ವತಿಯ ತಪಸ್ಸಿಗೆ ಮೆಚ್ಚಿದ ಶಿವ
ದಂತಕತೆಗಳ ಪ್ರಕಾರ ಸತಿಯು ತನ್ನನ್ನು ತಾನು ಅಗ್ನಿಯಲ್ಲಿ ಸುಟ್ಟುಕೊಂಡ ಮೇಲೆ ಪಾರ್ವತಿ ದೇವಿಯಾಗಿ ಮರು ಅವತಾರವನ್ನು ಎತ್ತಿದಳು. ಆಗ ಆಕೆಯು ಶಿವನನ್ನು ಮದುವೆಯಾಗುವ ಸಲುವಾಗಿ ಘೋರ ತಪಸ್ಸನ್ನು ಆಚರಿಸಿದಳು. ಇದರಿಂದ ಸಂತುಷ್ಟನಾದ ಶಿವನು ಪಾರ್ವತಿಯನ್ನು ಮದುವೆಯಾಗಲು ಒಪ್ಪಿದನು. ಹಿಂದೂ ಧರ್ಮದ ಭಾವೈಕ್ಯತೆಯ ಹಬ್ಬ: ಶ್ರಾವಣ ಮಾಸ
ಪುರಾಣಗಳ ಪ್ರಕಾರ
ಶ್ರಾವಣ ಮಾಸದಲ್ಲಿ ಶಿವನು ತನ್ನ ಅತ್ತೆ- ಮಾವನ ಮನೆಗೆ ಭೇಟಿ ನೀಡುವ ಮಾಸ ಇದಾಗಿದೆ. ಅವರು ಅಪರಿಮಿತವಾದ ಪ್ರೀತಿ ಮತ್ತು ವಾತ್ಸಲ್ಯದಿಂದ ಶಿವನನ್ನು ಬರಮಾಡಿಕೊಳ್ಳಲು ಕಾಯುತ್ತಿರುತ್ತಾರಂತೆ. ಈ ಕಾರಣಕ್ಕಾಗಿಯೂ ಸಹ ಶಿವನಿಗೆ ಶ್ರಾವಣ ಮಾಸವೆಂದರೆ ಅತ್ಯಂತ ಪ್ರೀತಿ.
ಪುರಾಣಗಳ ಪ್ರಕಾರ
ಯಾವಾಗ ಶಿವನು ಕೈಲಾಸದಿಂದ ತನ್ನ ಅತ್ತೆ-ಮಾವನನ್ನು ನೋಡಲು ಇಳಿದು ಬರುತ್ತಾನೋ, ಆಗ ಆತನಿಗೆ ಅತ್ಯಂತ ಆದರದ ಸ್ವಾಗತವನ್ನು ನೀಡಲಾಗುತ್ತದೆಯಂತೆ. ಆತ ಭುವಿಗೆ ಇಳಿದು ಬರುವ ಸಂದರ್ಭವನ್ನು ಜಲಾಭಿಷೇಕದ ಮೂಲಕ ಆರಾಧಿಸಲಾಗುತ್ತದೆ. ಆದ್ದರಿಂದಲೇ ಶಿವಾಲಯಗಳಲ್ಲಿ ಶಿವಲಿಂಗಕ್ಕೆ ನೀರು, ಹಾಲು, ಮೊಸರು ಇತ್ಯಾದಿಗಳಿಂದ ಅಭಿಷೇಕವನ್ನು ಮಾಡುತ್ತಾರೆ.
ಕ್ಷೀರಸಾಗರ ಮಂಥನ



Click it and Unblock the Notifications














