Latest Updates
-
Summer Garden: ಬೇಸಿಗೆಯಲ್ಲಿ ಬಾಡದ ಹೂವುಗಳಿವು! ಈ 5 ಹೂಗಳನ್ನು ನೆಡಿದ್ರೆ ಸಾಕು.. ನಿಮ್ಮ ಗಾರ್ಡನ್ ಕಲರ್ಫುಲ್ -
ಸೂರ್ಯ ಬುಧನಿಂದ ಬುಧಾದಿತ್ಯ ಯೋಗ; ಈ ರಾಶಿಯವರ ಬದುಕಲ್ಲಿ ಬೆಳಕು, ಕಷ್ಟಗಳು ಪರಿಹಾರ -
ಯುಗಾದಿ ಹೊಸತೊಡಕು.. ಮಟನ್ ಖರೀದಿಸುವಾಗ ಮೋಸ ಹೋಗಬೇಡಿ! ಫ್ರೆಶ್ ಇದ್ಯಾ? ಅಥವಾ ನಿನ್ನೆಯದ್ದೇ? ಹೀಗೆ ಗುರುತಿಸಿ -
ಒಂದು ಹನಿ ಎಣ್ಣೆ ಕೆಳಗೆ ಬೀಳದಂತೆ ಬಾಟಲಿಗೆ ಹಾಕೋ ಐಡಿಯಾ ಗೊತ್ತಾ? ಈ ಟ್ರಿಕ್ಸ್ ನೀವೆಂದು ಬಳಸಿರಲ್ಲ! -
ಸ್ಟೌವ್ ಬೇಡ, ಎಣ್ಣೆ ಬೇಡ..! 5 ನಿಮಿಷದಲ್ಲಿ ಸಿದ್ಧವಾಗುತ್ತೆ ಈ ಇಡಿಚ್ಚ ಮೊಸರು ಚಟ್ನಿ! ಒಮ್ಮೆ ಟ್ರೈ ಮಾಡಿ -
ಬಾಯಿ ಚಪ್ಪರಿಸಿ ಸವಿಯುವ ಮಾವಿನಮಿಡಿ ಉಪ್ಪಿನಕಾಯಿ: ಮನೆಯಲ್ಲೇ ಮಾಡುವ ವಿಧಾನ! -
Eid-ul-Fitr 2026: ಮಾ.20 ಅಥವಾ ಮಾ.21? ಭಾರತದಲ್ಲಿ ರಂಜಾನ್ ಯಾವ ದಿನ? ರಜೆ ಯಾವಾಗ? ತಿಳಿಯಿರಿ -
ಗುರು-ಶುಕ್ರನಿಂದ ಗಜಕೇಸರಿ ರಾಜಯೋಗ: ಯುಗಾದಿ ಬಳಿಕ ಈ ರಾಶಿಯವರ ಜೀವನದಲ್ಲಿ ಅದೃಷ್ಟ! -
ಶನಿ ಕೃಪೆ ಶುರು.. ಹಣ, ಯಶಸ್ಸು, ಶುಭ ಸುದ್ದಿ! ಯುಗಾದಿ ಬಳಿಕ ಈ 3 ರಾಶಿಗಳಿಗೆ ಭಾರೀ ಅದೃಷ್ಟ -
ಯುಗಾದಿಗೆ ಸ್ಪೆಷಲ್ ಹೊಸ ರೀತಿಯ ಕ್ಯಾರೆಟ್ ಒಬ್ಬಟ್ಟು: ಬಾಯಲ್ಲಿ ನೀರು ತರಿಸುವ ಸಿಹಿ
ಕಷ್ಟ ಕಾರ್ಪಣ್ಯ ನಿವಾರಿಸುವ ಶಕ್ತಿ ಈ ಮಂತ್ರದಲ್ಲಿದೆ-ನಿತ್ಯ ಪಠಿಸಿ
ವ್ಯಕ್ತಿಯ ಜಾತಕದಲ್ಲಿ ಸೂರ್ಯನ ಸ್ಥಾನ ಮಹತ್ವವಾದದ್ದು. ಸೂರ್ಯ ಯಾವ ಸ್ಥಾನದಲ್ಲಿ ಇದ್ದಾನೆ? ಎಷ್ಟು ಪರಿಣಾಮಕಾರಿ ಎನ್ನುವುದನ್ನು ಕುಂಡಲಿ ಬಿಚ್ಚಿಡುತ್ತದೆ. ಪುರಾಣದ ಪ್ರಕಾರ ಸೂರ್ಯನು ಕಶ್ಯಪ ಮಹರ್ಷಿ ಮತ್ತು ಅದಿತಿ ದೇವಿಯ ಮಗ ಎಂದು ಹೇಳಲಾಗುತ್ತದೆ. ತಾಯಿ ಅದಿತಿಯ ನಂತರ ಸೂರ್ಯನಿಗೆ ಆದಿತ್ಯ ಎಂದು ಕರೆಯುತ್ತಿದ್ದರು ಎನ್ನಲಾಗುತ್ತದೆ. ನಿತ್ಯವೂ ಸೂರ್ಯನ ಆರಾಧನೆ ಹಾಗೂ ಶ್ಲೋಕಗಳನ್ನು ಪಠಿಸಿದರೆ ಐಶ್ವರ್ಯ, ಗೌರವ, ದೀರ್ಘಾಯುಷ್ಯ ಮತ್ತು ಯಶಸ್ಸನ್ನು ಹೊಂದಬಹುದು.
ಸೂರ್ಯೋದಯದ ಸಮಯದಲ್ಲಿ ಸೂರ್ಯನ ಆರಾಧನೆ ಹಾಗೂ ಜಪ-ತಪಗಳು ನಡೆದರೆ, ಸೂರ್ಯನು ಆಶೀರ್ವದಿಸುತ್ತಾನೆ. ಅವನ ಕೃಪೆಗೆ ಒಳಗಾದರೆ ಜೀವನದಲ್ಲಿ ಸದಾ ಸುಖಿಯಾಗಿರಬಹುದು ಎನ್ನಲಾಗುತ್ತದೆ. ಪ್ರಪಂಚದಲ್ಲಿರುವ ಪ್ರತಿಯೊಬ್ಬರೂ ಶ್ಲೋಕ ಮತ್ತು ಮಂತ್ರವನ್ನು ಪಠಿಸುವ ಅಧಿಕಾರವಿದೆ. ಮಂತ್ರಗಳನ್ನು ಹೇಳುವಾಗ ಶಬ್ದಗಳ ಉಚ್ಚಾರ ಸರಿಯಾಗಿರಬೇಕಷ್ಟೆ. ಪಠಿಸುವ ಮಾರ್ಗ ಸರಿಯಾಗಿದ್ದರೆ, ಮಾನಸಿಕ ಹಾಗೂ ದೈಹಿಕವಾಗಿ ಸಕಾರಾತ್ಮಕ ಶಕ್ತಿಯು ನಮ್ಮನ್ನು ಕಾಪಾಡುವುದು....

