Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ದಸರಾ 2023: ವಿಜಯದಶಮಿಯಂದು ಇವುಗಳನ್ನು ನೋಡಿದರೆ ಅದೃಷ್ಟ
ಅಕ್ಟೋಬರ್ 24ರಂದು ವಿಜಯದಶಮಿಯನ್ನು ಸಡಗರದಿಂದ ಆಚರಿಸಲಾಗುತ್ತಿದೆ. ದುಷ್ಟಶಕ್ತಿಯ ವಿರುದ್ಧ ಸಾರಿದ ಜಯದ ಆಚರಣೆಯೇ ವಿಜಯದಶಮಿ. ದುರ್ಗಾ ದೇವಿ ಮಹಿಷಾಸುರ ಎಂಬ ಅಸುರನನ್ನು ಹತ್ಯೆ ಮಾಡಿದ ದಿನವೇ ವಿಜಯದಶಮಿ. ಪೌರಾಣಿಕ ಕತೆಯ ಪ್ರಕಾರ ರಾಮ ರಾವಣನನ್ನು ಕೊಂದ ದಿನವನ್ನು ವಿಜಯದಶಮಿಯೆಂದು ಆಚರಿಸಲಾಗುವುದು.

ವಿಜಯದಶಮಿಯಂದು ಕೆಲವು ವಸ್ತುಗಳನ್ನು ನೋಡುವುದರಿಂದ ಅಥವಾ ಕೆಲ ಕಾರ್ಯ ಮಾಡುವುದರಿಂದ ಅದೃಷ್ಟ ಒಲಿಯಲಿದೆ ಎಂದು ನಂಬಲಾಗುವುದು. ಅವುಗಳೇನು ಎಂದು ನೋಡೋಣ ಬನ್ನಿ:

ನೀರಿನಲ್ಲಿ ಮೀನು ನೋಡಿದರೆ
ವಿಜಯದಶಮಿಯಂದು ನೀರಿನಲ್ಲಿ ಮೀನು ನೋಡಿದರೆ ಶುಭವೆಂದು ಪರಿಗಣಿಸಲಾಗಿದೆ. ಇದರಿಂದ ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರಾಗುವುದು ಎಂಬ ನಂಬಿಕೆ ಇದೆ.

ನೀಲಕಂಠ ಪಕ್ಷಿಯನ್ನು ನೋಡುವುದು
ದಸರಾ ಹಬ್ಬದಂದು ನೀಲಕಂಠ ಪಕ್ಷಿಯನ್ನು ನೋಡಿದರೆ ತುಂಬಾನೇ ಶುಭ ಎಂದು ಪರಿಗಣಿಸಲಾಗಿದೆ. ನಂಬಿಕೆಗಳ ಪ್ರಕಾರ ಇದನ್ನು ನೋಡಿದವರ ಅದೃಷ್ಟ ಹೆಚ್ಚುವುದು ಅಲ್ಲದೆ ಜೀವನದಲ್ಲಿ ಏಳಿಗೆ ಉಂಟಾಗುವುದು.

ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗುವುದು
ದಸರಾ ಹಬ್ಬದಂದು ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆಯುವುದರಿಂದ ಶುಭ ಉಂಟಾಗುವುದು. ಈ ದಿನ ರಾಮ ಹಾಗೂ ಶಿವನ ಆರಾಧನೆ ಮಾಡಬೇಕು.

ಹನುಮಂತನಿಗೆ ಪಾನ್ ಇಡುವುದು
ದಸರಾ ಹಬ್ಬದಂದು ರಾಮನ ಮಾತ್ರವಲ್ಲ ರಾಮನ ಭಕ್ತ ಹನುಮಂತನನ್ನು ಕೂಡ ಪೂಜಿಸಬೇಕು. ಹನುಮಂತನಿಗೆ ಪಾನ್ ಅರ್ಪಿಸುವುದರಿಂದ ಶುಭ ಉಂಟಾಗುವುದು. ಪಾನ್ ಪ್ರೀತಿ ಹಾಗೂ ಗೌರವ, ವಿಜಯದ ಸಂಕೇತವಾಗಿದೆ.



Click it and Unblock the Notifications