Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಇಂದು ಭೂಮಿ ಹುಣ್ಣಿಮೆ: ಆ ಆಚರಣೆಯ ವೈಶಿಷ್ಟ್ಯತೆ ಏನು?
ನಾವು ಆಚರಿಸುವ ಅನೇಕ ಹಬ್ಬಗಳಿಗೆ ಭೂಮಿ ತಾಯಿ ಜೊತೆ ಸಂಬಂಧವಿರುತ್ತದೆ. ಬಹುತೇಕ ಹಬ್ಬಗಳಲ್ಲಿ ಒಂದಲ್ಲಾ ಒಂದು ವಿಧಾನದಲ್ಲಿ ಭೂಮಿಗೆ ಪೂಜೆ ಸಲ್ಲಿಸುತ್ತೇವೆ. ಅದೇ ರೀತಿ ಇಂದು ಅಂದ್ರೆ ಅಕ್ಟೋಬರ್ 20ರಂದು ಮಲ್ನಾಡ್ ಕಡೆ ಭೂಮಿ ಹುಣ್ಣಿಮೆಯನ್ನು ಆಚರಿಸಲಾಗುತ್ತಿದೆ.
ಈ ಹಬ್ಬವನ್ನು ರಾಜರ ಕಾಲದಿಂದಲೂ ಮಾಡುತ್ತಾ ಬಂದಿದ್ದಾರೆ. ಮಲ್ನಾಡ್ನ ಗ್ರಾಮಗಳಲ್ಲಿ ಈ ಹಬ್ಬವನ್ನು ತುಂಬಾ ಸಡಗರದಿಂದ ಆಚರಿಸಲಾಗುವುದು. ಈ ದಿನ ಗರ್ಭಿಣಿ ಮಹಿಳೆಗೆ ಸೀಮಂತ ಶಾಸ್ತ್ರ ಮಾಡುವಂತೆಯೇ ಭೂಮಿ ತಾಯಿಗೆ ಪೂಜೆಯನ್ನು ಸಲ್ಲಿಸಲಾಗುವುದು. ಈ ಹಬ್ಬದ ವೈಶಿಷ್ಟ್ಯವೇನು, ಆಚರಣೆ ಹೇಗೆ ಎಂದು ನೋಡೋಣ ಬನ್ನಿ:

ಭೂ ತಾಯಿಗೆ ಪೂಜೆ
ಗರ್ಭಿಣಿಯರಿಗೆ ಸೀಮಂತ ಮಾಡುವಂತೆಯೇ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಗುವುದು. ಈ ಹಬ್ಬದಲ್ಲಿ ಭೂಮಿ ತಾಯಿಗೆ ಪೂಜೆ ಮಾಡಲು ತಿನಿಸುಗಳು ಹಾಗೂ ಹೊಲದಲ್ಲಿ ಬೆಳೆದ ಬುಟ್ಟಿಯನ್ನು ತುಂಬಿ ತೆಗೆದುಕೊಂಡು ಹೋಗಲಾಗುವುದು. ಈ ಬುಟ್ಟಿಗಳನ್ನು ಮಹಿಳೆಯರು ಕೆಲವು ವಾರಗಳಿಗೆ ಮುಂಚಿತವಾಗಿಯೇ ಸಿದ್ಧಪಡಿಸಿಕೊಂಡಿರುತ್ತಾರೆ.
ಬುಟ್ಟಿಗೆ ಸೆಗಣಿ, ಕೆಮ್ಮಣ್ಣು ಹಚ್ಚಿ ಒಣಗಿಸಲಾಗುವುದು. ಅದರ ಮೇಲೆ ಅಕ್ಕಿ ಹಿಟ್ಟಿನಲ್ಲಿ ಹಸೆ ಚಿತ್ತಾರವನ್ನು ಬಿಡಿಸಲಾಗುವುದು.
ನಂತರ ಹಬ್ಬದ ಹಿಂದಿನ ದಿನವೇ ಬುಟ್ಟಿಗೆ ಹೊಲದಲ್ಲಿ ಬೆಳೆದ ತರಕಾರಿಗಳನ್ನು ತುಂಬಲಾಗುವುದು. ಕೆಲವೊಂದು ಬಗೆಯ ಸಿಹಿ ತಿನಿಸುಗಳನ್ನು ಕೂಡ ತಯಾರಿಸಲಾಗುವುದು.

