Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.

ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.

ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.

ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.

ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.

ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.



Click it and Unblock the Notifications