Latest Updates
-
ರಾಖಿ ಹಬ್ಬ 2026: ಆಗಸ್ಟ್ 28ರಂದು ರಕ್ಷಾಬಂಧನ ಆಚರಣೆ; ಶುಭ ಮುಹೂರ್ತ ಮತ್ತು ಭದ್ರಾ ಕಾಲದ ಸಂಪೂರ್ಣ ಮಾಹಿತಿ ಇಲ್ಲಿದೆ -
ಬೆಂಗಳೂರು ಮಳೆ: ಮನೆಯಲ್ಲೇ ಮಾಡಿ 15 ನಿಮಿಷದ ನೋ-ಜಂಪ್ ವರ್ಕೌಟ್, ಫಿಟ್ ಆಗಿರಿ! -
ಮಳೆಗಾಲದ ಪ್ರಯಾಣ: ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ನಡೆಯಲು 7 ನಿಮಿಷದ ಸರಳ ವ್ಯಾಯಾಮಗಳು -
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್!
ಮನುಷ್ಯನ ಮುಖ ಹೋಲುವ ಕರು! ಇದು ವಿಷ್ಣುವಿನ ಅವತಾರವಂತೆ!!
ನಮ್ಮ ಪೂರ್ವಜರು ಅನೇಕ ರೀತಿಯ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದಾರೆ. ಕೆಲವು ಅರ್ಥಬದ್ಧವಾಗಿದ್ದರೆ. ಇನ್ನೂ ಕೆಲವು ತರ್ಕಬದ್ಧವಾದುದಲ್ಲ. ಅದೇನೇ ಇರಲಿ, ಪ್ರಪಂಚ ಇಷ್ಟು ವರ್ಷ ಇದೇ ಕ್ರಮದಲ್ಲಿ ನಡೆದುಕೊಂಡು ಬಂದಿದೆ. ಇದು ಇಲ್ಲಿಗೆ ನಿಲ್ಲುವುದು ಅಲ್ಲ. ಹೀಗೆ ಮುಂದುವರಿಯುತ್ತಲೇ ಇರುತ್ತದೆ. ಹಾಗಂತ ನಮ್ಮ ಸುತ್ತಲೂ ದೇವರಿದ್ದಾನೆ ಎನ್ನುವ ವಿಚಾರವನ್ನು ಮರೆ ಮಾಚುವಂತಿಲ್ಲ. ಕೆಲವರು ಹೌದು ಎನ್ನಬಹುದು, ಇನ್ನು ಕೆಲವರು ಇಲ್ಲ ಎನ್ನಬಹುದು.
ನಮ್ಮ ಭಾವನೆಗೆ ಯಾವುದು ದೈವ ಶಕ್ತಿ ಎನಿಸುತ್ತದೆಯೋ ಅದನ್ನು ಪೂಜಿಸುವುದು ನಮ್ಮ ಸಂಪ್ರದಾಯ/ಪದ್ಧತಿ. ಇಂತಹ ದೈವ ಶಕ್ತಿಯ ಪ್ರತಿರೂಪವಾದ ಒಂದು ವಿಶೇಷ ಸಂಗತಿ ಇಲ್ಲಿದೆ. ಹೌದು, ಇಲ್ಲೊಂದು ಹಸು ಮನುಷ್ಯನ ಮುಖ ಹೊಂದಿರುವ ಕರುವಿಗೆ ಜನ್ಮ ನೀಡಿದೆ. ಆದರೆ ಜನ್ಮ ಪಡೆದ ಸ್ವಲ್ಪ ಸಮಯದಲ್ಲೇ ಕರು ಅಸುನೀಗಿದೆ. ಇದನ್ನು ಜನರು ವಿಷ್ಣುವಿನ ಪ್ರತಿರೂಪ ಎಂದು ಪೂಜಿಸುತ್ತಿದ್ದಾರೆ. ಈ ಒಂದು ಅಪರೂಪದ ಘಟನೆ ನಡೆದಿದ್ದು ಎಲ್ಲಿ? ಎನ್ನುವ ಕುತೂಹಲದ ವಿಚಾರದ ವಿವರಣೆ ಇಲ್ಲಿದೆ...

