Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಕಷ್ಟ ಕಾರ್ಪಣ್ಯ ನಿವಾರಿಸುವ ಶಕ್ತಿ ಈ ಮಂತ್ರದಲ್ಲಿದೆ-ನಿತ್ಯ ಪಠಿಸಿ
ವ್ಯಕ್ತಿಯ ಜಾತಕದಲ್ಲಿ ಸೂರ್ಯನ ಸ್ಥಾನ ಮಹತ್ವವಾದದ್ದು. ಸೂರ್ಯ ಯಾವ ಸ್ಥಾನದಲ್ಲಿ ಇದ್ದಾನೆ? ಎಷ್ಟು ಪರಿಣಾಮಕಾರಿ ಎನ್ನುವುದನ್ನು ಕುಂಡಲಿ ಬಿಚ್ಚಿಡುತ್ತದೆ. ಪುರಾಣದ ಪ್ರಕಾರ ಸೂರ್ಯನು ಕಶ್ಯಪ ಮಹರ್ಷಿ ಮತ್ತು ಅದಿತಿ ದೇವಿಯ ಮಗ ಎಂದು ಹೇಳಲಾಗುತ್ತದೆ. ತಾಯಿ ಅದಿತಿಯ ನಂತರ ಸೂರ್ಯನಿಗೆ ಆದಿತ್ಯ ಎಂದು ಕರೆಯುತ್ತಿದ್ದರು ಎನ್ನಲಾಗುತ್ತದೆ. ನಿತ್ಯವೂ ಸೂರ್ಯನ ಆರಾಧನೆ ಹಾಗೂ ಶ್ಲೋಕಗಳನ್ನು ಪಠಿಸಿದರೆ ಐಶ್ವರ್ಯ, ಗೌರವ, ದೀರ್ಘಾಯುಷ್ಯ ಮತ್ತು ಯಶಸ್ಸನ್ನು ಹೊಂದಬಹುದು.
ಸೂರ್ಯೋದಯದ ಸಮಯದಲ್ಲಿ ಸೂರ್ಯನ ಆರಾಧನೆ ಹಾಗೂ ಜಪ-ತಪಗಳು ನಡೆದರೆ, ಸೂರ್ಯನು ಆಶೀರ್ವದಿಸುತ್ತಾನೆ. ಅವನ ಕೃಪೆಗೆ ಒಳಗಾದರೆ ಜೀವನದಲ್ಲಿ ಸದಾ ಸುಖಿಯಾಗಿರಬಹುದು ಎನ್ನಲಾಗುತ್ತದೆ. ಪ್ರಪಂಚದಲ್ಲಿರುವ ಪ್ರತಿಯೊಬ್ಬರೂ ಶ್ಲೋಕ ಮತ್ತು ಮಂತ್ರವನ್ನು ಪಠಿಸುವ ಅಧಿಕಾರವಿದೆ. ಮಂತ್ರಗಳನ್ನು ಹೇಳುವಾಗ ಶಬ್ದಗಳ ಉಚ್ಚಾರ ಸರಿಯಾಗಿರಬೇಕಷ್ಟೆ. ಪಠಿಸುವ ಮಾರ್ಗ ಸರಿಯಾಗಿದ್ದರೆ, ಮಾನಸಿಕ ಹಾಗೂ ದೈಹಿಕವಾಗಿ ಸಕಾರಾತ್ಮಕ ಶಕ್ತಿಯು ನಮ್ಮನ್ನು ಕಾಪಾಡುವುದು....

ಗಾಯತ್ರಿ ಮಂತ್ರದ ಸ್ಮರಣೆ
ಅಗ್ನಿ ಪುರಾಣದ ಪ್ರಕಾರ, ಸೂರ್ಯೋದಯದ ಸಂದರ್ಭದಲ್ಲಿ ಸೂರ್ಯನಿಗೆ ಗಾಯತ್ರಿ ಮಂತ್ರವನ್ನು ಜಪಿಸುತ್ತಾ, ಅಘ್ರ್ಯ ನೀಡಿದರೆ ಉತ್ತಮ ಪರಿಣಾಮವನ್ನು ಹೊಂದಬಹುದು. ಹೀಗೆ ಮಾಡುವುದರಿಂದ ಜೀವನದಲ್ಲಿ ಉತ್ತಮ ಅದೃಷ್ಟಗಳನ್ನು ಅನುಭವಿಸಬಹುದು.
ಜೀವನದ ಎಲ್ಲಾ ಕಷ್ಟ-ನೋವು ನಿವಾರಿಸುವ- ಗಾಯತ್ರಿ ಮಂತ್ರ
ದುಃಖ ನಿರ್ಮೂಲನೆ
ನಿತ್ಯವೂ ಸೂರ್ಯೋದಯದ ಸಂದರ್ಭದಲ್ಲಿ ಗಾಯತ್ರಿ ಮಂತ್ರದ ಜೊತೆಗೆ ಅಘ್ರ್ಯ ನೀಡಿದರೆ, ಜೀವನದ ಎಲ್ಲಾ ದುಃಖಗಳು ನಿವಾರಣೆಯಾಗುವುದು. ಜೊತೆಗೆ ಮಾನಸಿಕ ಶಾಂತಿ ಹೆಚ್ಚುವುದು.

ಸೂರ್ಯನೇ ಜೀವ ಶಕ್ತಿ
ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ಸೂರ್ಯನೇ ಮಹಾನ್ ಶಕ್ತಿ. ಇವನ ಆರಾಧನೆ ಮತ್ತು ಮಂತ್ರಗಳನ್ನು ಹೇಳುವುದರಿಂದ ಜೀವನದಲ್ಲಿ ಎಲ್ಲಾ ಬಗೆಯ ಗೌರವ ಹಾಗೂ ಸಂಪತ್ತು ಲಭ್ಯವಾಗುವುದು.

ಗಾಯತ್ರಿ ಮಂತ್ರ ನಿಮಗಾಗಿ
ಓಂ
ಭೂರ್ಭುವಸ್ವಃ
ತತ್ಸವಿತುರ್ವರೇಣ್ಯಂ
ಭರ್ಗೋದೇವಸ್ಯ ಧೀಮಹಿ
ಧಿಯೋ ಯೋನಃ ಪ್ರಚೋದಯಾತ್.

ಗಾಯತ್ರಿ ಮಹಾಮ೦ತ್ರದ ಭಾವಾರ್ಥ
ಓಂ ಭೂರ್ಭುವಃಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಜಪ ಮಾಡುವ ವಿಧಾನ: "ಓಂ ಭೂರ್ಭುವಸ್ವಃ ತತ್ಸವಿತುರ್ವರೇಣ್ಯಂ" ಎಂದು ಹೇಳುತ್ತಾ ನಿಧಾನವಾಗಿ ಪ್ರಾಣವಾಯುವನ್ನು ಒಳಗೆಳೆದುಕೊಳ್ಳಬೇಕು. ಆಮೇಲೆ ಪ್ರಾಣವಾಯುವನ್ನು ನಿಧಾನವಾಗಿ ಹೊರಬಿಡುತ್ತಾ "ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್" ಮಂತ್ರ ಜಪಿಸಬೇಕು.



Click it and Unblock the Notifications