ಗಾಯತ್ರಿ ಮಂತ್ರದ ಸ್ಮರಣೆ
ಅಗ್ನಿ ಪುರಾಣದ ಪ್ರಕಾರ, ಸೂರ್ಯೋದಯದ ಸಂದರ್ಭದಲ್ಲಿ ಸೂರ್ಯನಿಗೆ ಗಾಯತ್ರಿ ಮಂತ್ರವನ್ನು ಜಪಿಸುತ್ತಾ, ಅಘ್ರ್ಯ ನೀಡಿದರೆ ಉತ್ತಮ ಪರಿಣಾಮವನ್ನು ಹೊಂದಬಹುದು. ಹೀಗೆ ಮಾಡುವುದರಿಂದ ಜೀವನದಲ್ಲಿ ಉತ್ತಮ ಅದೃಷ್ಟಗಳನ್ನು ಅನುಭವಿಸಬಹುದು.
ಜೀವನದ ಎಲ್ಲಾ ಕಷ್ಟ-ನೋವು ನಿವಾರಿಸುವ- ಗಾಯತ್ರಿ ಮಂತ್ರ
ದುಃಖ ನಿರ್ಮೂಲನೆ
ನಿತ್ಯವೂ ಸೂರ್ಯೋದಯದ ಸಂದರ್ಭದಲ್ಲಿ ಗಾಯತ್ರಿ ಮಂತ್ರದ ಜೊತೆಗೆ ಅಘ್ರ್ಯ ನೀಡಿದರೆ, ಜೀವನದ ಎಲ್ಲಾ ದುಃಖಗಳು ನಿವಾರಣೆಯಾಗುವುದು. ಜೊತೆಗೆ ಮಾನಸಿಕ ಶಾಂತಿ ಹೆಚ್ಚುವುದು.

ಸೂರ್ಯನೇ ಜೀವ ಶಕ್ತಿ
ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ಸೂರ್ಯನೇ ಮಹಾನ್ ಶಕ್ತಿ. ಇವನ ಆರಾಧನೆ ಮತ್ತು ಮಂತ್ರಗಳನ್ನು ಹೇಳುವುದರಿಂದ ಜೀವನದಲ್ಲಿ ಎಲ್ಲಾ ಬಗೆಯ ಗೌರವ ಹಾಗೂ ಸಂಪತ್ತು ಲಭ್ಯವಾಗುವುದು.

ಗಾಯತ್ರಿ ಮಂತ್ರ ನಿಮಗಾಗಿ
ಓಂ
ಭೂರ್ಭುವಸ್ವಃ
ತತ್ಸವಿತುರ್ವರೇಣ್ಯಂ
ಭರ್ಗೋದೇವಸ್ಯ ಧೀಮಹಿ
ಧಿಯೋ ಯೋನಃ ಪ್ರಚೋದಯಾತ್.

ಗಾಯತ್ರಿ ಮಹಾಮ೦ತ್ರದ ಭಾವಾರ್ಥ
ಓಂ ಭೂರ್ಭುವಃಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಜಪ ಮಾಡುವ ವಿಧಾನ: "ಓಂ ಭೂರ್ಭುವಸ್ವಃ ತತ್ಸವಿತುರ್ವರೇಣ್ಯಂ" ಎಂದು ಹೇಳುತ್ತಾ ನಿಧಾನವಾಗಿ ಪ್ರಾಣವಾಯುವನ್ನು ಒಳಗೆಳೆದುಕೊಳ್ಳಬೇಕು. ಆಮೇಲೆ ಪ್ರಾಣವಾಯುವನ್ನು ನಿಧಾನವಾಗಿ ಹೊರಬಿಡುತ್ತಾ "ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್" ಮಂತ್ರ ಜಪಿಸಬೇಕು.



Click it and Unblock the Notifications











