Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಸರಾ 2023: ವಿಜಯದಶಮಿಯಂದು ಇವುಗಳನ್ನು ನೋಡಿದರೆ ಅದೃಷ್ಟ
ಅಕ್ಟೋಬರ್ 24ರಂದು ವಿಜಯದಶಮಿಯನ್ನು ಸಡಗರದಿಂದ ಆಚರಿಸಲಾಗುತ್ತಿದೆ. ದುಷ್ಟಶಕ್ತಿಯ ವಿರುದ್ಧ ಸಾರಿದ ಜಯದ ಆಚರಣೆಯೇ ವಿಜಯದಶಮಿ. ದುರ್ಗಾ ದೇವಿ ಮಹಿಷಾಸುರ ಎಂಬ ಅಸುರನನ್ನು ಹತ್ಯೆ ಮಾಡಿದ ದಿನವೇ ವಿಜಯದಶಮಿ. ಪೌರಾಣಿಕ ಕತೆಯ ಪ್ರಕಾರ ರಾಮ ರಾವಣನನ್ನು ಕೊಂದ ದಿನವನ್ನು ವಿಜಯದಶಮಿಯೆಂದು ಆಚರಿಸಲಾಗುವುದು.

ವಿಜಯದಶಮಿಯಂದು ಕೆಲವು ವಸ್ತುಗಳನ್ನು ನೋಡುವುದರಿಂದ ಅಥವಾ ಕೆಲ ಕಾರ್ಯ ಮಾಡುವುದರಿಂದ ಅದೃಷ್ಟ ಒಲಿಯಲಿದೆ ಎಂದು ನಂಬಲಾಗುವುದು. ಅವುಗಳೇನು ಎಂದು ನೋಡೋಣ ಬನ್ನಿ:

ನೀರಿನಲ್ಲಿ ಮೀನು ನೋಡಿದರೆ
ವಿಜಯದಶಮಿಯಂದು ನೀರಿನಲ್ಲಿ ಮೀನು ನೋಡಿದರೆ ಶುಭವೆಂದು ಪರಿಗಣಿಸಲಾಗಿದೆ. ಇದರಿಂದ ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರಾಗುವುದು ಎಂಬ ನಂಬಿಕೆ ಇದೆ.

ನೀಲಕಂಠ ಪಕ್ಷಿಯನ್ನು ನೋಡುವುದು
ದಸರಾ ಹಬ್ಬದಂದು ನೀಲಕಂಠ ಪಕ್ಷಿಯನ್ನು ನೋಡಿದರೆ ತುಂಬಾನೇ ಶುಭ ಎಂದು ಪರಿಗಣಿಸಲಾಗಿದೆ. ನಂಬಿಕೆಗಳ ಪ್ರಕಾರ ಇದನ್ನು ನೋಡಿದವರ ಅದೃಷ್ಟ ಹೆಚ್ಚುವುದು ಅಲ್ಲದೆ ಜೀವನದಲ್ಲಿ ಏಳಿಗೆ ಉಂಟಾಗುವುದು.

ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗುವುದು
ದಸರಾ ಹಬ್ಬದಂದು ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆಯುವುದರಿಂದ ಶುಭ ಉಂಟಾಗುವುದು. ಈ ದಿನ ರಾಮ ಹಾಗೂ ಶಿವನ ಆರಾಧನೆ ಮಾಡಬೇಕು.

ಹನುಮಂತನಿಗೆ ಪಾನ್ ಇಡುವುದು
ದಸರಾ ಹಬ್ಬದಂದು ರಾಮನ ಮಾತ್ರವಲ್ಲ ರಾಮನ ಭಕ್ತ ಹನುಮಂತನನ್ನು ಕೂಡ ಪೂಜಿಸಬೇಕು. ಹನುಮಂತನಿಗೆ ಪಾನ್ ಅರ್ಪಿಸುವುದರಿಂದ ಶುಭ ಉಂಟಾಗುವುದು. ಪಾನ್ ಪ್ರೀತಿ ಹಾಗೂ ಗೌರವ, ವಿಜಯದ ಸಂಕೇತವಾಗಿದೆ.



Click it and Unblock the Notifications