Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.

ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.

ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.

ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.

ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.

ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.



Click it and Unblock the Notifications