Latest Updates
-
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ
ಕಷ್ಟ ಕಾರ್ಪಣ್ಯ ನಿವಾರಿಸುವ ಶಕ್ತಿ ಈ ಮಂತ್ರದಲ್ಲಿದೆ-ನಿತ್ಯ ಪಠಿಸಿ
ವ್ಯಕ್ತಿಯ ಜಾತಕದಲ್ಲಿ ಸೂರ್ಯನ ಸ್ಥಾನ ಮಹತ್ವವಾದದ್ದು. ಸೂರ್ಯ ಯಾವ ಸ್ಥಾನದಲ್ಲಿ ಇದ್ದಾನೆ? ಎಷ್ಟು ಪರಿಣಾಮಕಾರಿ ಎನ್ನುವುದನ್ನು ಕುಂಡಲಿ ಬಿಚ್ಚಿಡುತ್ತದೆ. ಪುರಾಣದ ಪ್ರಕಾರ ಸೂರ್ಯನು ಕಶ್ಯಪ ಮಹರ್ಷಿ ಮತ್ತು ಅದಿತಿ ದೇವಿಯ ಮಗ ಎಂದು ಹೇಳಲಾಗುತ್ತದೆ. ತಾಯಿ ಅದಿತಿಯ ನಂತರ ಸೂರ್ಯನಿಗೆ ಆದಿತ್ಯ ಎಂದು ಕರೆಯುತ್ತಿದ್ದರು ಎನ್ನಲಾಗುತ್ತದೆ. ನಿತ್ಯವೂ ಸೂರ್ಯನ ಆರಾಧನೆ ಹಾಗೂ ಶ್ಲೋಕಗಳನ್ನು ಪಠಿಸಿದರೆ ಐಶ್ವರ್ಯ, ಗೌರವ, ದೀರ್ಘಾಯುಷ್ಯ ಮತ್ತು ಯಶಸ್ಸನ್ನು ಹೊಂದಬಹುದು.
ಸೂರ್ಯೋದಯದ ಸಮಯದಲ್ಲಿ ಸೂರ್ಯನ ಆರಾಧನೆ ಹಾಗೂ ಜಪ-ತಪಗಳು ನಡೆದರೆ, ಸೂರ್ಯನು ಆಶೀರ್ವದಿಸುತ್ತಾನೆ. ಅವನ ಕೃಪೆಗೆ ಒಳಗಾದರೆ ಜೀವನದಲ್ಲಿ ಸದಾ ಸುಖಿಯಾಗಿರಬಹುದು ಎನ್ನಲಾಗುತ್ತದೆ. ಪ್ರಪಂಚದಲ್ಲಿರುವ ಪ್ರತಿಯೊಬ್ಬರೂ ಶ್ಲೋಕ ಮತ್ತು ಮಂತ್ರವನ್ನು ಪಠಿಸುವ ಅಧಿಕಾರವಿದೆ. ಮಂತ್ರಗಳನ್ನು ಹೇಳುವಾಗ ಶಬ್ದಗಳ ಉಚ್ಚಾರ ಸರಿಯಾಗಿರಬೇಕಷ್ಟೆ. ಪಠಿಸುವ ಮಾರ್ಗ ಸರಿಯಾಗಿದ್ದರೆ, ಮಾನಸಿಕ ಹಾಗೂ ದೈಹಿಕವಾಗಿ ಸಕಾರಾತ್ಮಕ ಶಕ್ತಿಯು ನಮ್ಮನ್ನು ಕಾಪಾಡುವುದು....

ಗಾಯತ್ರಿ ಮಂತ್ರದ ಸ್ಮರಣೆ
ಅಗ್ನಿ ಪುರಾಣದ ಪ್ರಕಾರ, ಸೂರ್ಯೋದಯದ ಸಂದರ್ಭದಲ್ಲಿ ಸೂರ್ಯನಿಗೆ ಗಾಯತ್ರಿ ಮಂತ್ರವನ್ನು ಜಪಿಸುತ್ತಾ, ಅಘ್ರ್ಯ ನೀಡಿದರೆ ಉತ್ತಮ ಪರಿಣಾಮವನ್ನು ಹೊಂದಬಹುದು. ಹೀಗೆ ಮಾಡುವುದರಿಂದ ಜೀವನದಲ್ಲಿ ಉತ್ತಮ ಅದೃಷ್ಟಗಳನ್ನು ಅನುಭವಿಸಬಹುದು.
ಜೀವನದ ಎಲ್ಲಾ ಕಷ್ಟ-ನೋವು ನಿವಾರಿಸುವ- ಗಾಯತ್ರಿ ಮಂತ್ರ
ದುಃಖ ನಿರ್ಮೂಲನೆ
ನಿತ್ಯವೂ ಸೂರ್ಯೋದಯದ ಸಂದರ್ಭದಲ್ಲಿ ಗಾಯತ್ರಿ ಮಂತ್ರದ ಜೊತೆಗೆ ಅಘ್ರ್ಯ ನೀಡಿದರೆ, ಜೀವನದ ಎಲ್ಲಾ ದುಃಖಗಳು ನಿವಾರಣೆಯಾಗುವುದು. ಜೊತೆಗೆ ಮಾನಸಿಕ ಶಾಂತಿ ಹೆಚ್ಚುವುದು.

ಸೂರ್ಯನೇ ಜೀವ ಶಕ್ತಿ
ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ಸೂರ್ಯನೇ ಮಹಾನ್ ಶಕ್ತಿ. ಇವನ ಆರಾಧನೆ ಮತ್ತು ಮಂತ್ರಗಳನ್ನು ಹೇಳುವುದರಿಂದ ಜೀವನದಲ್ಲಿ ಎಲ್ಲಾ ಬಗೆಯ ಗೌರವ ಹಾಗೂ ಸಂಪತ್ತು ಲಭ್ಯವಾಗುವುದು.

ಗಾಯತ್ರಿ ಮಂತ್ರ ನಿಮಗಾಗಿ
ಓಂ
ಭೂರ್ಭುವಸ್ವಃ
ತತ್ಸವಿತುರ್ವರೇಣ್ಯಂ
ಭರ್ಗೋದೇವಸ್ಯ ಧೀಮಹಿ
ಧಿಯೋ ಯೋನಃ ಪ್ರಚೋದಯಾತ್.

ಗಾಯತ್ರಿ ಮಹಾಮ೦ತ್ರದ ಭಾವಾರ್ಥ
ಓಂ ಭೂರ್ಭುವಃಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಜಪ ಮಾಡುವ ವಿಧಾನ: "ಓಂ ಭೂರ್ಭುವಸ್ವಃ ತತ್ಸವಿತುರ್ವರೇಣ್ಯಂ" ಎಂದು ಹೇಳುತ್ತಾ ನಿಧಾನವಾಗಿ ಪ್ರಾಣವಾಯುವನ್ನು ಒಳಗೆಳೆದುಕೊಳ್ಳಬೇಕು. ಆಮೇಲೆ ಪ್ರಾಣವಾಯುವನ್ನು ನಿಧಾನವಾಗಿ ಹೊರಬಿಡುತ್ತಾ "ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್" ಮಂತ್ರ ಜಪಿಸಬೇಕು.



Click it and Unblock the Notifications