Just In
- 27 min ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 58 min ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 2 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 2 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.
ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.
ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.
ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.
ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.
ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.