Latest Updates
-
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.

ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.

ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.

ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.

ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.

ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.



Click it and Unblock the Notifications