Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಛತ್ ಪೂಜೆ: ಕಾರ್ತಿಕ ಮಾಸದ ಈ ನಾಲ್ಕು ದಿನಗಳಲ್ಲಿ ಇವುಗಳನ್ನು ಮಾಡಲೇಬೇಡಿ
ದೀಪಾವಳಿ ಹಬ್ಬದ ಸಡಗರದ ಬಳಿಕ ಉತ್ತರ ಭಾರತದ ಕಡೆ ಅದರಲ್ಲೂ ಬಿಹಾರ, ಜಾರ್ಝಂಡ್ ಹಾಗೂ ಉತ್ತರ ಪ್ರದೇಶದ ಕಡೆ ಛತ್ ಪೂಜೆ ಮಾಡಲಾಗುವುದು. ನಾಲ್ಕು ದಿನಗಳ ಆಚರಿಸುವ ಈ ಪೂಜೆಯಲ್ಲಿ ಸೂರ್ಯನನ್ನು ಪೂಜಿಸಲಾಗುವುದು. ಅದನ್ನು ಸೂರ್ಯ ಷಷ್ಠಿ ಎಂದು ಕರೆಯಲಾಗುವುದು.

ಈ ದಿನಗಳಲ್ಲಿ ಮಹಿಳೆಯರು ಉಪವಾಸವಿದ್ದು ಯಮುನಾ ಅಥವಾ ಇತ ಪುಣ್ಯ ನದಿಯಲ್ಲಿ ಮೊಣಕಾಲಿನವರೆಗೆ ನೀರಿನಲ್ಲಿ ನಿಂತು ಸೂರ್ಯನಿಗೆ ಆರ್ಘ್ಯ ಸಲ್ಲಿಸಿನ ನಮಸ್ಕರಿಸುತ್ತಾರೆ.
ಛತ್ ಪೂಜೆ ಕಾರ್ತಿಕ ಮಾಸದ ಚತುರ್ಥಿಯಂದು ಪ್ರಾರಂಭವಾಗಿ ಕಾರ್ತಿಕ ಶಕ್ಲ ಸಪ್ತಮಿಗೆ ಮುಕ್ತಾಯವಾಗುತ್ತದೆ. ಅಂದರೆ ಛತ್ ಪೂಜೆ ಅಕ್ಟೋಬರ್ 28ಕ್ಕೆ ಪ್ರಾರಂಭವಾಗಿ ಅಕ್ಟೋಬರ್ 31ಕ್ಕೆ ಮುಗಿಯಲಿದೆ.

ಛತ್ ಪೂಜೆಯ ಇತಿಹಾಸ ಮತ್ತು ಮಹತ್ವ
ಛತ್ ಪೂಜೆಯನ್ನು ವೇದಗಳ ಕಾಲದಿಂದಲೂ ಆಚರಿಸಲಾಗುತ್ತಿದೆ. ಋಷಿ ಮುನಿಗಳು ಈ ಛತ್ ಪೂಜೆಯನ್ನು ಆಚರಿಸುತ್ತಿದ್ದರು ಎಂದು ಹೇಳಲಾಗುವುದು. ಈ ದಿನಗಳಲ್ಲಿ ಉಪವಾಸವಿದ್ದು ಸೂರ್ಯನಿಗೆ ಪೂಜೆ ಮಾಡಿ, ಮುಂಜಾನೆ ಬಿಸಿಲಿಗೆ ದೇಹವನ್ನು ಒಡ್ಡಿಕೊಂಡರೆ ಆರೋಗ್ಯಕ್ಕೂ ಒಳ್ಳೆಯದು.
ಛತ್ ಪೂಜೆಯನ್ನು ಪಾಲಿಸುವವರು ಕೆಲವೊಂದು ನಿಯಮಗಳನ್ನು ಅನುಸರಿಸಬೇಕು, ಅವುಗಳೇನು ಎಂದು ನೋಡೋಣ ಬನ್ನಿ:

ಛತ್ ಪೂಜೆಯಲ್ಲಿ ಏನು ಮಾಡಬೇಕು?
* ಈ ನಾಲ್ಕು ದಿನಗಳಲ್ಲಿ ಸೂರ್ಯೋದಕ್ಕೆ ಮುನ್ನ ಎದ್ದು ಸ್ನಾ ನ ಮಾಡಬೇಕು.
* ನಂತರ ಸೂರ್ಯನಿಗೆ ಆರ್ಘ್ಯ ಸಲ್ಲಿಸಿ ದೊಡ್ಡವರಿಂ ಆಶೀರ್ವಾದ ಪಡೆಯಲಾಗುವುದು.
* ನಂತರ ಭೋಗ್ (ಪ್ರಸಾದ) ಮಾಡಿ ಮನೆಮಂದಿಗೆಲ್ಲಾ ಹಂಚಲಾಗುವುದು.
* ಸೂರ್ಯನಿಗೆ ಪೂಜೆ ಮಾಡುವಾಗ ಹಾಲು ಮತ್ತು ನೀರು ಅರ್ಪಿಸಲಾಗುವುದು.
* ಉಪವಾಸ ಇರುವವರು ಶರಬತ್ ಹಾಗೂ ಭೋಗ್ ಸೇವಿಸಬಹುದು.

ಛತ್ ಪೂಜೆಯ ದಿನಗಳಲ್ಲಿ ಏನು ಮಾಡಬಾರದು?
* ದೇವರಿಗೆ ಅರ್ಪಿಸುವ ಮುನ್ನ ಪ್ರಸಾದವನ್ನು ಸೇವಿಸಬಾರದು.
* ಮಡಿಯಿಲ್ಲದೆ ಪೂಜೆಯ ಯಾವುದೇ ವಸ್ತುಗಳನ್ನು ಮುಟ್ಟಬಾರದು.
* ಈ ದಿನಗಳಲ್ಲಿ ಮಾಂಸಾಹಾರ ಸೇವಿಸಬಾರದು. ಮದ್ಯಪಾನ ಮಾಡಬಾರದು.
* ಪ್ರಸಾದ ಮಾಡುವಾಗ ಉಪ್ಪು ಬಳಸಬಾರದು
* ಹರಿದ ಅಥವಾ ಹಳೆಯ ಬಿದಿರಿನ ಬುಟ್ಟಿಗಳನ್ನು ಬಳಸಬಾರದು
* ಕೆಟ್ಟ ಪದಗಳನ್ನು ಬಳಸಬಾರದು
* ಈರುಳ್ಳಿ, ಬೆಳ್ಳುಳ್ಳಿ ಬಳಸಬಾರದು.



Click it and Unblock the Notifications