Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಬಾಲ ಗಂಗಾಧರ್ ತಿಲಕ್ 165ನೇ ಜನ್ಮ ದಿನಾಚರಣೆ: ಅವರ ಪ್ರಸಿದ್ಧ ಕೋಟ್ಸ್ ಇಲ್ಲಿವೆ
'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡದೇ ತೀರುತ್ತೇನೆ' ಎಂದು ಬ್ರಿಟಿಷರ ವಿರುದ್ಧ ಘರ್ಜಿಸಿದ ಹುಲಿ ಬಾಲ ಗಂಗಾಧರ್ ತಿಲಕ್. ಇವರ ಈ ಮಾತುಗಳನ್ನು ಇಂದಿಗೂ ಕೇಳಿದಾಗ ನಮ್ಮೆಲ್ಲರ ಮನದಲ್ಲಿ ಒಂದು ರೀತಿಯ ಆವೇಶ, ದೇಶ ಭಕ್ತಿ ಉಕ್ಕಿ ಬರುವುದು.
ಬಾಲ ಗಂಗಾಧರ್ ತಿಲಕರು ಭಾರತೀಯ ರಾಷ್ಟ್ರೀಯವಾದಿ, ಸಮಾಜ ಸುಧಾರಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಸ್ವಾತಂತ್ರ್ಯ ಹೋರಾಟಗಾರರು.
1856 ಜುಲೈ 23ರಂದು ಬಾಲ ಗಂಗಾಧರ್ ತಿಲಕರು ಮಹಾರಾಷ್ಟ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು. ಇಂದು ಅವರ 165ನೇ ಜನ್ಮ ದಿನಾಚರಣೆ. ನಾವಿಲ್ಲಿ ಈ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ನುಡಿದ ಮುತ್ತಿನಂಥ ಮಾತುಗಳ ಕೋಟ್ಸ್ ಇಲ್ಲಿ ನೀಡಿದ್ದೇವೆ ನೋಡಿ:

1. 'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಹಾಗೂ ಅದನ್ನು ನಾನು ಪಡದೇ ತೀರುತ್ತೇನೆ'
ಬಾಲ ಗಂಗಾಧರ್ ತಿಲಕ್
2. 'ಸ್ವಾತಂತ್ರ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದು ನನಗೆ ಸಿಗಲೇಬೇಕು'
ಬಾಲ ಗಂಗಾಧರ್ ತಿಲಕ್
3. 'ಸಮಸ್ಯೆಯೆಂಬುವುದು ಸಂಪನ್ಮೂಲ ಅಥವಾ ಸಾಮರ್ಥ್ಯದ ಕೊರತೆಯಲ್ಲ, ಬದಲಿಗೆ ಇಚ್ಛಾಶಕ್ತಿಯ ಕೊರತೆಯಾಗಿದೆ'
ಬಾಲ ಗಂಗಾಧರ್ ತಿಲಕ್
4. 'ಅಸ್ಪೃಶ್ಯತೆ ಎಂಬುವುದು ದೇವರಿಗಿದ್ದರೆ, ಅವನನ್ನು ದೇವರು ಎಂದು ನಾನು ಕರೆಯಲ್ಲ'
ಬಾಲ ಗಂಗಾಧರ್ ತಿಲಕ್
5. 'ಧರ್ಮ ಹಾಗೂ ಜೀವನ ಬೇರೆಯಲ್ಲ. ಸನ್ಯಾಸವನ್ನು ಸ್ವೀಕರಿಸುವುದು ಎಂದರೆ ಜೀವನವನ್ನೇ ಬಿಟ್ಟಂತೆ ಅಲ್ಲ. ನಾನು ಎಂಬ ಸ್ವಾರ್ಥದ ಬದಲಿಗೆ ದೇಶ, ಕುಟುಂಬ ಎಂದು ಎಲ್ಲರೂ ಒಟ್ಟಾಗಿ ದುಡಿಯುವುದೇ ನಿಜವಾದಸ್ಪೂರ್ತಿಯಾಗಿದೆ, ಮಾನವೀಯತೆಯಿಂದ ಮಾಡುವ ಕಾರ್ಯಗಳನ್ನು ಮಾಡಿದರೆ ದೇವರ ಕಾರ್ಯಕ್ಕೆ ಸಮ'
ಬಾಲ ಗಂಗಾಧರ್ ತಿಲಕ್
6. 'ಜೀವನ ಎಂಬುವುದು ಕಾರ್ಡ್ ಗೇಮ್ನಂತೆ. ಯಾವ ಕಾರ್ಡ್ ಸಿಗುತ್ತೆ ಎಂಬುವುದು ನಮ್ಮ ಕೈಯಲ್ಲಿಲ್ಲ, ಆದರೆ ಸಿಕ್ಕ ಕಾರ್ಡ್ ಅನ್ನು ಬಳಸಿಕೊಂಡು ಹೇಗೆ ಆಡುತ್ತೇವೆ ಎಂಬುವುದರಲ್ಲಿ ಯಶಸ್ಸು ಅಡಗಿದೆ'
ಬಾಲ ಗಂಗಾಧರ್ ತಿಲಕ್
7. 'ಧೈರ್ಯ ಎಂಬುವುದು ನಿಮ್ಮೊಳಗಿದ್ದರೆ ಅದೇ ನಿಮ್ಮ ವ್ಯಕ್ತಿತ್ವದ ಆಸ್ತಿ'
ಬಾಲ ಗಂಗಾಧರ್ ತಿಲಕ್



Click it and Unblock the Notifications





