Just In
Don't Miss
- News Neha Hiremath: ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ವಿಎಚ್ಪಿ ಒತ್ತಾಯ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.
ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.
ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.
ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.
ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.
ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.