Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.

ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.

ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.

ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.

ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.

ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.



Click it and Unblock the Notifications











