Latest Updates
-
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಮದುವೆಯಾಗದ ಸ್ತ್ರೀಯರು ಹನುಮಂತನನ್ನು ಪೂಜಿಸಬಹುದೇ?
ಹನುಮಂತನನ್ನು ವಿಶ್ವದೆಲ್ಲೆಡೆಯಲ್ಲಿ ಪೂಜಿಸಲಾಗುತ್ತದೆ. ಆದರೆ ಮಹಿಳೆಯರು ಅದರಲ್ಲೂ ಮದುವೆಯಾಗದೆ ಇರುವ ಮಹಿಳೆಯರು ಹನುಮಂತನನ್ನು ಪೂಜಿಸುವುದು ಮತ್ತು ಹನುಮಾನ್ ಚಾಲೀಸ್ ಪಠಣ ಮಾಡುವುದು ನಿಷಿದ್ಧವಿದೆ, ಆದರೆ ಪಾಲಿಸುವವರು ತುಂಬಾ ಕಡಿಮೆ....
ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ ಎನ್ನುತ್ತವೆ ಪುರಾಣಗಳು. ಅದೇ ರೀತಿ ಅವರವರ ಇಷ್ಟಕ್ಕೆ ಅನುಸಾರವಾಗಿ ದೇವರನ್ನು ಪೂಜಿಸುತ್ತಾರೆ. ಇನ್ನು ಕೆಲವು ದೇವರು ಆಯಾಯ ಜಾತಿಗೆ ಅನುಗುಣವಾಗಿ ಪೂಜಿಸಲ್ಪಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಶಿವ ಹಾಗೂ ದೇವಿಯ ಭಕ್ತರಿದ್ದರೆ ಉತ್ತರ ಭಾರತದಲ್ಲಿ ವಿಷ್ಣುವಿನ ಭಕ್ತರಿದ್ದಾರೆ. ಇನ್ನು ಕೆಲವು ದೇವರನ್ನು ಬ್ರಹ್ಮಚಾರಿಗಳು ಮತ್ತು ಗಂಡಸರು ಮಾತ್ರ ಪೂಜಿಸಬಹುದು ಎನ್ನುವ ನಿಯಮಿದೆ. ಹನುಮಾನ್ ನಮ್ಮ ನಡುವೆ ಇದ್ದಾನೆಯೇ? ಇಲ್ಲಿದೆ ಪುರಾವೆಗಳು!

ಅಂತಹ ದೇವರಲ್ಲಿ ವಾಯುಪುತ್ರ ಆಜಂನೇಯ. ಹನುಮಂತನನ್ನು ವಿಶ್ವದೆಲ್ಲೆಡೆಯಲ್ಲಿ ಪೂಜಿಸಲಾಗುತ್ತದೆ. ಆದರೆ ಮಹಿಳೆಯರು ಅದರಲ್ಲೂ ಮದುವೆಯಾಗದೆ ಇರುವ ಮಹಿಳೆಯರು ಹನುಮಂತನನ್ನು ಪೂಜಿಸುವುದು ಮತ್ತು ಹನುಮಾನ್ ಚಾಲೀಸ್ ಪಠಣ ಮಾಡುವುದು ನಿಷಿದ್ಧ. ನಿಯಮಗಳು ಏನೇ ಇದ್ದರೂ ಇಂದಿನ ಆಧುನಿಕ ಯುಗದಲ್ಲಿ ಅದನ್ನು ಪಾಲಿಸುವವರು ತುಂಬಾ ಕಡಿಮೆ.
ಇದೇ ಕಾರಣದಿಂದಾಗಿ ಮದುವೆಯಾಗದೆ ಇರುವ ಹುಡುಗಿಯರು ಇಂದಿನ ದಿನಗಳಲ್ಲಿ ಆಂಜನೇಯ ದೇವಾಲಯಗಳಿಗೆ ಹೋಗಿ ಅಲ್ಲಿ ಪಾರ್ಥಿಸುವುದನ್ನು ಕಾಣಬಹುದು. ತುಂಬಾ ಶಕ್ತಿಶಾಲಿ ಹಾಗೂ ಪ್ರಭಾವಶಾಲಿಯೆಂದು ಪರಿಗಣಿಸಲಾಗಿರುವ ಹನುಮಾನ್ ಚಾಲೀಸವನ್ನು ಪಠಣ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕೇ ಎನ್ನುವ ಚರ್ಚೆ ನಡೆಯುತ್ತಲೇ ಇರುತ್ತದೆ. ಹನುಮಂತನನ್ನು ಪೂಜಿಸುವ ಕೆಲವೊಂದು ಸತ್ಯಗಳ ಬಗ್ಗೆ ನಾವಿಲ್ಲಿ ತಿಳಿಸಿಕೊಡಲಿದ್ದೇವೆ. ಶಕ್ತಿ ದೇವತೆ ಹನುಮಂತನನ್ನು ಪೂಜಿಸುವ ವಿಧಿ-ವಿಧಾನ
ಹನುಮಂತನ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನಿಷಿದ್ಧ ಯಾಕೆ?