ತಾಳಿಸರವನ್ನೇ ಬಿಚ್ಚಿ ತೋರಣವಾಗಿ ಕಟ್ಟಿ ಪೂಜೆ
ಅಡುಗೆಯನ್ನು ಬುಟ್ಟಿಯಲ್ಲಿ ತುಂಬಾ ಕುಟುಂಬದ ಸದಸ್ಯರೆಲ್ಲರೂ ಜಮೀನಿಗೆ ಹೋಗಿ, ಮುತ್ತೈದೆಯರು ತಮ್ಮ ತಾಳಿಯನ್ನು ಬಿಚ್ಚಿ ಭತ್ತಕ್ಕೆ ಕಟ್ಟಿ ಪೂಜೆಯನ್ನು ಮಾಡುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ತಾಳಿಯನ್ನು ದೇವರ ಸಮಾನವಾಗಿ ಪೂಜಿಸಲಾಗುತ್ತದೆ. ತುಂಬಾ ಸಂಪ್ರದಾಯಸ್ಥ ಹೆಣ್ಮಕ್ಕಳು ಯಾವುದೇ ಕಾರಣಕ್ಕೆ ಕುತ್ತಿಗೆಯಿಂದ ತಾಳಿಯನ್ನು ಬಿಚ್ಚುವುದಿಲ್ಲ, ಆದರೆ ಈ ಸಂದರ್ಭದಲ್ಲಿ ತಮ್ಮ ತಾಳಿಯಿಂದಲೇ ಭೂ ತಾಯಿಗೆ ಅಲಂಕರಿಸಿ ಪೂಜೆ ಮಾಡುವುದೇ ವಿಶೇಷತೆ.
ಈ ದಿನ ಪೂಜೆ ಮಾಡುವ ಸ್ಥಳವನ್ನು ಸ್ವಚ್ಛಗೊಳಿಸಿ, ಬಾಳೆ ಗಿಡದ ಮಂಟಪ ಮಾಡಿ, ಮಾವಿನೆಲೆಯ ತೋರಣ ಕಟ್ಟಿ ದೇವರಿಗೆ ಪೂಜೆ ಮಾಡಲಾಗುವುದು. ಭೂ ತಾಯಿಗೆ ಬಗೆ-ಬಗೆಯ ತಿಂಡಿಗಳನ್ನು ಅರ್ಪಿಸಿ, ಬಾಗಿನ ನೀಡಿ ನಮ್ಮನ್ನು ಹರಿಸುವಂತೆ ಪ್ರಾರ್ಥಿಸಲಾಗುವುದು. ಹೋಳಿಗೆ, ಸಜ್ಜೆರೊಟ್ಟಿ, ಶೇಂಗಾ ಉಂಡೆ ಮುಂತಾದ ವಿಶೇಷ ಖಾದ್ಯಗಳನ್ನು ಈ ಹಬ್ಬದಲ್ಲಿ ತಯಾರಿಸಲಾಗುವುದು.
ಕಾಗೆ, ಇಲಿಗಳಿಗೆ ಆಹಾರ ನೀಡಲಾಗುವುದು
ಪೈರಿಗೆ ಪೂಜೆ ಸಲ್ಲಿಸಿದ ಬಳಿಕ ಆಹಾರದ ಎಡೆಯನ್ನು ಕಾಗೆಗೆ ನೀಡಲಾಗುವುದು. ಸ್ವರ್ಗಸ್ಥರಾದ ಹಿರಿಯರು ಕಾಗೆಯ ರೂಪದಲ್ಲಿ ಬಂದು ತಿಂದು ನಮ್ಮನ್ನು ಆಶೀರ್ವದಿಸುತ್ತಾರೆ ಎಂಬ ನಂಬಿಕೆ.
ಇಲಿಗೂ ಆಹಾರವನ್ನು ಇಡಲಾಗುವುದು. ಬೆಳೆದ ಬೆಳೆಗಳನ್ನು ಇಲಿಗಳು ನಾಶ ಮಾಡುವುದು,ಈ ದಿನ ಇಲಿಗೂ ಎಡೆ ಇಟ್ಟು ನಮಗೆ ತೊಂದರೆ ಕೊಡಬೇಡಪ್ಪಾ ಎಂದು ಬೇಡಲಾಗುವುದು.

ಮನೆ ಮಂದಿಯೆಲ್ಲಾ ಕುಳಿತು ಹಬ್ಬದ ಅಡುಗೆ ಸವಿಯಲಾಗುವುದು
ಭೂಮಿ ಹುಣ್ಣಿಮೆಯಂದು ಭೂ ತಾಯಿಗೆ ಪೂಜೆ ಸಲ್ಲಿಸಿ ನಂತರ ತಂದ ಹಬ್ಬದ ಅಡುಗೆಯನ್ನು ಮನೆಮಂದಿಯೆಲ್ಲಾ ಕೂತು ಸಂತೋಷದಿಂದ ಸವಿಯಲಾಗುವುದು. ಈ ಆಚರಣೆ ನಿಸರ್ಗಕ್ಕೆ ಹತ್ತಿರವಾಗಿದ್ದು, ಈ ಹಬ್ಬ ನಿಸರ್ಗದಲ್ಲಿ ದೇವರನ್ನು ಕಾಣುವ ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ.



Click it and Unblock the Notifications