Latest Updates
-
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ!
ಪಿತೃ ಪಕ್ಷದ ವೇಳೆ ಕಾಗೆಗಳಿಗೆ ಏಕೆ ಇಷ್ಟೊಂದು ಮಹತ್ವ?

ಇಹಲೋಕ ತ್ಯಜಿಸಿರುವಂತಹ ಹಿರಿಯರ ಆತ್ಮಗಳಿಗೆ ಶಾಂತಿ ಸಿಗಲೆಂದು ಪಿತೃ ಪಕ್ಷದಲ್ಲಿ ಶ್ರಾದ್ಧ ಅಥವಾ ಪಿತೃ ಪಕ್ಷವನ್ನು ಮಾಡಲಾಗುತ್ತದೆ. ಪಿತೃ ಪಕ್ಷವು 15 ದಿನಗಳ ಕಾಲ ಇದ್ದು, ಭಾದ್ರಪದ ತಿಂಗಳ ಪೂರ್ಣಿಮೆಯಿಂದ ಅಶ್ವಿನಿ ತಿಂಗಳ ಅಮವಾಸ್ಯೆ ತನಕ ಪಿತೃ ಪಕ್ಷವಿರುವುದು. ಪಿತೃ ಪಕ್ಷವು 2018ರ ಸೆ.24ರಂದು ಆರಂಭವಾಗಿ ಅಕ್ಟೋಬರ್ 8ರ ಅಮವಾಸ್ಯೆಯಂದು ಕೊನೆಗೊಳ್ಳಲಿದೆ.
ಶ್ರಾದ್ಧವನ್ನು ಹಿರಿಯರು ನಿಧನರಾದ ತಿಥಿಗೆ ಅನುಗುಣವಾಗಿ ಮಾಡಲಾಗುವುದು. ಅದೇ ರೀತಿ ಅಮವಾಸ್ಯೆಯಂದು ಕೂಡ ಇದನ್ನು ಮಾಡಲಾಗುವುದು. ಅಮವಾಸ್ಯೆಯಂದು ಮೃತಪಟ್ಟ ಹಿರಿಯರನ್ನು ಪೂಜಿಸಲಾಗುವುದು. ತಿಂಗಳಲ್ಲಿ ಬರುವಂತಹ ಪ್ರತೀ ಅಮವಾಸ್ಯೆಯ ವೇಳೆಯು ಇದನ್ನು ಮಾಡಬಹುದು. ಈ ವೇಳೆ ಕಾಗೆಗಳಿಗೆ ಆಹಾರ ನೀಡುವಂತಹ ಪದ್ಧತಿಯು ಇದೆ. ಪಿತೃ ಪಕ್ಷದ ವೇಳೆ ಕಾಗೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗುವುದು. ಇದರ ಬಗ್ಗೆ ಕೆಲವೊಂದು ನಂಬಿಕೆಗಳು ಕೂಡ ಇವೆ. ಈ ಲೇಖನದಲ್ಲಿ ಅವುಗಳ ಬಗ್ಗೆ ತಿಳಿಸಿಕೊಡಲಾಗಿದೆ...

ಹೂ ಅಥವಾ ಎಲೆಗಳನ್ನು ಹಿಡಿದಿರುವ ಕಾಗೆ
ಪಕ್ಷಿಗಳು ಹೂ ಅಥವಾ ಹೂವಿನ ದಳಗಳು ಅಥವಾ ಎಲೆಗಳನ್ನು ಹಿಡಿದುಕೊಂಡು ಹೋಗುವುದು ದೊಡ್ಡ ವಿಷಯವೇನಲ್ಲ. ಆದರೆ ಕಾಗೆಯು ಇದನ್ನು ಹಿಡಿದಿದ್ದರೆ ಆಗ ಅದು ಶುಭವೆಂದು ಪರಿಗಣಿಸಲಾಗಿದೆ. ತುಂಬಾ ಪವಿತ್ರವಾಗಿರುವುದು ಏನೋ ಸಂಭವಿಸಲಿದೆ ಎಂದು ನಂಬಲಾಗಿದೆ. ನಿಮ್ಮ ಬಯಕೆಯು ಈಡೇರಲಿದೆ ಎನ್ನುವುದರ ಸೂಚನೆ ಇದಾಗಿದೆ.

