Latest Updates
-
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು!
ಮಲಗುವ ಮುನ್ನ 'ಹನುಮಾನ್ ಚಾಲೀಸಾ' ಪಠಿಸಲು ಮರೆಯದಿರಿ
ಖ್ಯಾತ ಕವಿ ಗೋಸ್ವಾಮಿ ತುಳಸಿದಾಸರ ಖ್ಯಾತ ರಚನೆಯೇ ಹನುಮಾನ್ ಚಾಲೀಸ್ ಅಥವಾ ಚಾಲೀಸಾ. ಹಿಂದೂ ಧರ್ಮದಲ್ಲಿ ಈ ಚಾಲೀಸಾಕ್ಕೆ ವಿಶೇಷವಾದ ಮಹತ್ವವಿದ್ದು ಇದನ್ನು ಪಠಿಸುವ ಮೂಲಕ ಆಂಜನೇಯನ ಕೃಪೆಗೆ ಪಾತ್ರರಾಗಬಹುದು ಎಂದು ತಿಳಿಯಲಾಗುತ್ತದೆ. ಅಲ್ಲದೇ ಸೈತಾನನ ಪ್ರಭಾವವನ್ನೂ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಕೊನೆಗಾಣಿಸಬಹುದು. ಹನುಮಾನ್ ನಮ್ಮ ನಡುವೆ ಇದ್ದಾನೆಯೇ? ಇಲ್ಲಿದೆ ಪುರಾವೆಗಳು!
ಹನುಮಾನ್ ಚಾಲೀಸಾವನ್ನು ಪಠಿಸಲು ಅತ್ಯುತ್ತಮ ಸಮಯವೆಂದರೆ ಮುಂಜಾನೆ ಮತ್ತು ರಾತ್ರಿ ಮಲಗುವ ಮುನ್ನ. ವಿಶೇಷವಾಗಿ ಶನಿಗ್ರಹದ ಪ್ರಭಾವದಿಂದ ಉಪಟಳ ಇರುವ ವ್ಯಕ್ತಿಗಳು ಪ್ರತಿ ಶನಿವಾರ ರಾತ್ರಿ ಎಂಟು ಬಾರಿ ಪಠಿಸಿ ಮಲಗುವ ಮೂಲಕ ವಿಪತ್ತಿನಿಂದ ಪಾರಾಗಬಹುದು. ಬನ್ನಿ, ಹನುಮಾನ್ ಚಾಲೀಸಾವನ್ನು ರಾತ್ರಿ ಪಠಿಸುವ ಮೂಲಕ ಯಾವ ರೀತಿಯಾದ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ನೋಡೋಣ...

ಎಂಟು ಬಾರಿ ಪಠಿಸಿ
ಪ್ರತಿ ರಾತ್ರಿ ಮಲಗುವ ಮುನ್ನ ಹನುಮಾನ್ ಚಾಲೀಸಾ ಪ್ರಥಮ ಅಧ್ಯಾಯಗಳನ್ನು ಎಂಟು ಬಾರಿ ಪಠಿಸುವ ಮೂಲಕ ಅಂದಿನ ದಿನ ನಿಮಗೆ ಅರಿವಿದ್ದೋ, ಅರಿವಿರದೆಯೋ ಯಾರ ಮನಸ್ಸನ್ನು ನೋಯಿಸಿದ್ದರೆ ಆ ಪಾಪ ಇಲ್ಲವಾಗುತ್ತದೆ.

ಸಂಕಷ್ಟಗಳು ದೂರ
ಹನುಮಾನ್ ಚಾಲೀಸಾವನ್ನು ಪ್ರತಿ ರಾತ್ರಿ ಪಠಿಸುವ ಮೂಲಕ ಜೀವನದಲ್ಲಿ ಎದುರಾಗುವ ಪೀಡೆಗಳಿಂದ ಮುಕ್ತಿ ಪಡೆಯಬಹುದು. ವಿಶೇಷವಾಗಿ ರಾತ್ರಿ ನಿದ್ದೆಯಲ್ಲಿ ಹೆದರುವ ಮಕ್ಕಳು ಈ ಹನುಮಾನ್ ಚಾಲೀಸಾವನ್ನು ತಪ್ಪದೇ ಓದಬೇಕು.

ಸಂಕಷ್ಟಗಳು ದೂರ
ಏಕೆಂದರೆ ಹನುಮಾನ್ ಚಾಲೀಸಾವನ್ನು ಪಠಿಸುವ ಮೂಲಕ ಋಣಾತ್ಮಕ ಶಕ್ತಿಗಳು ಇಲ್ಲವಾಗಿ ಸುಖನಿದ್ದೆ ಆವರಿಸಲು ಸಾಧ್ಯವಾಗುತ್ತದೆ.

ಆಂಜನೇಯ ದೇವರ ರಕ್ಷಣೆ ನಿಮ್ಮ ಮೇಲಿರುತ್ತದೆ
ಹನುಮಾನ್ ಚಾಲೀಸಾವನ್ನು ಪ್ರತಿ ರಾತ್ರಿ ಪಠಿಸುವ ಮೂಲಕ ಆಂಜನೇಯ ದೇವರ ರಕ್ಷಣೆಯನ್ನು ಪಡೆಯಬಹುದು. ಅಲ್ಲದೇ ದೇವರ ಅನುಗ್ರಹದಿಂದ ಜೀವನದಲ್ಲಿ ಎದುರಾಗುವ ಅಡ್ಡಿ ಆತಂಕಗಳು ಇಲ್ಲವಾಗಿ ಜೀವನದ ಗುರಿಯನ್ನು ಸುಲಭವಾಗಿ ತಲುಪಬಹುದು.

1008 ಬಾರಿ ಹನುಮಾನ್ ಚಾಲೀಸಾವನ್ನು ಪಠಿಸಿದರೆ....
ಜೀವನದಲ್ಲಿ ಮಹತ್ತರವಾದ ಗುರಿಯನ್ನು ಸಾಧಿಸುವ ಇಚ್ಛೆಯುಳ್ಳವರು ತಮ್ಮ ಗುರಿ ಸಾಧನೆಯ ಅವಧಿಯಲ್ಲಿ ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಅಥವಾ ಮೂಲಾ ನಕ್ಷತ್ರದ ರಾತ್ರಿ ಒಟ್ಟು 1008 ಬಾರಿ ಹನುಮಾನ್ ಚಾಲೀಸಾವನ್ನು ಪಠಿಸಿದರೆ ಹನುಮದೇವರ ಅನುಗ್ರಹ ಪಡೆಯಬಹುದು.

ಸುಖ, ನೆಮ್ಮದಿ, ಶಾಂತಿ ಮತ್ತು ಸಮೃದ್ಧಿಗಾಗಿ
ಜೀವನದಲ್ಲಿ ಸುಖ, ನೆಮ್ಮದಿ, ಶಾಂತಿ ಮತ್ತು ಸಮೃದ್ಧಿಗಾಗಿ ಹನುಮಾನ್ ಚಾಲೀಸಾವನ್ನು ಪ್ರತಿ ರಾತ್ರಿ ಭಕ್ತಿ ಶ್ರದ್ಧೆಯಿಂದ ಪಠಿಸಿ.



Click it and Unblock the Notifications