ಪುರಾಣಗಳ ಪ್ರಕಾರ ಹನುಮಂತ ದೇವರು ಬ್ರಹ್ಮಚಾರಿ. ಮದುವೆಯಾಗದೆ ಇರುವವರು ಮತ್ತು ಜೀವನಪೂರ್ತಿ ಬ್ರಹ್ಮಚಾರಿಗಳಾಗಿ ಉಳಿಯಲು ಬಯಸುವವರು ಹನುಮಂತ ದೇವರನ್ನು ಪೂಜಿಸುತ್ತಾರೆ. ಮಲಗುವ ಮುನ್ನ 'ಹನುಮಾನ್ ಚಾಲೀಸಾ' ಪಠಿಸಲು ಮರೆಯದಿರಿ
ಮಹಿಳೆಯರು ಹನುಮಂತ ದೇವರನ್ನು ಪೂಜಿಸಬಹುದೇ?
ಇದರ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಮದುವೆಯಾಗದೆ ಇರುವ ಮಹಿಳೆಯರು ಹನುಮಂತ ದೇವಾಲಯಕ್ಕೆ ಭೇಟಿ ನೀಡಬಹುದು.
ಆದರೆ ಈ ಹುಡುಗಿಯರು ದೇವಾಲಯದಲ್ಲಿ ಸ್ಥಾಪಿತವಾಗಿರುವ ಮೂರ್ತಿಯನ್ನು ಮುಟ್ಟಬಾರದು. ಹನುಮಂತ ಬಾಲಬ್ರಹ್ಮಚಾರಿಯಾಗಿರುವ ಕಾರಣದಿಂದಾಗಿ ಹುಡುಗಿಯರು ಆತನನ್ನು ಪೂಜಿಸಬಾರದು ಎಂದು ಹೆಚ್ಚಿನವರು ಹೇಳುತ್ತಾರೆ. ಅದೇನೇ ಇದ್ದರೂ ಮಹಿಳೆಯರು ಕೂಡ ಹನುಮಂತನನ್ನು ಪೂಜಿಸುತ್ತಾರೆ ಮತ್ತು ಹನುಮಾನ್ ಚಾಲೀಸನ್ನು ಪಠಿಸುತ್ತಾರೆ. ದೈಹಿಕ ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಹನುಮಾನ್ ಮಂತ್ರ
ಹನುಮಾನ್ ಚಾಲೀಸವನ್ನು ಪಠಿಸುವ ಪ್ರಾಮುಖ್ಯತೆ
ಹನುಮಾನ್ ಚಾಲೀಸವನ್ನು ಲಿಂಗಭೇದವಿಲ್ಲದೆ ಯಾರು ಬೇಕಿದ್ದರೂ ಪಠಿಸಬಹುದು. ರಾಶಿಯಲ್ಲಿ ಸಾಡೇಸಾತಿ ಇರುವ ವ್ಯಕ್ತಿಗಳು ಮಂಗಳವಾರ ಮತ್ತು ಶನಿವಾರ ಹನುಮಾನ್ ಚಾಲೀಸವನ್ನು ಪಠಿಸುವುದರಿಂದ ಅದರಿಂದ ಮುಕ್ತಿಯನ್ನು ಪಡೆಯಬಹುದು.
ಹನುಮಂತನನ್ನು ಮಹಿಳೆಯರು ಪೂಜಿಸಬಹುದೇ ಎನ್ನುವ ನಿಮ್ಮ ಗೊಂದಲಕ್ಕೆ ಪರಿಹಾರ ಸಿಕ್ಕಿದೆ ಎಂದು ನಾವು ಅಂದುಕೊಂಡಿದ್ದೇವೆ. ಲಿಂಗಭೇದ ಮರೆತು ಹನುಮಂತನನ್ನು ಪ್ರತಿಯೊಬ್ಬರೂ ಪೂಜಿಸಬಹುದು. ರಾಮಾಯಣದ ಬಳಿಕ ವಾನರ ಸೇನೆಯ ಕಥೆ ಏನಾಯಿತು?



Click it and Unblock the Notifications




