Just In
- 37 min ago ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- 1 hr ago 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- 3 hrs ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 12 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
Don't Miss
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಸರಾ 2023: ವಿಜಯದಶಮಿಯಂದು ಇವುಗಳನ್ನು ನೋಡಿದರೆ ಅದೃಷ್ಟ
ಅಕ್ಟೋಬರ್ 24ರಂದು ವಿಜಯದಶಮಿಯನ್ನು ಸಡಗರದಿಂದ ಆಚರಿಸಲಾಗುತ್ತಿದೆ. ದುಷ್ಟಶಕ್ತಿಯ ವಿರುದ್ಧ ಸಾರಿದ ಜಯದ ಆಚರಣೆಯೇ ವಿಜಯದಶಮಿ. ದುರ್ಗಾ ದೇವಿ ಮಹಿಷಾಸುರ ಎಂಬ ಅಸುರನನ್ನು ಹತ್ಯೆ ಮಾಡಿದ ದಿನವೇ ವಿಜಯದಶಮಿ. ಪೌರಾಣಿಕ ಕತೆಯ ಪ್ರಕಾರ ರಾಮ ರಾವಣನನ್ನು ಕೊಂದ ದಿನವನ್ನು ವಿಜಯದಶಮಿಯೆಂದು ಆಚರಿಸಲಾಗುವುದು.
ವಿಜಯದಶಮಿಯಂದು ಕೆಲವು ವಸ್ತುಗಳನ್ನು ನೋಡುವುದರಿಂದ ಅಥವಾ ಕೆಲ ಕಾರ್ಯ ಮಾಡುವುದರಿಂದ ಅದೃಷ್ಟ ಒಲಿಯಲಿದೆ ಎಂದು ನಂಬಲಾಗುವುದು. ಅವುಗಳೇನು ಎಂದು ನೋಡೋಣ ಬನ್ನಿ:
ನೀರಿನಲ್ಲಿ ಮೀನು ನೋಡಿದರೆ
ವಿಜಯದಶಮಿಯಂದು ನೀರಿನಲ್ಲಿ ಮೀನು ನೋಡಿದರೆ ಶುಭವೆಂದು ಪರಿಗಣಿಸಲಾಗಿದೆ. ಇದರಿಂದ ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರಾಗುವುದು ಎಂಬ ನಂಬಿಕೆ ಇದೆ.
ನೀಲಕಂಠ ಪಕ್ಷಿಯನ್ನು ನೋಡುವುದು
ದಸರಾ ಹಬ್ಬದಂದು ನೀಲಕಂಠ ಪಕ್ಷಿಯನ್ನು ನೋಡಿದರೆ ತುಂಬಾನೇ ಶುಭ ಎಂದು ಪರಿಗಣಿಸಲಾಗಿದೆ. ನಂಬಿಕೆಗಳ ಪ್ರಕಾರ ಇದನ್ನು ನೋಡಿದವರ ಅದೃಷ್ಟ ಹೆಚ್ಚುವುದು ಅಲ್ಲದೆ ಜೀವನದಲ್ಲಿ ಏಳಿಗೆ ಉಂಟಾಗುವುದು.
ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗುವುದು
ದಸರಾ ಹಬ್ಬದಂದು ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆಯುವುದರಿಂದ ಶುಭ ಉಂಟಾಗುವುದು. ಈ ದಿನ ರಾಮ ಹಾಗೂ ಶಿವನ ಆರಾಧನೆ ಮಾಡಬೇಕು.
ಹನುಮಂತನಿಗೆ ಪಾನ್ ಇಡುವುದು
ದಸರಾ ಹಬ್ಬದಂದು ರಾಮನ ಮಾತ್ರವಲ್ಲ ರಾಮನ ಭಕ್ತ ಹನುಮಂತನನ್ನು ಕೂಡ ಪೂಜಿಸಬೇಕು. ಹನುಮಂತನಿಗೆ ಪಾನ್ ಅರ್ಪಿಸುವುದರಿಂದ ಶುಭ ಉಂಟಾಗುವುದು. ಪಾನ್ ಪ್ರೀತಿ ಹಾಗೂ ಗೌರವ, ವಿಜಯದ ಸಂಕೇತವಾಗಿದೆ.