ದನ ಮೇಲೆ ಕಾಗೆ ಕುಳಿತಿರುವುದು
ಇದು ಮತ್ತೊಂದು ಅಪರೂಪದ ಘಟನೆ. ಕಾಗೆಯು ದನದ ಬೆನ್ನಿನ ಮೇಲೆ ಕುಳಿತುಕೊಂಡು ತನ್ನ ಕೊಕ್ಕನ್ನು ಉಜ್ಜಿಕೊಳ್ಳುತ್ತಿದ್ದರೆ ಆಗ ಇದನ್ನು ನೋಡಿದ ವ್ಯಕ್ತಿಗೆ ಒಳ್ಳೆಯ ಆಹಾರದ ತೃಪ್ತಿ ಸಿಗುತ್ತದೆ ಎನ್ನುವ ಸೂಚನೆಯಾಗಿದೆ ಎಂದು ನಂಬಲಾಗಿದೆ. ನೀವು ಹೀಗೆ ನೋಡಿದರೆ ಒಳ್ಳೆಯ ಆಹಾರ ಸಿಗುವುದು ಖಚಿತ.

ದಪ್ಪಗಿನ ಹಸಿರಾಗಿರುವ ಮರದ ಮೇಲೆ ಕಾಗೆ ಕುಳಿತಿರುವುದು
ಇದು ಅಪರೂಪವೆಂದು ಹೇಳಲಾಗದು. ಯಾಕೆಂದರೆ ಮರದ ಮೇಲೆ ಯಾವಾಗಲೂ ಕಾಗೆಗಳು ಕುಳಿತಿರುತ್ತದೆ. ಆದರೆ ಮರವು ಹಸಿರಾಗಿ, ದಪ್ಪಗಿರಬೇಕು. ಇಂತಹದ್ದನ್ನು ನೋಡಿದರೆ ಇದು ಹಣಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಇದನ್ನು ನೋಡಿದವರಿಗೆ ಧನಲಾಭವಾಗಲಿದೆ ಎಂದು ನಂಬಲಾಗಿದೆ.

ಕೊಕ್ಕಿನಿಂದ ಹುಲ್ಲು ತೆಗೆದುಕೊಂಡು ಹೋಗುತ್ತಿರುವುದು
ಕಾಗೆ ಕೊಕ್ಕಿನಲ್ಲಿ ಒಣ ಹುಲ್ಲನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ನೋಡಿದರೆ, ಆಗ ಇದು ತುಂಬಾ ಪವಿತ್ರವೆಂದು ಪರಿಗಣಿಸಲಾಗಿದೆ. ಇದರ ಅರ್ಥವೆಂದರೆ ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ಬೇಗನೆ ಪರಿಹಾರವಾಗಲಿದೆ. ನಿಂತುಹೋಗಿರುವಂತಹ ಯೋಜನೆಗಳೆಲ್ಲವೂ ಮುಂದುವರಿಯಲಿದೆ ಎಂದು ನಂಬಲಾಗಿದೆ.

ನಿಮ್ಮ ಎಡ ಬದಿಯಿಂದ ಬಂದು ಏನಾದರೂ ತಿಂದರೆ
ನಿಮ್ಮ ಎಡದ ಬದಿಯಿಂದ ಕಾಗೆಯು ಬಂದು ಏನಾದರೂ ತಿನ್ನುತ್ತಲಿದ್ದರೆ, ಆಗ ಇದು ಶುಭಸೂಚಕವಾಗಿದೆ. ವಿಳಂಬವಾಗಿರುವ ಪ್ರವಾಸವು ಬೇಗನೆ ಆಗಲಿದೆ ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ಯೋಜನೆಗಳು ಪೂರ್ಣವಾಗಲಿದೆ ಎಂದು ನಂಬಲಾಗಿದೆ.

ಹಂದಿ ಮೇಲೆ ಕಾಗೆಯು ಕುಳಿತಿರುವುದು
ಹಂದಿಯ ಬೆನ್ನ ಮೇಲೆ ಕಾಗೆ ಕುಳಿತಿರುವುದನ್ನು ನೀವು ನೋಡಿದರೆ ಆಗ ಬೇಗನೆ ಶ್ರೀಮಂತರಾಗಲಿದ್ದೀರಿ ಎಂದು ಅರ್ಥೈಸಿಕೊಳ್ಳಿ. ಲಕ್ಷ್ಮೀ ದೇವಿಯು ನಿಮಗೆ ಒಲಿದಿದ್ದಾಳೆ ಮತ್ತು ಆಕೆಯು ಈ ಮೂಲಕ ಸೂಚನೆ ನೀಡಿದ್ದಾಳೆ ಎಂದು ತಿಳಿಯಿರಿ. ಧಾನ್ಯಗಳ ರಾಶಿ ಮೇಲೆ ಕಾಗೆ ಕುಳಿತಿದ್ದರೂ ಇದೇ ರೀತಿಯ ಆರ್ಥಿಕ ಲಾಭವಾಗುವುದು.



Click it and Unblock the Notifications