ಭಾರತದಲ್ಲೇ ನಡೆದಿದ್ದು
ಭಾರತದ ಉತ್ತರ ಭಾಗದಲ್ಲಿ ಬರುವ "ಉತ್ತರ ಪ್ರದೇಶದ ಮುಜಫ್ಫರ್ ನಗರದಲ್ಲಿ'' ಜನಿಸಿದ ಕರು ಇದು.

ಕರುವಿನ ದೇಹದ ಆಕಾರ
ಈ ಕರುವಿನ ಮುಖದ ಕಣ್ಣು, ಮೂಗು ಮತ್ತು ಕಿವಿಗಳು ಮನುಷ್ಯನ ಮುಖಲಕ್ಷಣ ಹಾಗೂ ದೇಹದ ಕೆಳಭಾಗವು ಹಸುವಿನ ಲಕ್ಷಣಗಳನ್ನು ಹೊಂದಿದೆ.

ಜನರ ನಂಬಿಕೆ
ವಿಭಿನ್ನ ಬಗೆಯ ದೇಹದಾಕೃತಿ ಹೊಂದಿರುವ ಈ ಕರುವನ್ನು ಸಾಕ್ಷಾತ್ ದೇವರೆಂದು ಜನರು ನಂಬಿದ್ದಾರೆ. ಈ ಕರುವಿನ ದೇಹಕ್ಕೆ ಹೂವಿನ ಮಾಲೆಯನ್ನು ಹಾಕಿ, ಕೈಮುಗಿರುವುದರ ಮೂಲಕ ತಮ್ಮ ನಂಬಿಕೆಯನ್ನು ವ್ಯಕ್ತ ಪಡಿಸಿದ್ದಾರೆ.

ದೇವಸ್ಥಾನದ ನಿರ್ಮಾಣ
ಸ್ಥಳೀಯರು ಇದನ್ನು ವಿಷ್ಣುವಿನ 24ನೇ ಅವತಾರವೆಂದು, ಒಂದು ದೇವಸ್ಥಾನದ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ಕರು ಅಸುನೀಗಿದ ನಂತರ ಗಾಜಿನ ಪೆಟ್ಟಿಗೆಯೊಂದರಲ್ಲಿ ಇಟ್ಟು, ದರ್ಶನಕ್ಕೆ ಅನುವುಮಾಡಿಕೊಟ್ಟಿದ್ದಾರೆ.

ವೈದ್ಯರ ಪ್ರಕಾರ
ಇದೊಂದು ಅಂಗರಚನಾ ಅಸಂಗತತೆಯ ವಿಷಯ. ಒಂದು ಜೀನ್ ಸರಿಯಾಗಿ ಅಭಿವೃದ್ಧಿಯಾಗದಿದ್ದರೆ ಅಥವಾ ದೋಷದಿಂದ ಕೂಡಿದ್ದರೆ, ಅನೇಕ ರಚನಾತ್ಮಕ ವಿರೂಪ ಉಂಟಾಗುವುದು. ಈ ಹಿನ್ನೆಲೆಯಲ್ಲಿಯೇ ಈ ಬಗೆಯ ವೈಪರೀತ್ಯ ಕಾಣಿಸಿಕೊಳ್ಳುವುದು ಎಂದು ವೈದ್ಯರು ಅಭಿಪ್ರಾಯಿಸಿದ್ದಾರೆ.

ಭಾರತದಲ್ಲಿ ಮಾತ್ರ ಸಂಭವಿಸುವುದು
ಭಾರತ ವಿಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುತ್ತಿದೆಯಾದರೂ ಅನೇಕ ಮೂಡನಂಬಿಕೆಯ ವಿಚಾರಗಳು ಇಲ್ಲಿಯೇ ಇವೆ. ಇದು ಸಹ ನಿಮ್ಮ ನಂಬಿಕೆಗೆ ಬಿಟ್ಟಿದ್ದು...



Click it and Unblock the Notifications